ಅಫಜಲಪುರ: ಢೆಂಗಿ ಮಹಾಮಾರಿ ಹೆಚ್ಚುತ್ತಿರುವ ಹಿನ್ನೆಲೆ ತಾಲೂಕಿನಾದ್ಯಂತ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗಿದ್ದು ಜನ ಇದರ ಲಾಭ ಪಡೆದುಕೊಳ್ಳಿ ಎಂದು ತಾ.ಪಂ ಇಒ ವೀರಣ್ಣ ಕವಲಗಿ ಸಲಹೆ ನೀಡಿದರು.
ಅವರು ತಾಲೂಕಿನ ಆನೂರ ಗ್ರಾಮದಲ್ಲಿ ಗ್ರಾ.ಪಂ ಆನೂರ, ತಾಪಂ ಅಫಜಲಪುರ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ನಡೆದ ಉಚಿತ ಆರೋಗ್ಯ ಶಿಬಿರದಲ್ಲಿ ಮಾತನಾಡುತ್ತಾ ತಾಲೂಕಿನಲ್ಲಿ ಢೆಂಗಿ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಗ್ರಾಮೀಣ ಭಾಗಗಳಲ್ಲಿ ನೈರ್ಮಲ್ಯ ಸಮಸ್ಯೆ ಬಾರದಂತೆ ತಡೆಯಲು ಗ್ರಾಮ ಪಂಚಾಯಿತಿಯವರಿಗೆ ಕಟ್ಟುನಿಟ್ಟಿನ ತಾಕೀತು ಮಾಡಲಾಗಿದೆ. ಜೊತಗೆ ಸಾರ್ವಜನಿಕರು ಕೂಡ ತಮ್ಮ ಮನೆಗಳ ಸುತ್ತಲು ಸ್ವಚ್ಚತೆ ಕಾಪಾಡಬೇಕು. ಯಾರಲ್ಲಾದರೂ ಅನಾರೋಗ್ಯದ ಲಕ್ಷಣಗಳು ಕಂಡಾಗ ವೈದ್ಯರನ್ನು ಸಂಪರ್ಕ ಮಾಡಿ ಸಲಹೆ ಪಡೆದುಕೊಳ್ಳಿ ಎಂದ ಅವರು ಇತ್ತಿಚಿನ ದಿನಗಳಲ್ಲಿ ಜನರಿಗೆ ಬಿಪಿ, ಶುಗರ್, ಹೃದ್ರೋಗ, ಕಿಡ್ನಿ ಖಾಯಿಲೆಗಳು ಹೆಚ್ಚು ಬಾಧಿಸುತ್ತಿವೆ. ಈ ಎಲ್ಲಾ ರೋಗಗಳು ಹೆಚ್ಚು ಹಣ ವ್ಯಯಿಸಿ ಚಿಕಿತ್ಸೆ ಪಡೆದುಕೊಳ್ಳುವಂತ ರೋಗಗಳಾಗಿವೆ. ಆದರೂ ಸರ್ಕಾರ ಬಡವರ ಅನುಕೂಲಕ್ಕಾಗಿ ಅನೇಕ ಖಾಯಿಲೆಗಳಿಗೆ ಉಚಿತವಾಗಿ ಚಿಕಿತ್ಸೆ ಕೊಡಿಸುತ್ತಿದೆ. ಆದರೂ ಜನ ತಮ್ಮ ಆರೋಗ್ಯದ ಕಾಳಜಿಯಿಂದ ಇಂತಹ ಆರೋಗ್ಯ ಶಿಬಿರಗಳಲ್ಲಿ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷ ನಿಂಗಣ್ಣ ಕಲಶೆಟ್ಟಿ, ಉಪಾಧ್ಯಕ್ಷೆ ಅನಸೂಬಾಯಿ ಬಬಲಾದ, ಮಾಜಿ ಗ್ರಾ.ಪಂ ಅಧ್ಯಕ್ಷ ದತ್ತು ಘಾಣೂರ, ಪಿಡಿಒ ಚಿದಾನಂದ ಆಲೆಗಾಂವ ಸೇರಿದಂತೆ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

