Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೆಗಾಮಾರುಕಟ್ಟೆ ಆವರಣಗೋಡೆ ತೆರವು ಕಾರ್ಯಾಚರಣೆ
(ರಾಜ್ಯ ) ಜಿಲ್ಲೆ

ಮೆಗಾಮಾರುಕಟ್ಟೆ ಆವರಣಗೋಡೆ ತೆರವು ಕಾರ್ಯಾಚರಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣದ ಹೃದಯ ಭಾಗದಲ್ಲಿ ಪುರಸಭೆಯಿಂದ ನಿರ್ಮಾಣಗೊಂಡಿರುವ ಮೆಗಾಮಾರುಕಟ್ಟೆ ಕಟ್ಟಡದ ಕೊಲ್ಹಾರಕ್ಕೆ ಹೋಗುವ ಮುಖ್ಯರಸ್ತೆಗೆ ಹೊಂದಿಕೊಂಡಿದ್ದ ಆವರಣಗೋಡೆ(ಕಂಪೌಂಡ್)ಯನ್ನು ತೆರವು ಗೊಳಿಸುವ ಕಾರ್ಯಾಚರಣೆ ಪುರಸಭೆಯಿಂದ ಗುರುವಾರ ನಡೆಸಲಾಯಿತು.
ಆವರಣಗೋಡೆಗೆ ಹೊಂದಿಕೊಂಡು ಹಾಕಲಾಗಿದ್ದ ಡಬ್ಬಾ ಅಂಗಡಿಗಳನ್ನು ಪುರಸಭೆಯಿಂದ ಮೊದಲು ತೆರವು ಗೊಳಿಸಿದ ನಂತರ ಜೆಸಿಬಿಯಿಂದ ಆವರಣಗೋಡೆಯನ್ನು ತೆರವುಗೊಳಿಸಲಾಯಿತು. ಈ ಸಂದರ್ಭದಲ್ಲಿ ಆವರಣಗೋಡೆಗೆ ಇಟ್ಟಿದ್ದ ಡಬ್ಬಾ ಅಂಗಡಿಗಳ ವ್ಯಾಪಾರಿಗಳು ನಮ್ಮ ನಿತ್ಯ ಜೀವನ ಇದರಿಂದ ನಡೆಯುತ್ತಿದೆ. ಅಧಿಕಾರಿಗಳು ನಮ್ಮ ಬಗ್ಗೆ ಗಮನ ಹರಿಸಬೇಕು. ನಮ್ಮ ವ್ಯಾಪಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿಕೊಳ್ಳುವ ಜೊತೆಗೆ ಅಽಕಾರಿಗಳೊಂದಿಗೆ ಮಾತಿನ ವಾಗ್ವಾದ ನಡೆಯಿತು.
ಮೆಗಾಮಾರುಕಟ್ಟೆಯಲ್ಲಿ ಬಾಡಿಗೆ ಹಿಡಿದ ಅಂಗಡಿ ಮಾಲೀಕರು ಪುರಸಭೆ ಮುಖ್ಯಾಧಿಕಾರಿಗಳಿಗೆ ಕೊಲ್ಹಾರ ರಸ್ತೆಗೆ ಹೊಂದಿಕೊಂಡಿರುವ ಆವರಣಗೋಡೆಯನ್ನು ತೆರವು ಗೊಳಿಸಿ ನಮ್ಮ ಅಂಗಡಿಗಳಿಗೆ ಜನರು ಬರುವಂತೆ ಅನುಕೂಲ ಮಾಡಿಕೊಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬುಧವಾರವಷ್ಟೇ ಮನವಿ ಸಲ್ಲಿಸಿದ್ದರು. ಇದರ ಬೆನ್ನಲ್ಲೆಯಲ್ಲಿಯೇ ಇಂದು ತಾತ್ಕಾಲಿಕವಾಗಿ ಕಟ್ಟಲಾಗಿದ್ದ ಆವರಣಗೋಡೆಯ ತೆರವು ಕಾರ್ಯಾಚರಣೆಯನ್ನು ಇಂದು ಪುರಸಭೆಯಿಂದ ನಡೆದಿದೆ.
ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಅವರನ್ನು ಸಂಪರ್ಕಿಸಿದಾಗ, ಮೆಗಾಮಾರುಕಟ್ಟೆಯ ಕೊಲ್ಹಾರ ರಸ್ತೆಯ ಪಕ್ಕದಲ್ಲಿ ತಾತ್ಕಲಿಕವಾಗಿ ನಿರ್ಮಿಸಲಾಗಿದ್ದ ಆವರಣಗೋಡೆಯನ್ನು ತೆರವು ಗೊಳಿಸಿ ೧೫ ನೇ ಹಣಕಾಸು ಯೋಜನೆಯಲ್ಲಿ ೪೪ ಲಕ್ಷ ರೂ. ವೆಚ್ಚದಲ್ಲಿ ಗ್ರಿಲ್ ಅಳವಡಿಸುವ ಕಾಮಗಾರಿಯನ್ನು ಪುರಸಭೆಯಿಂದ ಹಾಕಿಕೊಳ್ಳಲಾಗಿದೆ. ಈಗಾಗಲೇ ಇದರ ಟೆಂಡರ್ ಆಗಿದೆ. ಒಂದು ವಾರದಲ್ಲಿ ಈ ಕಾಮಗಾರಿ ಆರಂಭವಾಗಲಿದೆ. ಆವರಣ ಗೋಡೆಯನ್ನು ತೆಗೆದು ಗ್ರಿಲ್ ಅಳವಡಿಸಿದರೆ ಮೆಗಾಮಾರುಕಟ್ಟೆಯಲ್ಲಿರುವ ಅಂಗಡಿ-ಮಳಿಗೆಗಳು ಜನರಿಗೆ ಕಾಣುವ ಜೊತೆಗೆ ಮೆಗಾಮಾರುಕಟ್ಟೆಗೆ ಮೆರಗು ಬರಲಿದೆ. ಮೆಗಾಮಾರುಕಟ್ಟೆಯಲ್ಲಿರುವ ಅಂಗಡಿಗಳ ವ್ಯಾಪಾರ-ವಹಿವಾಟುಗಳಿಗೆ ಅನುಕೂಲವಾಗಲಿದೆ ಎಂದರು.
ಈ ಆವರಣಗೋಡೆಗೆ ಹೊಂದಿಕೊಂಡು ಹಾಕಲಾಗಿದ್ದ ಡಬ್ಬಾ ಅಂಗಡಿಗಳ ಮಾಲೀಕರಿಗೆ ತಮ್ಮ ಅಂಗಡಿಗಳನ್ನು ತೆರವು ಗೊಳಿಸಿಕೊಳ್ಳಲು ಒಂದೆರಡು ದಿನಗಳ ಮುಂಚೆ ಪುರಸಭೆಯಿಂದ ತಿಳಿಸಲಾಗಿತ್ತು. ಕೆಲವರು ತಮ್ಮ ಡಬ್ಬಾ ಅಂಗಡಿಗಳನ್ನು ತೆರವುಗೊಳಿಸಿಕೊಂಡಿದ್ದಾರೆ. ಇಂದು ಕೆಲವು ಅಂಗಡಿಗಳನ್ನು ಪುರಸಭೆಯಿಂದ ತೆರವುಗೊಳಿಸಿ ಆವರಣಗೋಡೆಯ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ. ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವವರು ಖಾಯಂಯಾಗಿ ಅಂಗಡಿಗಳನ್ನು ಹಾಕುವಂತಿಲ್ಲ. ಅವರು ತಮ್ಮ ವ್ಯಾಪಾರವನ್ನು ತಳ್ಳು ಗಾಡಿಯಲ್ಲಿ ಮಾಡಬಹುದು ಎಂದು ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಹೇಳಿದರು.
ಆವರಣಗೋಡೆಗೆ ಹೊಂದಿಕೊಂಡು ಹಾಕಲಾಗಿದ್ದ ಡಬ್ಬಾ ಅಂಗಡಿಯವರು ತಮ್ಮ ಅಂಗಡಿಗಳನ್ನು ತೆರವುಗೊಳಿಸಿದ್ದರಿಂದ ನಾವು ಜೀವನ ನಡೆಸುವುದು ಕಷ್ಟವಾಗುತ್ತದೆ. ಈ ವ್ಯಾಪಾರದಿಂದ ನಮ್ಮ ಜೀವನ ನಿರ್ವಹಣೆಯಾಗುತ್ತಿತ್ತು. ಅಧಿಕಾರಿಗಳು ನಮ್ಮ ಅಂಗಡಿಗಳನ್ನು ತೆರವುಗೊಳಿಸಿದ್ದರಿಂದ ನಾವು ಮುಂದೆ ಏನು ಮಾಡಬೇಕೆಂಬುವದು ತೋಚದಂತದಾಗಿದೆ. ನಮಗೆ ಅಂಗಡಿಗಳನ್ನು ಹಾಕಿಕೊಳ್ಳಲು ಅವಕಾಶ ನೀಡುವವರೆಗೆ ನಾವು ಮೆಗಾಮಾರುಕಟ್ಟೆಯಲ್ಲಿ ಕುಳಿತುಕೊಳ್ಳುತ್ತೇವೆ ಎಂದು ಸಲೀಮಾ ಬಾಗವಾನ, ಗಿಡ್ಡಪ್ಪ ಕಾಸರ, ಪಕೀರ ಬಾಗವಾನ, ಶಿವಾನಂದ ಮಾದರ, ಮಹಿಬೂಬ ಜೀರಗಾಳ, ರಮೇಶ ಚಿಮ್ಮಲಗಿ, ಡೊಂಗ್ರಮ ಬೈರವಾಡಗಿ, ಶಂಕರಯ್ಯ ಹಿರೇಮಠ, ರೇಷ್ಮಾ ಆಲಮೇಲ, ಜನಾಬಿ ಗಿಡ್ಡಪ್ಪ ಕಸರ, ಶ್ಯಾಮಶ್ಯಾದ ಮನ್ಯಾರ, ಜಾಕೀರ ನದಾಫ, ರಾಜಅಹ್ಮದ ದಳವಾಯಿ ಎಂದು ತಮ್ಮ ಅಳಲು ತೋಡಿಕೊಂಡರು.
ಬಳೆ ಅಂಗಡಿ ಇಟ್ಟುಕೊಂಡಿದ್ದ ಯಾಸೀನ ಗೊಳಸಂಗಿ ಅವರು ಏಕಾಏಕಿ ನಮ್ಮ ಅಂಗಡಿಯನ್ನು ತೆರವುಗೊಳಿಸಿದ್ದರಿಂದ ನಮ್ಮ ಮಾಲು ಹಾಳಾಗಿ ಹೋಗಿದೆ. ನಮಗೆ ಬಸವೇಶ್ವರ ಜಾತ್ರೆಯವರಿಗೆ ವ್ಯಾಪಾರ ಮಾಡಲು ಅವಕಾಶ ಕೊಡಬೇಕಿತ್ತು. ನಮಗೆ ಅಂಗಡಿ ತೆರವು ಗೊಳಿಸಲು ಅವಕಾಶ ಕೊಡಬೇಕಾಗಿತ್ತು. ಈಗ ನಮ್ಮ ಜೀವನ ನಿರ್ವಹಣೆ ಹೇಗೆ ಮಾಡಬೇಕೆಂಬುವದು ತೋಚದಂತಾಗಿದೆ. ನಮಗೆ ವ್ಯಾಪಾರ ಮಾಡಿಕೊಳ್ಳಲು ಅಧಿಕಾರಿಗಳು ಅವಕಾಶ ಮಾಡಿಕೊಡಬೇಕೆಂದು ಹೇಳಿದರು.
ಬೀದಿ ವ್ಯಾಪಾಸ್ಥರ ಪಟ್ಟಣ ಸಮಿತಿ ಸದಸ್ಯ ಜಾಕೀರ ನದಾಫ್ ಅವರು, ಪುರಸಭೆ ಮುಖ್ಯಾಧಿಕಾರಿಗಳು ಬೀದಿ ವ್ಯಾಪಾರಸ್ಥರ ಸಭೆ ಕರೆದು ಅಂಗಡಿ ತೆರವು ಗೊಳಿಸುವ ಬಗ್ಗೆ ಮಾಹಿತಿ ನೀಡಬೇಕಾಗಿತ್ತು. ಅಧಿಕಾರಿಗಳು ಬೀದಿ ವ್ಯಾಪಾರಸ್ಥರ ಹಿತರಕ್ಷಣೆ ಕಾಪಾಡದೇ ಈ ರೀತಿ ಮಾಡಿರುವದು ಸರಿಯಲ್ಲ. ಬೀದಿ ವ್ಯಾಪಾರಸ್ಥರ ಹಿತರಕ್ಷಣೆ ಕಾಯ್ದುಕೊಳ್ಳುವದು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.