Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸದಸ್ಯರಿಗೆ ಲೆಕ್ಕಪತ್ರಗಳ ಮಾಹಿತಿಯೊದಗಿಸಿದರೆ ಸಂಘದಲ್ಲಿ ಶಿಸ್ತು ಸಾಧ್ಯ :ಚೇತನ
(ರಾಜ್ಯ ) ಜಿಲ್ಲೆ

ಸದಸ್ಯರಿಗೆ ಲೆಕ್ಕಪತ್ರಗಳ ಮಾಹಿತಿಯೊದಗಿಸಿದರೆ ಸಂಘದಲ್ಲಿ ಶಿಸ್ತು ಸಾಧ್ಯ :ಚೇತನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ’ ವರದಿಗಾರ ಚೇತನ ಶಿವಶಿಂಪಿ ಸೇರಿದಂತೆ ಐವರಿಗೆ “ತಾಲೂಕು ಉತ್ತಮ ಪತ್ರಕರ್ತ” ಪ್ರಶಸ್ತಿ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ೨೦೨೪-೨೫ ನೇ ಸಾಲಿನ ಪತ್ರಿಕಾ ದಿನಾಚರಣೆ ನಡೆಸುವ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ವಿಶೇಷ ಚರ್ಚೆಗಳು ನಡೆದವು.
ಈ ವೇಳೆ ಸದಸ್ಯ ಚೇತನ ಶಿವಶಿಂಪಿ ಮಾತನಾಡಿ, ಕಾರ್ಯಕ್ರಮದ ಬಳಿಕ ಸದಸ್ಯರೆಲ್ಲರಿಗೆ ಲೆಕ್ಕಪತ್ರಗಳ ಮಾಹಿತಿ ನೀಡಿದಲ್ಲಿ ಸಂಘದ ಶಿಸ್ತನ್ನು ಕಾಯ್ದುಕೊಂಡಂತಾಗುತ್ತದೆ ಎಂದರು.
ಹಿರಿಯ ಸದಸ್ಯ ಪರಶುರಾಮ ಕೊಣ್ಣೂರ ಮಾತನಾಡಿ, ಕೆಲವರು ತಮ್ಮ ಲಾಬಿಗಾಗಿ ಸಂಘದಲ್ಲಿ ಪತ್ರಕರ್ತರಲ್ಲದವರನ್ನು ಸೇರಿಸಿದ್ದಾರೆ. ಕೂಡಲೇ ಅಂತವರನ್ನು ಗುರುತಿಸಿ ಸಂಘದಿಂದ ಕೈಬಿಡಬೇಕು ಎಂದರು.
ಎಚ್.ಆರ್.ಬಾಗವಾನ, ಅಲ್ಲಾಭಕ್ಷ ನಿಡಗುಂದಿ, ಡಿ.ಬಿ.ವಡವಡಗಿ ಮತ್ತೀತರರು ಮಾತನಾಡಿ ಸಲಹೆಗಳನ್ನು ನೀಡಿದರು.
ಜು.೩೧ ಕ್ಕೆ ಪಟ್ಟಣದ ವಿದ್ಯಾನಗರದಲ್ಲಿರುವ ಅಭ್ಯುದಯ ಕಾಲೇಜಿನಲ್ಲಿ ಕಾರ್ಯಕ್ರಮವನ್ನು ನಡೆಸಲು ತೀರ್ಮಾನಿಸಲಾಯಿತು.
ಈ ವೇಳೆ ರವೀಂದ್ರ ನಂದೆಪ್ಪನವರ, ಲಾಡ್ಲೇಮಶಾಕ ನದಾಫ, ಸಿದ್ದು ಚಲವಾದಿ, ಮುತ್ತು ಬೀರಗೊಂಡ, ಹಣಮಂತ ಬೀರಗೊಂಡ, ಯಲ್ಲಾಲಿಂಗ ಕೊಡೇಕಲ್, ಕೃಷ್ಣ ಕುಂಬಾರ, ಸಾಗರ ಉಕ್ಕಲಿ, ಈಶ್ವರ ಈಳಗೇರ, ಬಿ.ಎಸ್.ಪಾಟೀಲ ಇದ್ದರು.

ಪ್ರಸಕ್ತ ಸಾಲಿನ “ತಾಲೂಕು ಉತ್ತಮ ಪತ್ರಕರ್ತ” ಪ್ರಶಸ್ತಿಗೆ ಸಂಯುಕ್ತ ಕರ್ನಾಟಕ ಹಾಗೂ ಉದಯರಶ್ಮಿ ವರದಿಗಾರ ಚೇತನ ಶಿವಶಿಂಪಿ, ಪುಂಡಲೀಕ ಮುರಾಳ, ಅಲ್ಲಾಭಕ್ಷ ನಿಡಗುಂದಿ, ಸಿದ್ದು ಚಲವಾದಿ ಮತ್ತು ಬಸವರಾಜ ಹುಲಗಣ್ಣಿ ಅವರನ್ನ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಮಾತಿನ ಚಕಮಕಿ
ಚರ್ಚೆಯಲ್ಲಿ ಮಾತಿನ ಚಕಮಕಿ ಜೋರಾಗುತ್ತಿದ್ದಂತೆ ಅಧ್ಯಕ್ಷ ಮುತ್ತಣ್ಣ ವಡವಡಗಿ ಟೇಬಲ್ ಬಡಿದು ಮೇಲು ಧ್ವನಿಯಲ್ಲಿ ಇಬ್ಬರು ಸದಸ್ಯರಿಗೆ ನಿಮ್ಮಿಬ್ಬರದು ಜಾಸ್ತಿಯಾಗಿದೆ. ಬಂದುಬಿಡಿ ಎಂದು ಮಾತನಾಡಿ ಸಭೆಗೆ ಅವಮಾನಿಸಿದ ಘಟನೆ ನಡೆಯಿತು.
ಎಲ್ಲ ಸದಸ್ಯರನ್ನು ಒಗ್ಗೂಡಿಸಿ ಸಂಘಟನೆಯನ್ನು ಬೆಳೆಸುವ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಹಿರಿಯ ಸದಸ್ಯರಿದ್ದರೂ ತಾಳ್ಮೆ ಕಳೆದುಕೊಂಡು ಈ ರೀತಿ ನಡೆದುಕೊಂಡಿದ್ದು ಸಂಘದ ತಾಲೂಕು ಘಟಕದ ಇತಿಹಾಸದಲ್ಲಿ ಕಪ್ಪುಚುಕ್ಕೆಯಾಗಿ ಉಳಿಯಲಿದೆ ಎನ್ನುವ ಮಾತುಗಳು ಕೇಳಿಬಂದವು.

ರಾಜೀನಾಮೆ ಸಲ್ಲಿಸಿದ ಹಿರಿಯ ಸದಸ್ಯ
ಸುಮಾರು ಹದಿನೈದು ವರ್ಷಗಳಿಂದ ಹಿರಿಯ ಸದಸ್ಯನಾಗಿ ಸಂಘದ ಬೆಳವಣಿಗೆಯಲ್ಲಿ ಪಾತ್ರವಹಿಸಿದ್ದ ಪರಶುರಾಮ ಕೊಣ್ಣೂರ ಸಂಘದ ಸದಸ್ಯತ್ವಕ್ಕೆ ಸಂಘದ ವಾಟ್ಸ್ಅಪ್ ಗ್ರೂಪ್ ಮೂಲಕ ರಾಜೀನಾಮೆ ಸಲ್ಲಿಸಿದರು.
ಸದಸ್ಯರೊಬ್ಬರು ಅಧ್ಯಕ್ಷರ ಗೂಂಡಾಗಿರಿ ವರ್ತನೆ ಬಗ್ಗೆ ಜಿಲ್ಲಾ ಮತ್ತು ರಾಜ್ಯಾಧ್ಯಕ್ಷರ ಗಮನಕ್ಕೆ ತರೋಣ ಎಂದು ಹೇಳಿದರೂ ಅವರು ತಮ್ಮ ನಿರ್ಧಾರವನ್ನು ಬದಲಿಸಲಿಲ್ಲ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.