ಆಲಮೇಲ: ವಿಜಯಪುರ ಜಿಲ್ಲೆಯ ಕಡಣಿ ಗ್ರಾಮದ ಬೆರಗು ಪ್ರಕಾಶನವು ರಾಜ್ಯಮಟ್ಟದ ಪ್ರೊ. ಎಚ್.ಟಿ.ಪೋತೆ ಕಾವ್ಯ, ಕಥಾ ಪ್ರಶಸ್ತಿ ನೀಡಲು ಹಸ್ತಪ್ರತಿಗಳನ್ನು ಆವ್ಹಾನಿಸಿದೆ. ಪ್ರಶಸ್ತಿ ರೂ ೧೦ ಸಾವಿರ ನಗದು, ಪ್ರಶಸ್ತಿ ಫಲಕ ಸ್ಮರಣಿಕೆ ಒಳಗೊಂಡಿದೆ. ಆಯ್ಕೆಯಾದ ಹಸ್ತಪ್ರತಿಯನ್ನು ಪ್ರಕಾಶನದಿಂದ ಪ್ರಕಟಿಸಿ ಪ್ರಕಾಶನದ ೭ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಚಾಲಕಿ ವಿಜಯಲಕ್ಷ್ಮಿ ಕತ್ತಿ ತಿಳಿಸಿದ್ದಾರೆ.
ಕನಿಷ್ಠ ೧೦ ಕತೆಗಳನ್ನೊಳಗೊಂಡ ಅಥವಾ ೪೦ ಕವಿತೆಯನ್ನೊಳಗೊಂಡ ಹಸ್ತಪ್ರತಿಯು ನುಡಿ ಅಥವಾ ಬರಹದಲ್ಲಿ ಟೈಪ್ ಮಾಡಿದ ತಮ್ಮ ಅಪ್ರಕಟಿತ ಕೃತಿಯ ಎರಡು ಪ್ರತಿಗಳನ್ನು ಇದೇ ಅಗಷ್ಟ.೩೦ ರೊಳಗೆ ತಲುಪುವಂತೆ ಕಳಿಸಲು ಕೋರಲಾಗಿದೆ.
ಪ್ರಕಟಿತ ಕೃತಿಗಳ ಆವ್ಹಾನ:
ಕಡಣಿ ಬೆರಗು ಪ್ರಕಾಶನವು ದಿ. ಯಮುನಾಬಾಯಿ ರಾಜಣ್ಣ ಭೋವಿ ಸ್ಮರಣಾರ್ಥ ಅವರ ಹೆಸರಿನಲ್ಲಿ ಪ್ರತಿವರ್ಷ ನೀಡುವ ಬೆರಗು ಪ್ರಶಸ್ತಿ-೨೦೨೧ ನೀಡಲು ೨೦೨೩ನೇ ಸಾಲಿನಲ್ಲಿ ಪ್ರಕಟವಾದ ಸಾಹಿತ್ಯದ ಎಲ್ಲಾ ಪ್ರಕಾರಗಳ ಕೃತಿಗಳನ್ನು ಆವ್ಹಾನಿಸಿದೆ. ಪ್ರಶಸ್ತಿಯು ೫ಸಾವಿರ ರೂ. ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ಆಸಕ್ತ ಲೇಖಕರು ತಮ್ಮ ಕೃತಿಯ ಎರಡು ಪ್ರತಿಗಳನ್ನು ಅಗಷ್ಟ .೩೦ ರೊಳಗೆ ಸಲ್ಲಿಸಬೇಕು. ಪಿಎಚ್.ಡಿ ಪ್ರಬಂಧ ಹೊರತುಪಡಿಸಿ ಕನ್ನಡದ ಎಲ್ಲಾ ಪ್ರಕಾರದ ಪುಸ್ತಕಗಳನ್ನು ಪ್ರಶಸ್ತಿಗೆ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಹಸ್ತಪ್ರತಿ ಮತ್ತು ಪುಸ್ತಕ ಕಳಿಸುವ ವಿಳಾಸ: ವಿಜಯಲಕ್ಷ್ಮಿ ಆರ್. ಕತ್ತಿ, ಬೆರಗು ಪ್ರಕಾಶನ, ವಿನಾಯಕ ನಗರ, ಆಲಮೇಲ -೫೮೬ ೨೦೨, ತಾ: ಆಲಮೇಲ, ಜಿಲ್ಲೆ: ವಿಜಯಪುರ, ಮೊ: ೭೭೯೫೩೪೧೩೩೫
Subscribe to Updates
Get the latest creative news from FooBar about art, design and business.
Related Posts
Add A Comment

