ದೇವರಹಿಪ್ಪರಗಿ: ಅಪ್ಪಣ್ಣ ಬಸವಣ್ಣನವರ ಬಾಲ್ಯದ ಒಡನಾಡಿಗಳಾಗಿ, ಸಮಾನತೆಗಾಗಿ ದುಡಿದ ಶರಣರಾಗಿದ್ದಾರೆ ಎಂದು ಸ್ಥಳೀಯ ಗದ್ದಿಗೆಮಠದ ಮಡಿವಾಳೇಶ್ವರ ಸ್ವಾಮೀಜಿ ಹೇಳಿದರು.
ಪಟ್ಟಣದಲ್ಲಿ ಭಾನುವಾರ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಅಡಿಯಲ್ಲಿ ಆಚರಿಸಲಾದ ಅಪ್ಪಣ್ಣ ಜಯಂತಿಯ ಸಾನಿಧ್ಯ ವಹಿಸಿ ಮಾತನಾಡಿದರು.
ಬಸವಣ್ಣನವರ ನೇತೃತ್ವದಲ್ಲಿ ೧೨ ನೇ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯಲ್ಲಿ ಅಪ್ಪಣ್ಣ ಪ್ರಮುಖ ಪಾತ್ರ ವಹಿಸಿದ್ದರು. ಅವರ ತತ್ವ ಆದರ್ಶಗಳು ಇಂದಿಗೂ ಜನಮಾನಸದಲ್ಲಿವೆ ಎಂದರು.
ವಿಜಯಪುರ ಅನುಗ್ರಹ ಆಸ್ಪತ್ರೆಯ ಖ್ಯಾತ ನೇತ್ರತಜ್ಞ ಪ್ರಭುಗೌಡ ಬಿ.ಎಲ್(ಚಬನೂರ) ಮಾತನಾಡಿ, ಅಪ್ಪಣ್ಣನವರ ಜೀವನ, ತತ್ವ, ಸಿದ್ಧಾಂತಗಳನ್ನು ಎಲ್ಲರಿಗೂ ತಿಳಿಸಲು ಇಂದು ನಾಡಿನಾದ್ಯಂತ ಎಲ್ಲೆಡೆ ಜಯಂತಿಯನ್ನು ಆಚರಿಸಲಾಗುತ್ತಿದೆ. ಶರಣರ ವಚನಗಳನ್ನು ಆದರ್ಶವಾಗಿಟ್ಟುಕೊಂಡು ಬದುಕು ರೂಪಿಸಿಕೊಳ್ಳಬೇಕು ಎಂದರು.
ಬಸವಶರಣ ಸೇವಾ ಸಮೀತಿ ಅಧ್ಯಕ್ಷ ಸಂಗಪ್ಪ ತಡವಲ್ ಮಾತನಾಡಿ, ಅಪ್ಪಣ್ಣನವರ ಜೀವನ, ಸಾಧನೆ, ಕಾಯಕನಿಷ್ಠೆ, ಅವರ ರಚನೆಯ ೨೫೦ ವಚನಗಳ ಸಾರ, ಮಹತ್ವ ಕುರಿತು ಸವಿಸ್ತಾರವಾಗಿ ಮಾತನಾಡಿದರು.
ದಲಿತ ಸಂಘರ್ಷ ಸಮಿತಿ ಬೆಳಗಾವಿ ವಿಭಾಗೀಯ ಸಂಚಾಲಕ ರಾವುತ ತಳಕೇರಿ, ಶಿರಸ್ತೇದಾರ ಸುರೇಶ ಮ್ಯಾಗೇರಿ ಮಾತನಾಡಿ, ಅಪ್ಪಣ್ಣನವರು ಒಬ್ಬ ಸೇವಾಯೋಗಿ, ಕಾಯಕನಿರತ ಶರಣರಾಗಿದ್ದು ಇಂತಹ ಮಹಾನ್ ಶರಣರು ಸಾಗಿದ ಸನ್ಮಾರ್ಗದಲ್ಲಿ ಸಾಗಿದರೆ ಜೀವನಕ್ಕೆ ಒಂದು ಅರ್ಥ, ಸಾರ್ಥಕತೆ ಎಂದರು.
ಪಟ್ಟಣ ಪಂಚಾಯಿತಿ ಸದಸ್ಯ ಕಾಸುಗೌಡ ಬಿರಾದಾರ(ಜಲಕತ್ತಿ), ಅಪ್ಪಣ್ಣ ಸಮಾಜ ಸೇವಾ ಸಂಘದ ಅಧ್ಯಕ್ಷ ಸಾಯಬಣ್ಣ ಹಡಪದ, ಸೋಮರಾಯ ಹಡಪದ, ರಮೇಶ ಹಡಪದ, ಪವಾಡೆಪ್ಪ ಹಡಪದ, ಮಲ್ಲು ಹಡಪದ, ಭೀಮಾಶಂಕರ ಹಡಪದ, ಚಿದಾನಂದ ಹಡಪದ, ಬಸವರಾಜ ಹಡಪದ ಸೇರಿದಂತೆ ಪ್ರಮುಖರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

