Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾನವೀಯತೆ ವಿಕಾಸಕ್ಕೆ ಪರಿಪೂರ್ಣತೆಯ ಶಿಕ್ಷಣ ಅಗತ್ಯ :ಬಂಡೆ
(ರಾಜ್ಯ ) ಜಿಲ್ಲೆ

ಮಾನವೀಯತೆ ವಿಕಾಸಕ್ಕೆ ಪರಿಪೂರ್ಣತೆಯ ಶಿಕ್ಷಣ ಅಗತ್ಯ :ಬಂಡೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿವೇಕಾನಂದರ ಶೈಕ್ಷಣಿಕ ತತ್ವವು ಸಾಮಾನ್ಯ ಜೀವನ ತತ್ವವನ್ನು ಆಧರಿಸಿದ್ದು, ಅದು ಜೀವನ ಕಟ್ಟುವ ವಿಚಾರಗಳ ಸಮೀಕರಣವಾಗಿದೆ. ಪ್ರತಿಯೊಬ್ಬರೂ ಪರಿಪೂರ್ಣತೆಯ ಶಿಕ್ಷಣ ಪಡೆದು ಮಾನವೀಯತೆಯ ವಿಕಾಸ ಹೊಂದಬೇಕು ಎಂದು ಸಾಹಿತಿ ಸಂತೋಷ ಬಂಡೆ ಹೇಳಿದರು.
ಅವರು ನಗರದ ಎಸ್ ಎಸ್ ಪ್ರೌಢ ಶಾಲೆಯಲ್ಲಿ ಮಂಗಳವಾರದಂದು ಭಾರತ ಯುವ ವೇದಿಕೆ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಹಮ್ಮಿಕೊಂಡ ‘ಪ್ರಸ್ತುತ ಶಿಕ್ಷಣದಲ್ಲಿ ವಿವೇಕಾನಂದರ ವಿಚಾರಗಳು’-ಚಿಂತನಗೋಷ್ಠಿ ಹಾಗೂ ‘ಮನ-ಮನಕ್ಕೂ ವಿವೇಕ ಅಭಿಯಾನ’ ಮತ್ತು ‘ರಾಷ್ಟ್ರ ಜಾಗೃತಿ ಪುಸ್ತಕ ವಿತರಣಾ ಸಮಾರಂಭ’ದಲ್ಲಿ ವಿಶೇಷ ಉಪನ್ಯಾಸಕರಾಗಿ ಮಾತನಾಡಿದರು.
ಶಿಕ್ಷಣವು ವಿದ್ಯಾರ್ಥಿಗಳ ಮನಸ್ಸಿನಲ್ಲಿ ದೇಶಭಕ್ತಿ ಮತ್ತು ರಾಷ್ಟ್ರೀಯತೆಯ ಬಲವಾದ ಭಾವನೆಯನ್ನು ಬೆಳೆಸಬೇಕು. 
ಶಿಕ್ಷಣವು ಸೃಜನಶೀಲತೆ, ಸ್ವಂತಿಕೆ, ಶ್ರೇಷ್ಠತೆಗೆ ಒತ್ತು ನೀಡಿ, ಆತ್ಮವಿಶ್ವಾಸ ಬೆಳೆಸುವಂತಾಗಬೇಕು ಎಂಬ ವಿವೇಕಾನಂದರ ಚಿಂತನೆ ಇಂದಿಗೂ ಪ್ರಸ್ತುತವಾಗಿದೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆಡಳಿತಾಧಿಕಾರಿ ಪ್ರೊ.ಆಯ್ ಎಸ್ ಕಾಳಪ್ಪನವರ, ಶಿಕ್ಷಣವು ಆತ್ಮವಿಶ್ವಾಸವನ್ನು ಹೆಚ್ಚಿಸಬೇಕು. ಅದು ಎಲ್ಲರಲ್ಲಿ ಧೈರ್ಯ ತುಂಬಿ, ಜೀವನದ ಗಹನ ಸವಾಲುಗಳನ್ನು ಎದುರಿಸಬಲ್ಲ ಶಕ್ತಿಯಾಗಬೇಕು ಎಂಬ ವಿವೇಕಾನಂದರ ಕನಸನ್ನು ನನಸು ಮಾಡುವತ್ತ ನಾವೆಲ್ಲರೂ ಸಂಕಲ್ಪ ಮಾಡಬೇಕಾಗಿದೆ ಎಂದು ಹೇಳಿದರು.
ಉಪಪ್ರಾಚಾರ್ಯ ಕೆ ಬಿ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಲಿತವ ನಾಡಿಗೆ ಬೆಳಕಾಗಬೇಕು. ದೇಶದ ಕಠಿಣ ಸಂದರ್ಭಗಳಲ್ಲಿ ಜೊತೆಯಾಗಿ ನಿಲ್ಲಬಲ್ಲ ಸಾಮರ್ಥ್ಯ ತೋರಿದಾಗ ವಿವೇಕಾನಂದರ ಶೈಕ್ಷಣಿಕ ವಿಚಾರ ಅನುಪಾಲಿಸಿದಂತೆ ಆಗುತ್ತದೆ ಎಂದು ಹೇಳಿದರು.
ಫೌಂಡೇಶನ್ ಅಧ್ಯಕ್ಷ ಸುನೀಲ ಜೈನಾಪುರ ಮಾತನಾಡಿ,
ವಿವೇಕಾನಂದರ ಶೈಕ್ಷಣಿಕ ಆಲೋಚನೆ ಸ್ವಾವಲಂಬಿ ಭಾರತವನ್ನು ನಿರ್ಮಿಸಲು ಮಾರ್ಗಸೂಚಿಯಾಗಿದೆ. ಸಾಮರಸ್ಯದಿಂದ ಸಂಯೋಜಿಸಿದ ಶಿಕ್ಷಣ ಪದ್ದತಿ ಅನುಸರಿಸಿದಾಗ ಸುಸ್ಥಿರ ದೇಶ ನಿರ್ಮಾಣ ಸಾಧ್ಯ ಎಂದು ಹೇಳಿದರು.
ಫೌಂಡೇಶನ್ ವತಿಯಿಂದ ರಾಷ್ಟ್ರ ಜಾಗೃತಿ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ಪ್ರಾಚಾರ್ಯ ಡಾ.ಜಿ ಡಿ ಅಕಮಂಚಿ ವಿತರಿಸಿ, ಮಾತನಾಡಿ, ಸ್ವಾಮಿ ವಿವೇಕಾನಂದರ ಚಿಂತನೆಗಳು ಎಲ್ಲ ವರ್ಗ, ಜಾತಿ, ಧರ್ಮದ ಜನರಿಗೆ ಸದಾ ಪ್ರೇರಣೆ ನೀಡುತ್ತವೆ ಎಂದು ಹೇಳಿದರು.
ಉಪನ್ಯಾಸಕ ಅಮರೇಶ ಸಾಲಕ್ಕಿ ಕಾರ್ಯಕ್ರಮ ನಿರ್ವಹಿಸಿದರು. ಡಿ ಕೆ ರಾಠೋಡ ಸ್ವಾಗತಿಸಿದರು. ಸಂತೋಷ ಹೆಗಡೆ ವಂದಿಸಿದರು.
ಶಿಕ್ಷಕರಾದ ಬಸವರಾಜ ಬಿರಾದಾರ, ಎಸ್ ಬಿ ನಾಲವರ, ಎಸ್ ಎಸ್ ಲಮಾಣಿ, ತ್ರಿವೇಣಿ ಜಾನಕರ ಹಾಗೂ ಸತೀಶ ನಾಗಠಾಣ, ಶಶಿಕಾಂತ ಸಂಗಣ್ಣವರ ಸೇರಿದಂತೆ ಸಂಸ್ಥೆಯ ಶಿಕ್ಷಕ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.