ವಿಜಯಪುರ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕಾ ಆರೋಗ್ಯಾಧಿಕಾರಿಗಳ ಹಾಗೂ ವಿವಿಧ ನರ್ಸಿಂಗ್ ಕಾಲೇಜಗಳು ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಏರ್ಪಡಿಸಿದ ಜಿಲ್ಲಾಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆಯ ಜನಜಾಗೃತಿ ರ್ಯಾಲಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉತ್ತರ ಕರ್ನಾಟಕ ಉಪನಿರ್ದೇಶಕ ಡಾ|| ಚನ್ನಮ್ಮ ಕಟ್ಟಿ, ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಬಸವರಾಜ ಹುಬ್ಬಳಿ ರವರು ಜಂಟಿಯಾಗಿ ಹಸಿರು ನಿಶಾನೆ ತೋರಿಸಿ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉತ್ತರ ಕರ್ನಾಟಕ ಉಪನಿರ್ದೇಶಕ ಡಾ|| ಚನ್ನಮ್ಮ ಕಟ್ಟಿ ಅವರು ಮಾತನಾಡಿ ಮಿತಿಮೀರಿದ ಜನಸಂಖ್ಯೆ ದೇಶದ ಅಭಿವೃದ್ದಿಗೆ ಮಾರಕವಾಗಿದೆ. ಜನಸಂಖ್ಯೆ ನಿಯಂತ್ರಣಕ್ಕೆ ಜಾಗೃತಿ ಅತ್ಯವಶ್ಯಕವಾಗಿದೆ. ಪ್ರತಿಯೊಬ್ಬರಲ್ಲೂ ತಿಳುವಳಿಕೆ ಮೂಡಬೇಕು ಅಂದಾಗ ಮಾತ್ರ ಜನಸಂಖ್ಯೆ ನಿಯಂತ್ರಣ ಸಾಧ್ಯವಾಗುತ್ತದೆ ಎಂದು ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಬಸವರಾಜ ಹುಬ್ಬಳಿ ಅವರು ಮಾತನಾಡಿ, ದೇಶದಲ್ಲಿ ಪ್ರತಿ ವರ್ಷ ೧ ಕೋಟಿ ೫೫ ಲಕ್ಷ ಜನಸಂಖ್ಯೆ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಪ್ರತಿ ವರ್ಷ ೭ ಲಕ್ಷ ೭೫ ಸಾವಿರದಷ್ಟು ಜನಸಂಖ್ಯೆ ಹೆಚ್ಚವರಿಯಾಗುತ್ತಿದೆ. ಈ ವೇಗದಲ್ಲಿ ಜನಸಂಖ್ಯೆಯು ಬೆಳೆಯುತ್ತಿದ್ದರೆ ಭಾರತವು ಮುಂದಿನ ೩೫ ವರ್ಷಗಳಲ್ಲಿ ೨೦೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಲಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಸೂಕ್ತ ಜಾಗೃತಿ ಮೂಡಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ತಿಳುವಳಿಕೆ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಜನಜಾಗೃತಿ ರ್ಯಾಲಿಯು ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿ ಚೌಕ ಮಾರ್ಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಲಯಕ್ಕೆ ಬಂದು ಕಾರ್ಯಕ್ರಮ ಮುಕ್ತಾಯವಾಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ|| ರಾಜೇಶ್ವರಿ ಗೊಲಗೇರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|| ಕವಿತಾ ದೊಡ್ಡಮನಿ, ಜಿಲ್ಲಾ ಕುಷ್ಟರೋಗ ನಿರ್ಮೂಲನಾ ಅಧಿಕಾರಿ ಡಾ|| ಸಂಪತ್ತ ಗುಣಾರಿ, ತಾಲೂಕಾ ಆರೋಗ್ಯ ಅಧಿಕಾರಿ ಡಾ|| ಪರಶುರಾಮ ಹಿಟ್ನಳ್ಳಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ ಎಮ್ ಕೊಲೂರ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಹೊಸಮನಿ, ಶ್ರೀಮತಿ ರೇಖಾ ದಶವಂತ, ಸರ್ಕಾರಿ ನರ್ಸಿಂಗ್ ಕಾಲೇಜ ಬೋಧಕರು ಮತ್ತು ವಿವಿಧ ನರ್ಸಿಂಗ್ ಕಾಲೇಜಗಳ ಉಪನ್ಯಾಸಕರು ಹಾಗೂ ಇಲಾಖೆಯ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಯವರು ಉಪಸ್ಥಿತರಿದ್ದರು. ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಆರ್ ಬಾಗವಾನ ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

