ಬಸವನಬಾಗೇವಾಡಿ: ಬಹುತೇಕ ಗ್ರಾಮೀಣ ಭಾಗದಿಂದ ಬಂದವರೇ ಬದುಕಿನಲ್ಲಿ ಸಾಧನೆ ಮಾಡಿರುವದನ್ನು ಕಾಣುತ್ತೇವೆ. ಬದುಕಿನಲ್ಲಿ ಸಾಧಿಸುವ ಛಲ ಒಂದಿದ್ದರೆ ಖಂಡಿತ ಬದುಕಿನಲ್ಲಿ ಎದುರಾಗುವ ಎಲ್ಲ ಸಮಸ್ಯೆಗಳನ್ನು ಎದುರಿಸಿ ಒಂದಿಲ್ಲೊಂದು ಸಾಧನೆ ಮಾಡಲು ಸಾಧ್ಯ ಎಂದು ವಿಜಯಪುರ ಸೈನಿಕ ಶಾಲೆಯ ನಿವೃತ್ತ ಶಿಕ್ಷಕ ಡಾ.ಎಸ್.ಆರ್.ಹಿರೇಮಠ ಹೇಳಿದರು.
ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಮೊದಲು ತನ್ನನ್ನು ತಾನು ಪ್ರೀತಿಸಬೇಕು. ಆತ್ಮವಿಶ್ವಾಸದ ಬದುಕು ನಮ್ಮದಾಗಿದ್ದರೆ ಖಂಡಿತ ಏನಾದರೂ ಸಾಧನೆ ಮಾಡಲು ಸಾಧ್ಯ ಎಂದರು.
ಬಹುಭಾಷೆಯ ಜ್ಞಾನದೊಂದಿಗೆ ಏಕಾಗ್ರತೆ, ನಯ-ವಿನಯ, ಶ್ರದ್ಧೆ, ಗುರಿ ಇಟ್ಟುಕೊಂಡು ಗುರುವಿನ ಮಾರ್ಗದರ್ಶನದೊಂದಿಗೆ ವಿದ್ಯಾರ್ಥಿ ಜೀವನ ಮುನ್ನಡೆದರೆ ನೀವು ಮತ್ತು ನಿಮ್ಮ ಪಾಲಕರು ಕಂಡ ಕನಸು ನನಸಾಗುವಲ್ಲಿ ಯಾವ ಸಂದೇಹವಿಲ್ಲ. ಅದ್ಭುತ ಪ್ರತಿಭೆಗಳಾದ ವಿದ್ಯಾರ್ಥಿಗಳು ಭಾರತದ ಭವಿಷ್ಯತ್ತಿನ ಆಸ್ತಿಯಾಗಿದ್ದಾರೆ. ಬಂಥನಾಳದ ಸಂಗನಬಸವ ಸ್ವಾಮೀಜಿ, ಡಾ.ಫ.ಗು.ಹಳಕಟ್ಟಿ, ದಿ. ಬಿ.ಎಂ.ಪಾಟೀಲ ಅವರ ಅವಿರತ ಪರಿಶ್ರಮದಿಂದ ಬಿಎಲ್ಡಿಇ ಸಂಸ್ಥೆಯ ಹೆಮ್ಮರವಾಗಿ ಬೆಳೆದಿದೆ. ಇಂತಹ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಬದುಕನ್ನು ಸುಂದರಗೊಳಿಸಿಕೊಂಡು ಉತ್ತಮ ಜೀವನ ಮಾಡುವಂತಾಗಬೇಕೆಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಆರ್.ಎ.ಪವಾರ ಮಾತನಾಡಿ, ಸಂಸ್ಥೆಯು ವಿದ್ಯಾರ್ಥಿಗಳ ಪ್ರಗತಿಗಾಗಿ ಸಾಕಷ್ಟು ಸಹಾಯ-ಸಹಕಾರ ನೀಡುತ್ತಿದೆ. ಸಂಸ್ಥೆಯ ನಂಬಿಕೆ, ವಿಶ್ವಾಸವನ್ನು ಉಳಿಸಿಕೊಂಡು ಉತ್ತಮ ಸಾಧನೆ ಮಾಡಲು ವಿದ್ಯಾರ್ಥಿಗಳು ಮುಂದಾಗಬೇಕೆಂದರು.
ವೇದಿಕೆಯಲ್ಲಿ ಅಕ್ಕನಾಗಮ್ಮ ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ವ್ಹಿ.ವ್ಹಿ.ಅಪಸಂಗಿ, ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಇದ್ದರು. ಕಾರ್ಯಕ್ರಮದಲ್ಲಿ ಎಂ.ಕೆ.ಯಾಧವ, ಎ.ಪಿ.ದಂಡಾವತಿ, ಎಸ್.ಎಸ್.ನಾಯ್ಕೋಡಿ, ಎಂ.ಆರ್.ಮಮದಾಪುರ, ಟಿ.ವೈ.ಮಣ್ಣೂರ, ಎ.ಜಿ.ಪಾಟೀಲ,ಭರತಕುಮಾರ, ಲಕ್ಷ್ಮಣ ಬ್ಯಾಡಗಿ, ಸೋಹೆಲ್ ಮುಲ್ಲಾ ಇತರರು ಇದ್ದರು. ೨೦೨೩-೨೪ ನೇ ಸಾಲಿನಲ್ಲಿ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿ ಕಾಲೇಜು ಮತ್ತು ಸಂಸ್ಥೆಗೆ ಕೀರ್ತಿ ತಂದ ವಿದ್ಯಾರ್ಥಿಗಳಾದ ಸಾನಿಕಾ ಲಮಾಣಿ, ಅಕ್ಷತಾ ಕಲಕೇರಿ, ಬಸಮ್ಮ ಅವಟಿ, ಭಾಗ್ಯಶ್ರೀ ಮಾಮನಿ, ರಕ್ಷಿತಾ ಕರಾಡೆ ಅವರನ್ನು ಸನ್ಮಾನಿಸಲಾಯಿತು. ಸುಜಾತಾ ಕೂಡಗಿ ಪ್ರಾರ್ಥಿಸಿದರು. ಈರಣ್ಣ ಪತ್ತಾರ,ಮುಬಿನಾ ಮುಲ್ಲಾ ನಿರೂಪಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

