ಟಕ್ಕಳಕಿ & ಸಿದ್ಧಾಪುರ (ಕೆ) ಗ್ರಾಪಂಗೆ ಜಿಪಂ ಮುಖ್ಯ ಲೆಕ್ಕಾಧಿಕಾರಿ ಭೇಟಿ, ಪರಿಶೀಲನೆ
ತಿಕೋಟಾ: ತಾಲೂಕಿನ ಟಕ್ಕಳಕಿ & ಸಿದ್ಧಾಪುರ (ಕೆ) ಗ್ರಾಮ ಪಂಚಾಯತಿಗೆ ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ ರವರು ಭೇಟಿ ನೀಡಿ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು.
ಆರಂಭದಲ್ಲಿ ಟಕ್ಕಳಕಿ ಗ್ರಾಮದ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಭೇಟಿ ನೀಡಿ ಗ್ರಾಮ ಪಂಚಾಯತಿ ಅನುಷ್ಠಾನ ಮಾಡುವ ಮಹಾತ್ಮ ಗಾಂಧಿ ನರೇಗಾ ಯೋಜನೆ, ಸ್ವಚ್ಛ ಭಾರತ ಯೋಜನೆ, ಎನ್.ಆರ್.ಎಲ್.ಎಮ್ ಸೇರಿ ಎಲ್ಲ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು ಗ್ರಾಮ ಪಂಚಾಯತಿ ವತಿಯಿಂದ ಅನುಷ್ಠಾನ ಮಾಡುವ ಎಲ್ಲ ಯೋಜನೆಗಳನ್ನು ಪರಿಣಾಣಮಕಾರಿಯಾಗಿ ಅನುಷ್ಠಾನ ಮಾಡುವದರ ಜೊತೆಗೆ ಅರ್ಹ ಫಲಾನುಭವಿಗಳಿಗೆ ಅವಕಾಶ ನೀಡಲು ತಿಳಿಸಿದರು. ಗ್ರಾಮದಲ್ಲಿ ಸ್ವಚ್ಛತೆ, ನೈರ್ಮಲ್ಯ ಕಾಪಾಡುವಂತೆ ಜೊತೆಗೆ ಯಾವದೇ ಸ್ಥಳದಲ್ಲಿ ತ್ಯಾಜ್ಯ ನೀರು ಸಂಗ್ರಹವಾಗದಂತೆ ಎಚ್ಚರಿಕೆ ಕ್ರಮ ಕೈಗೊಳ್ಳಲು ತಿಳಿಸಿದರು. ನಂತರ ಸರಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಧ್ಯಾಹ್ನದ ಬಿಸಿಯೂಟವನ್ನು ಪರಿಶೀಲನೆ ಮಾಡಿದರು. ಬಿಸಿಯೂಟದಲ್ಲಿ ಹಾಗೂ ಅಡುಗೆ ಕೋಣೆಯಲ್ಲಿ ಅತ್ಯಂತ ಹೆಚ್ಚಿನ ಸ್ವಚ್ಛತೆ ಕಾಪಾಡಲು ಶಿಕ್ಷಕರಿಗೆ ಹಾಗೂ ಅಡುಗೆ ಸಹಾಯಕರಿಗೆ ಸೂಚನೆ ನೀಡಿದರು. ನಂತರ ಶಾಲೆಯ ಸಂಪೂರ್ಣ ಆವರಣವನ್ನು ಸ್ವಚ್ಛತೆಯಿಂದ ಕಾಪಾಡುವದರ ಜೊತೆಗೆ ಎಲ್ಲಿಯೂ ನೀರು ನೀಲದಂತೆ ವ್ಯವಸ್ಥೆ ಮಾಡಲು ತಿಳಿಸಿದರು. ನಂತರ ಶಾಲಾ ಆವರಣದಲ್ಲಿರುವ ಗ್ರಂಥಾಲಯ ಹಾಗೂ ಕೂಸಿನ ಮನೆ ಪರಿಶೀಲನೆ ನಡೆಸಿದರು. ಕೂಸಿನ ಮನೆ & ಗ್ರಂಥಾಲಯದ ಕುರಿತು ಗ್ರಾಮದಲ್ಲಿ ವ್ಯಾಪಕ ಪ್ರಚರ ಮಾಡಿ ಎಂದು ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಸಿದ್ಧಾಪುರ (ಕೆ) ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಭೇಟಿ ನೀಡಿ ವಿವಿಧ ಯೋಜನೆಯ ಕಡತಗಳನ್ನು ಪರಿಶೀಲನೆ ನಡೆಸಿ, ಎಲ್ಲ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ತಿಳಿಸಿದರು.
ನಂತರ ಮಾತನಾಡಿದ ಅವರು, ಎಲ್ಲಡೇ ಡೆಂಗ್ಯೂ ಹೆಚ್ಚಾಗಿ ಕಾಣಿಸುತ್ತಿದೆ ಹೀಗಾಗಿ ಗ್ರಾಮದಲ್ಲಿ, ವಸತಿ ನಿಲಯಗಳಲ್ಲಿ, ಶಾಲೆ-ಅಂಗನವಾಡಿ ಸಹಿತ ಯಾವದೇ ಸ್ಥಳದಲ್ಲಿ ನೀರು ನೀಲದಂತೆ ಕ್ರಮ ವಹಿಸಿ ಎಂದರು. ಶಾಲಾ ಅಡುಗೆ ಕೋಣೆಯಲ್ಲಿ ಬಳಸಿದ ತ್ಯಾಜ್ಯ ನೀರು ಸರಾಳವಾಗಿ ಹೊರಗಡೆ ಹೋಗುವಂತೆ ವ್ಯವಸ್ಥೆ ಮಾಡಬೇಕು.
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ, ಟಕ್ಕಳಕಿ ಪಿಡಿಓ ಶ್ರೀಮತಿ ಅಕ್ಕಮಹಾದೇವಿ ಪವಾರ, ಸಿದ್ಧಾಪುರ (ಕೆ) ಪಿಡಿಓ ಶ್ರೀಮತಿ ಪದ್ಮಿನಿ ಬಿರಾದಾರ ಸೇರಿದಂತೆ ಎರಡು ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರು & ಸಿಬ್ಬಂದಿಗಳು ಹಾಜರಿದ್ದರು.

