Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾತಿ-ಧರ್ಮಗಳ ಸಂಕೋಲೆ ಮೀರಿ ಅಸ್ಮಿತೆ ಸೃಷ್ಟಿಸಿಕೊಂಡ ಹಬ್ಬ ಮೊಹರಂ
(ರಾಜ್ಯ ) ಜಿಲ್ಲೆ

ಜಾತಿ-ಧರ್ಮಗಳ ಸಂಕೋಲೆ ಮೀರಿ ಅಸ್ಮಿತೆ ಸೃಷ್ಟಿಸಿಕೊಂಡ ಹಬ್ಬ ಮೊಹರಂ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

– ಎಚ್.ಎಸ್.ನಡುವಿನಮನಿ
ತಾಳಿಕೋಟಿ: ತಾಲ್ಲೂಕಿನ ತಮದಡ್ಡಿ ಗ್ರಾಮದಲ್ಲಿ ಮೂಹರಂ ಕೊನೆಯ ದಿನದಂದು ಸರ್ವ ಧರ್ಮೀಯರು ಪಾಲ್ಗೊಂಡು ಅತ್ಯಂತ ವಿಜ್ರಂಭಣೆಯಿಂದ ಅರ್ಥ ಪೂರ್ಣವಾಗಿ ಮೊಹರಂ ಆಚರಿಸಲಾಯಿತು.
ಈ ಸಂದರ್ಭದಲ್ಲಿ ರಾಜೇಸಾ ಮುಲ್ಲಾ ಇಬ್ರಾಹಿಂ ಮುಲ್ಲಾ, ನಬೀಸಾ ಮುಲ್ಲಾ, ದಸಗೀರ ಮುಲ್ಲಾ ಮೈನೂ, ಸಲಿಮ್ ಮುಲ್ಲಾ , ಸಾಹೇಬಗೌಡ ಯಾದಗಿರಿ, ಮಹಮ್ಮದ್ ಹಿರೂರ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ ಬಿರಾದಾರ ಹಾಗೂ ಗ್ರಾಮದ ಮುಖಂಡರು ಹಾಗೂ ಯುವಜನ ಉಪಸ್ಥಿತರಿದ್ದರು.
ಮೊಹರಂ ಹಿನ್ನೆಲೆ: ಏಳನೇ ಶತಮಾನದಲ್ಲಿ, ಮಹಮದ್ ಪೈಗಂಬರರ ಮೊಮ್ಮಕ್ಕಳಾದ ಹುಸೇನ್‍ ಹಾಗೂ ಅವರ ಸಂಗಡಿಗರು ಯಜೀದನೆಂಬುವವನ ವಿರುದ್ಧ, ಕರ್ಬಲಾ ಮೈದಾನದಲ್ಲಿ ಲಡಾಯಿ ಮಾಡುತ್ತ ಜೀವಬಿಟ್ಟರು. ಇದರ ಶೋಕಾಚರಣೆಯ ಭಾಗವಾಗಿ ಮೊಹರಂ ಆಚರಣೆ ಶುರುವಾಯಿತು. ಕರ್ಬಲಾ ವೀರರ ಸಾವು ದಾರುಣ ಸಂಗತಿಯಾಗಲು ಕಾರಣ, ಅವರ ತಲೆಕಡಿದು ಮೆರವಣಿಗೆ ಮಾಡಲಾಯಿತು. ಜತೆಯಿದ್ದ ಎಳೆಗೂಸುಗಳು ಕುಡಿಯಲು ನೀರಿಲ್ಲದೆ ಪರಿತಪಿಸುತ್ತ ಸತ್ತರು. ಮಹಿಳೆಯರು ದುಃಖದಿಂದ ಪರಿತಪಿಸಿದರು. ಇದನ್ನು ಜನಪದರು “ಧರಮಕ ಸತ್ತವರಾ ಕೋಟಿಗೊಬ್ಬ ಜನರಾ, ಆರಾಣ್ಯಾದಾಗ ಅವರಾ ಕಾಣದ ಮೂರು ದಿವಸ ನೀರಾ, ಕುಡದಾರೋ ಕಣ್ಣೀರಾ ಮಕ್ಕಳು ಹುಡುಗರು ಹೆಂಗಸರಾ” ಎಂದು ಹಾಡಿರುವುದುಂಟು. ಇಂತಹ ದುಗುಡದ ನೆನಪಿನಲ್ಲಿ ಹುಟ್ಟಿದ ಧಾರ್ಮಿಕ ಆಚರಣೆಯೊಂದು ಕರ್ನಾಟಕದಲ್ಲಿ ಸಾಂಸ್ಕೃತಿಕ ಆಚರಣೆಯಾಗಿ ರೂಪಾಂತರ ಪಡೆಯಿತು. ಉತ್ತರ ಕರ್ನಾಟದಲ್ಲಿ ಎಲ್ಲ ಧರ್ಮದ ಜಾತಿಯ ಜನರು ಒಟ್ಟಾಗಿ ಆಚರಿಸುವ ಊರಹಬ್ಬವಾಯಿತು. ಹೀಗಾಗಿ ಮುಸ್ಲಿಮರೇ ಇಲ್ಲದ ನೂರಾರು ಊರುಗಳಲ್ಲೂ ಮೊಹರಂ ನಡೆಯುತ್ತದೆ.
ಮೊಹರಂನಲ್ಲಿ ಶೋಕಗೀತೆಯ ರಚನೆ, ಹಾಡಿಕೆ, ಕುಣಿತ, ವೇಷಗಾರಿಕೆ, ಮೆರವಣಿಗೆ, ವಿಶೇಷ ಆಹಾರಗಳ ಆಯಾಮಗಳಿವೆ. ಇದರ ಫಲವಾಗಿ ಕರ್ನಾಟಕದಲ್ಲಿ ಹಾಡು ಕಟ್ಟುವ ಸಾವಿರಾರು ಶಾಹಿರರೂ ಗಾಯಕರೂ ಇದ್ದಾರೆ. ಭಡಂಗ್ ಅಥವಾ ಹರಕೆವೇಷ ಸೊಂಟಕ್ಕೆ ಗಂಟೆ ಕಟ್ಟಿ, ತಲೆಗೆ ಲಾಲಿಕೆಯಾಕಾರದ ಅಲಂಕೃತ ಟೋಪಿ ಧರಿಸುತ್ತಾರೆ. ಮೊಹರಂ ಆಚರಣೆಯ ದಿನಗಳಲ್ಲಿ ಮುಸ್ಲಿಮೇತರರು ಲಾಡಿ ಧರಿಸಿ ಫಕೀರರಾಗುವ ಪದ್ಧತಿಯೂ ಇದೆ.

ಬಹುತ್ವ ಪ್ರಜ್ಞೆ ನಮ್ಮ ಸಂಸ್ಕೃತಿಯ ವೈಶಿಷ್ಟ್ಯ

ಕರ್ನಾಟಕ ಸಂಸ್ಕೃತಿಯ ವೈಶಿಷ್ಟ್ಯವೆಂದರೆ ಬಹುತ್ವ ಪ್ರಜ್ಞೆ. ಈ ಪ್ರಜ್ಞೆಯು ಪುರಾಣ ಮತ್ತು ಇತಿಹಾಸವನ್ನು ಬೆರೆಸುತ್ತದೆ; ಬೇರೆ ಬೇರೆ ಮತಧರ್ಮದ ಕಥನಗಳಲ್ಲಿರುವ ಸಮಾನ ಅಂಶಗಳನ್ನು ಒಂದೆಡೆ ಜೋಡಿಸುತ್ತದೆ. ಇದು ಭಾರತದ ನಿಜವಾದ ಸಾಂಸ್ಕೃತಿಕ ಪ್ರತಿಭೆ. ಮಧ್ಯಕಾಲೀನ ದೊರೆಗಳು ರಾಜ್ಯವಿಸ್ತರಣೆಗಾಗಿ ಮಾಡಿದ ರಾಜಕೀಯ ಯುದ್ಧಗಳನ್ನೇ ಇರಿಸಿಕೊಂಡು ಚರಿತ್ರೆ ಮತ್ತು ವರ್ತ ಮಾನವನ್ನು ನೋಡುವವರಿಗೆ, ಜನ ಕಟ್ಟುವ ಈ ಸೃಜನಶೀಲ ಪರಂಪರೆ ತಿಳಿಯುವುದಿಲ್ಲ. ಮೊಹರಂ ತಾಳಿರುವ ಬಹುರೂಪವು ಸಂಪ್ರದಾಯವಾದಿಗಳನ್ನು ಕಂಗೆಡಿಸುತ್ತದೆ. ‘ಇದೆಂತಹ ಧರ್ಮ; ಎಲ್ಲ ಕಲಬೆರಕೆಯಾಗಿದೆ’ ಎಂದವರು ಗೊಣಗುವರು. ಆದರೆ ಸಾಮಾನ್ಯ ಜನ ಧರ್ಮ, ಜಾತಿಗಳನ್ನು ಮೀರಿ ಸೃಷ್ಟಿಸಿಕೊಂಡಿರುವ ಅಸ್ಮಿತೆಯಾಗಿ ಮೊಹರಂ ರೂಪುಗೊಂಡಿದೆ. ‘ಪ್ರಧಾನ’ ಧರ್ಮಗಳು ಸಂಘರ್ಷಕ್ಕೆ ಕಾಲು ಕೆರೆಯುತ್ತಿವೆ; ಪರಸ್ಪರ ಸಂವಾದ ಮಾಡುವ ಬಾಗಿಲು ಕಿಟಕಿಗಳನ್ನು ಮುಚ್ಚಿಕೊಳ್ಳುತ್ತಿವೆ. ಇಂತಹ ಸನ್ನಿವೇಶದಲ್ಲಿ, ಧರ್ಮಗಳ ನಡುವೆ, ಸಂಸ್ಕೃತಿಗಳ ನಡುವೆ ಸಂವಾದ ಸಾಧ್ಯವಿದೆ ಎಂದು ಮೊಹರಂ ತೋರಿಸಿಕೊಡುತ್ತದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.