ಬಸವನಬಾಗೇವಾಡಿ: ಗ್ರಾಮೀಣ ಭಾಗದಲ್ಲಿ ಆಯೋಜಿಸುವ ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳಿಂದ ಶಿಬಿರಾರ್ಥಿಗಳು ಸೇವಾ ಮನೋಭಾವ ಗುಣ ಅರಿತುಕೊಳ್ಳುವ ಜೊತೆಗೆ ಗ್ರಾಮೀಣ ಭಾಗದ ಸಂಸ್ಕ್ರತಿಯನ್ನು ಅರಿತುಕೊಳ್ಳಲು ಪೂರಕವಾಗುತ್ತದೆ ಎಂದು ರಾಷ್ಟ್ರೀಯ ಸೇವಾ ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿ ಡಾ.ಪ್ರಕಾಶ ರಾಠೋಡ ಹೇಳಿದರು.
ತಾಲೂಕಿನ ಟಕ್ಕಳಕಿ ಗ್ರಾಮದಲ್ಲಿ ಈಚೆಗೆ ಒಂದು ವಾರ ಕಾಲ ಸ್ಥಳೀಯ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯವು ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದರೆ ಉತ್ತಮ ವಿಷಯಗಳನ್ನು ತಿಳಿದುಕೊಳ್ಳಲು ಸಾಧ್ಯ. ಒಂದು ವಾರ ಕಾಲ ಈ ಗ್ರಾಮದಲ್ಲಿ ಜರುಗಿದ ಶಿಬಿರದಿಂದ ಗ್ರಾಮೀಣ ಸಂಸ್ಕ್ರತಿ, ಬದುಕು, ಕೃಷಿಕರ ಸಮಸ್ಯೆಗಳನ್ನು ಶಿಬಿರಾರ್ಥಿಗಳು ಅರಿತುಕೊಳ್ಳುವಲ್ಲಿ ಸಹಾಯಕವಾಗಿದೆ. ಗ್ರಾಮೀಣ ಭಾಗದ ಜನರಿಗೆ ಸ್ವಚ್ಛತೆ ಸೇರಿದಂತೆ ವಿವಿಧ ವಿಷಯಗಳನ್ನು ಜಾಗೃತಿ ಮೂಡಿಸುವಲ್ಲಿ ಶಿಬಿರವು ಮಾಡಿಸುವ ಮೂಲಕ ಯಶಸ್ವಿಯಾಗಿದೆ ಎಂದರು.
ಮಹಾವಿದ್ಯಾಲಯದ ಎನ್ಎನ್ಎಸ್ ಕಾರ್ಯಕ್ರಮಾಧಿಕಾರಿ ಡಾ.ವೈ.ಬಿ.ನಾಯಕ ಮಾತನಾಡಿ, ಜು.೧೫ ರಿಂದ ೨೧ ರವರೆಗೆ ಮಹಾವಿದ್ಯಾಲಯದಿಂದ ಟಕ್ಕಳಕಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಎನ್ಎನ್ಎಸ್ ಶಿಬಿರದಲ್ಲಿ ಶಿಬಿರಾರ್ಥಿಗಳು ಗ್ರಾಮದ ಬಾವಿ, ಚರಂಡಿ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಸ್ವಚ್ಛತೆ ಕಾರ್ಯ ಕೈಗೊಳ್ಳುವ ಮೂಲಕ ಸ್ವಚ್ಛತಾ ಅಭಿಯಾನದ ಮಹತ್ವ ಜನರಿಗೆ ತಿಳಿಸಿಕೊಟ್ಟಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ರವೀಂದ್ರಗೌಡ ಕೆ., ಗ್ರಾಮ ಪಂಚಾಯಿತಿ ಸದಸ್ಯ ಕನಕಪ್ಪ ಬಂಡಿವಡ್ಡರ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರೊ.ವಿ.ಎಸ್.ರಜಪೂತ ಇತರರು ಇದ್ದರು.
Subscribe to Updates
Get the latest creative news from FooBar about art, design and business.
ಗ್ರಾಮೀಣ ಸಂಸ್ಕ್ರತಿ ಅರಿಯಲು ಎನ್ನೆಸ್ಸೆಸ್ ಶಿಬಿರ ಪೂರಕ :ಡಾ.ರಾಠೋಡ
Related Posts
Add A Comment

