ಸಿಂದಗಿ: ತಾಲೂಕು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ ಹೀಗೆ ಹಲವು ಕ್ಷೇತ್ರಗಳಲ್ಲಿ ಸಿಂದಗಿ ಕ್ಷೇತ್ರ ಅಭಿವೃದ್ಧಿಯತ್ತ ದಾಪುಗಾಲು ಇಡುತ್ತಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಬೆಂಗಳೂರಿನ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಕಚೇರಿಯಲ್ಲಿ ಯುವ ಮುಖಂಡ ಬಸವರಾಜ ಕಾಂಬಳೆ ಸಿಂದಗಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಾಸಕ ಅಶೋಕ ಮನಗೂಳಿ ಸನ್ಮಾನಿಸಿ ಮಾತನಾಡಿದ ಅವರು, ಸಿಂದಗಿ ನಗರದ ಸೌಂದರೀಕರಣ ಇನ್ನೂ ಹೆಚ್ಚು ಸುಧಾರಿಸಕೊಳ್ಳಬೇಕಾಗಿದೆ. ಆ ನಿಟ್ಟಿನಲ್ಲಿ ನಾನು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ ಅವರು ಕ್ಷೇತ್ರ ಮತ್ತು ಸಿಂದಗಿ ಪಟ್ಟಣದ ಅಭಿವೃದ್ಧಿಗೆ ಸಚಿವರು ನಿರಂತರ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಈ ವೇಳೆ ಸಚಿವ ಬೈರತಿ ಸುರೇಶ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಿಂದಗಿ ಮತಕ್ಷೇತ್ರದ ಅಭಿವೃದ್ಧಿಗೆ ಹಾಗೂ ಸಿಂದಗಿ ಪಟ್ಟಣದ ಎಲ್ಲ ಮೂಲಭೂತ ಸೌಕರ್ಯಗಳಿಗೆ ಸಹಕಾರ ನೀಡಲು ನಾನು ಸದಾ ಸಿದ್ಧನಾಗಿದ್ದೇನೆ. ಸಿಂದಗಿ ಯೋಜನಾ ಪ್ರಾಧಿಕಾರವು ಪಟ್ಟಣದ ಅಭಿವೃದ್ಧಿಗೆ ಮತ್ತು ಸೌಂದರ್ಯೀಕರಣಕ್ಕೆ ನೀಲನಕ್ಷೆ ಹಾಕಿದ್ದಲ್ಲಿ ಆ ಯೋಜನೆಗೆ ನಾನು ಅನುದಾನ ನೀಡಲು ಬದ್ಧನಾಗಿದ್ದೇನೆ. ನಗರ ಯೋಜನಾ ಪ್ರಾಧಿಕಾರವು ತಕ್ಷಣವೇ ಕಾರ್ಯ ಪ್ರವೃತ್ತರಾಗಿ ಪಟ್ಟಣದ ಬೆಳವಣಿಗೆಗೆ ಸಿದ್ಧವಾಗಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಸಿಂದಗಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಕಾಂಬಳೆ, ಮಾಜಿ ಪುರಸಭೆ ಅಧ್ಯಕ್ಷ ಹಾಲಿ ಸದಸ್ಯ ಭಾಷಾಸಾಬ ತಾಂಬೋಳಿ, ಪುರಸಭೆ ಸದಸ್ಯ ಸಂದೀಪ ಚೌರ, ಕಾಂಗ್ರೆಸ್ ಯುವ ಮುಖಂಡ ಅರವಿಂದ ಹಂಗರಗಿ, ಪ್ರವೀಣ ಕಂಠಿಗೊಂಡ, ಇರ್ಫಾನ್ ಬಾಗವನ, ಖಾದಿರ ಬಂಕಲಗಿ, ಪ್ರಭುಗೌಡ ಬಿರಾದಾರ, ಮುತ್ತುಗೌಡ ಪಾಟೀಲ, ಮುನ್ನಾ ನಾಯ್ಕೋಡಿ ಸೇರಿದಂತೆ ಅನೇಕರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

