ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ ಇವರ ಸಹಯೋಗದಲ್ಲಿ ಜುಲೈ ೨೧ ರಂದು ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಆಯೋಲಾಗಿದ್ದು ಅಂದು ಬೆಳಗ್ಗೆ ೯.೩೦ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಹನುಮಂತರಾಯ ರಂಗಮಂದಿರದವರೆಗೆ ಹಡಪದ ಅಪ್ಪಣ್ಣ ಭಾವಚಿತ್ರ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ ೧೦:೩೦ಕ್ಕೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ವಿಜಯಪುರ ನಗರದ ಮತಕ್ಷೇತ್ರದ ಶಾಸಕರಾದ ಬಸನಗೌಡ ಆರ್ ಪಾಟೀಲ್ (ಯತ್ನಾಳ) ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ್, ವಿಧಾನ ಪರಿಷತ್ನ ಶಾಸಕರು ಹಾಗೂ ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ-೨ ಪ್ರಕಾಶ ಬಿ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಅಪ್ಪಾಜಿ ಸಿ. ಎಸ್ ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ರಾಜ್ಯ ಸಭಾ ಸಂಸದರಾದ ಸುಧಾಮೂರ್ತಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಹಣಮಂತ ಆರ್. ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ಮಹಾನಗರ ಪಾಲಿಕೆ ಮೇಯರ್ ಮಹೇಜಬಿನ್ ಹೊರ್ತಿ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತಾ ನಾಯಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕನಾನ್ ಅಬ್ದುಲ್ ಹಮೀದ್ ಮುಶ್ರಿಫ್, ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಭಾಗವಹಿಸಲಿದ್ದಾರೆ.
ಶರಣರಾದ ಭೀಮಾಶಂಕರ ಹಡಪದ ವಿಶೇಷ ಉಪನ್ಯಾಸ ನೀಡಲಿದ್ದು, ಮಂಜುಳಾ ಹಿಪ್ಪರಗಿ ಸುಗಮ ಸಂಗೀತ ಹಾಗೂ ವಚನ ಗಾಯನ ನಡೆಸಿಕೊಡಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

