ಬಸವನಬಾಗೇವಾಡಿ: ಪಟ್ಟಣದಲ್ಲಿ ಹೂಗಾರ ಸಮಾಜ ಬಾಂಧವರು ತಮ್ಮ ಸಮಾಜದ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಅವರಿಗೆ ಗುರುವಾರ ಸಲ್ಲಿಸಿದರು.
ಅವರು ಸಲ್ಲಿಸಿದ ಮನವಿಯಲ್ಲಿ ರಾಜ್ಯದಲ್ಲಿ ವಿವಿಧ ಉಪನಾಮಗಳಿಂದ ಕರೆಯಲ್ಪಡುವ ಹೂಗಾರ, ಜೀರ, ಪೂಜಾರ, ಪೂಲಾರಿ, ಮಾಲಿ, ಮಾಲಗಾರ, ಗರವ್, ಹೂವಾಡಿಗ, ಪುಷ್ಪದತ್ತ, ತಾಂಬೋಳಿ ಸಮಾಜವು ಅತ್ಯಂತ ಹಿಂದುಳಿದ ಸಮಾಜವಾಗಿದೆ. ಸಮಾಜದ ಅಭಿವೃದ್ಧಿಗೆ ಕಳೆದ ೪೦ ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದೆ. ಯಾವುದೇ ಸರ್ಕಾರ ಸಮಾಜದ ಹೋರಾಟಕ್ಕೆ ಸ್ಪಂದಿಸಿರಲಿಲ್ಲ. ೧೫.೦೭.೨೦೨೨ ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಾವಿರಾರು ಹೂಗಾರ ಸಮಾಜ ಬಾಂಧವರು ಬೃಹತ್ ಪ್ರತಿಭಟನೆ ಮಾಡಿದಾಗ ೨೧.೦೭.೨೦೨೩ ರಂದು ಸರ್ಕಾರವು ಅಧಿಕೃತವಾಗಿ ಕರ್ನಾಟಕ ಮಾಲಿ, ಮಾಲಗಾರ ಮತ್ತು ಹೂಗಾರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿತ್ತು. ಆದರೆ ಕಳೆದ ಬಜೆಟ್ನಲ್ಲಿ ಈ ಅಭಿವೃದ್ಧಿ ನಿಗಮಕ್ಕೆ ಯಾವುದೇ ಅನುದಾನ ಮೀಸಲಿಟ್ಟಿರುವುದಿಲ್ಲ. ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಹೂಗಾರ ಸಮಾಜದ ಅಭಿವೃದ್ಧಿ ನಿಗಮಕ್ಕೆ ರೂ.೧೦೦ ಕೋಟಿ ಅನುದಾನ ಮೀಸಲಿಟ್ಟು ಹೂಗಾರ ಸಮಾಜದ ಯಾವುದೇ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸಮಾಜದ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕು. ನಮ್ಮ ಸಮಾಜದ ಅಭಿವೃದ್ಧಿಗೆ ನಿಗಮಕ್ಕೆ ರೂ.೧೦೦ ಕೋಟಿ ಅನುದಾನ, ನಿಗಮದ ಅಧ್ಯಕ್ಷರ ನೇಮಕ ಈ ಎರಡು ಬೇಡಿಕೆಗಳನ್ನು ಕೂಡಲೇ ಸರ್ಕಾರ ಈಡೇರಿಸಬೇಕು. ಇಲ್ಲದೇ ಹೋದರೆ ಮುಂಬರುವ ಜುಲೈ ೨೫ ರಂದು ಬೆಂಗಳೂರಿನ ಸ್ವತಂತ್ರ್ಯ ಉದ್ಯಾನವನದಲ್ಲಿ ರಾಜ್ಯದ ಸಮಸ್ತ ಹೂಗಾರ ಸಮಾಜ ಬಾಂಧವರು ಅಹೋರಾತ್ರಿ ಧರಣಿ ನಡೆಸುತ್ತಾರೆ ಎಂದು ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಹೂಗಾರ ಸಮಾಜದ ಸಂಘದ ಗೌರವಾಧ್ಯಕ್ಷ ಎಸ್.ಆರ್.ಹೂಗಾರ, ತಾಲೂಕಾಧ್ಯಕ್ಷ ಮಲ್ಲು ಜೀರ, ಶೇಖಪ್ಪ ಹೂಗಾರ, ಬಸವರಾಜ ಹೂಗಾರ, ಎನ್.ಎಸ್.ಹೂಗಾರ, ಈರಣ್ಣ ಹೂಗಾರ, ಬಿ.ಎಸ್.ಹೂಗಾರ, ಪವಾಡೆಪ್ಪ ಹೂಗಾರ, ಆನಂದ ಜೀರ, ಸುರೇಶ ಹೂಗಾರ, ಬಸವರಾಜ ಬಿ.ಹೂಗಾರ, ಸಿದ್ದು ಪೂಜಾರಿ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

