ಸಿಂದಗಿ: ಕರ್ನಾಟಕ ಸರಕಾರ ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.೫೦ ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ.೭೫ ಮೀಸಲಾತಿ ನಿಗದಿಪಡಿಸುವ ಕರಡು ಮಸೂದೆಗೆ ಕರ್ನಾಟಕದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿರುವುದನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ಕರ್ನಾಟಕ ರಾಜ್ಯ ಸಮಿತಿಯು ಸ್ವಾಗತಿಸುತ್ತದೆ. ಆದರೆ ಖಾಸಗಿ ಕಂಪೆನಿಗಳ ಆಕ್ಷೇಪದ ನೆಪವೊಡ್ಡಿ ಸ್ವತಃ ಸರಕಾರವೇ ಮಸೂದೆಯನ್ನು ತಡೆ ಹಿಡಿದಿರುವುದನ್ನು ಬಲವಾಗಿ ಖಂಡಿಸುತ್ತದೆ ಎಂದು ರಾಜ್ಯ ಸಮಿತಿ ಸದಸ್ಯ ರಮೇಶ ಸಾಸಾಬಾಳ ಹೇಳಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸ್ಥಳೀಯರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಸರೋಜಿನಿ ಮಹಿಷಿ ಆಯೋಗ ವರದಿ ನೀಡಿ ಹಲವು ದಶಕಗಳೇ ಕಳೆದಿವೆ. ಹತ್ತಾರು ವರ್ಷಗಳಿಂದ ಡಿವೈಎಫ್ಐ ಸೇರಿದಂತೆ ನಾಡಿನ ಜನಪರ ಸಂಘಟನೆಗಳು ಸ್ಥಳೀಯರಿಗೆ ಉದ್ಯೋಗ ಖಾತ್ರಿಪಡಿಸಲು ಒತ್ತಾಯಿಸಿ ರಾಜ್ಯಾದ್ಯಂತ ಹೋರಾಟಗಳನ್ನು ನಡೆಸುತ್ತಲೇ ಬಂದಿವೆ. ಇದೀಗ ಕರ್ನಾಟಕ ಸರಕಾರ ಸ್ಥಳೀಯರಿಗೆ ಉದ್ಯೋಗ ಒದಗಿಸುವ ಮಸೂದೆ ಮಂಡಿಸಲು ಮುಂದಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿರುವ ಖಾಸಗಿ ಕಂಪೆನಿಗಳ ನಡೆಯು ಕರ್ನಾಟಕದ ಜನರಿಗೆ ಅದರಲ್ಲೂ ಉದ್ಯೋಗಕ್ಕಾಗಿ ಹಂಬಲಿಸುತ್ತಿರುವ ರಾಜ್ಯದ ಯುವಜನರಿಗೆ ಮಾಡುತ್ತಿರುವ ಮಹಾದ್ರೋಹವಾಗಿದೆ.
ಆಡಳಿತಾತ್ಮಕ ಹುದ್ದೆಗಳಲ್ಲಿ ಕನಿಷ್ಠ ಶೇ.೭೫ ಹಾಗೂ ಆಡಳಿತಾತ್ಮಕವಲ್ಲದ (ಸಿ ಮತ್ತು ಡಿ ದರ್ಜೆಯ) ಎಲ್ಲ ಹುದ್ದೆಗಳಲ್ಲಿ ಶೇ.೧೦೦ ಸ್ಥಳೀಯರಿಗೆ ಅವಕಾಶ ಸಿಗುವಂತೆ ಕಾಯಿದೆ ಮಾಡುವಂತೆ ಆಗ್ರಹಿಸುತ್ತದೆ. ಪ್ರಸ್ತುತ ಕಾನೂನು ಸರಿಯಾಗಿ ಪಾಲನೆಯಾಗದೇ ಇದ್ದರೆ ಅಥವಾ ಕಾನೂನನ್ನು ಉಲ್ಲಂಘಿಸಿದರೆ ಕನಿಷ್ಠ ೧೦,೦೦೦ ರೂ.ನಿಂದ ಗರಿಷ್ಠ ೨೫,೦೦೦ ರೂ.ವರೆಗೆ ಅತ್ಯಂತ ಕಡಿಮೆ ದರದ ದಂಡವನ್ನು ನಿಗದಿಪಡಿಸಲಾಗಿದೆ. ಕಾನೂನಿನ ಉಲ್ಲಂಘನೆ ಮುಂದುವರೆದರೆ ದಂಡದ ಮೊತ್ತವನ್ನು ೧ಲಕ್ಷ ರೂ.ವರೆಗೆ ಹೆಚ್ಚಿಸಬೇಕು. ಈ ಕಾನೂನು ಉಲ್ಲಂಘಿಸಿ ಉದ್ಯೋಗ ನಿರಾಕರಿಸಿದರೆ ಅಂತಹ ಅಪರಾಧಕ್ಕಾಗಿ ಜೈಲು ಶಿಕ್ಷೆಯಂತಹ ಕಠಿಣ ಕ್ರಮವನ್ನು ಸರಕಾರ ನಿಗದಿಪಡಿಸಬೇಕು. ಆಗ ಮಾತ್ರ ಈ ಕಾನೂನಿಗೆ ಬಲ ಬರುತ್ತದೆ. ಇಲ್ಲವಾದಲ್ಲಿ ಖಾಸಗಿ ಕಂಪೆನಿಗಳು ಇದರ ದುರ್ಲಾಭ ಪಡೆಯುವ ಅಪಾಯವಿದೆ ಎಂದು ಡಿವೈಎಫ್ಐ ಆತಂಕ ವ್ಯಕ್ತಪಡಿಸುತ್ತದೆ.
Subscribe to Updates
Get the latest creative news from FooBar about art, design and business.
ಸ್ಥಳೀಯರಿಗೆ ಉದ್ಯೋಗ ಒದಗಿಸುವ ಮಸೂದೆಗೆ ಆಕ್ಷೇಪ :ಡಿವೈಎಫ್ಐ ಖಂಡನೆ
Related Posts
Add A Comment

