ಸಿಂದಗಿ: ಪಟ್ಟಣದ ವಿದ್ಯಾಚೇತನ ಪ್ರಕಾಶನದಿಂದ ನೀಡುವ ರಾಜ್ಯಮಟ್ಟದ ಬಾಲಸಾಹಿತ್ಯ ಪುರಸ್ಕಾರ ಪ್ರದಾನ ಸಮಾರಂಭ ಜು.೨೮ ರಂದು ಬೆಳಿಗ್ಗೆ ೧೦.೩೦ಗಂಟೆಗೆ ಪಟ್ಟಣದ ಸಾರಂಗಮಠದ ಆವರಣದಲ್ಲಿ ನಡೆಯಲಿದೆ.
ಬೆಂಗಳೂರಿನ ಲಲಿತಾ ಹೊಸಪ್ಯಾಟಿ (ಬ್ಯೂಟಿ ಬೆಳ್ಳಕ್ಕಿ—ಮಕ್ಕಳ ಕಥಾ ಸಂಕಲನ), ವಿಜಯಪುರ ಜಂಬುನಾಥ ಕಂಚ್ಯಾಣಿ (ಮತ್ತೆ ಅವತರಿಸಿದ ದೈತ್ಯರು—ಮಕ್ಕಳ ಕಾದಂಬರಿ), ಬೆಳಗಾವಿಯ ಎಂ.ಎಂ.ಸಂಗಣ್ಣವರ (ಅಮ್ಮ ಬೇಕು—ಮಕ್ಕಳ ಕವನ ಸಂಕಲನ) ಇವರಿಗೆ ಬಾಲಸಾಹಿತ್ಯ ಪುರಸ್ಕಾರ ಹಾಗೂ ಮಕ್ಕಳ ವಿಭಾಗದಲ್ಲಿ ಬಾಲಸಾಹಿತ್ಯ ಚಿಗುರು ಪುರಸ್ಕಾರವನ್ನು ಗದಗ ನಗರದ ವಿದ್ಯಾರ್ಥಿನಿ ಪ್ರಣತಿ ಗಡಾದ (ನಾನು ಮಳೆಯಾದರೆ—ಮಕ್ಕಳ ಕವನ ಸಂಕಲನ) ಅವರಿಗೆ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ತಲಾ ೫ ಸಾವಿರ ರೂ. ನಗದು ಮತ್ತು ಪ್ರಶಸ್ತಿ ಫಲಕ ಹಾಗೂ ಬಾಲ ಸಾಹಿತ್ಯ ಚಿಗುರು ಪ್ರಶಸ್ತಿ ೨ ಸಾವಿರ ರೂ. ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ.
ಕಾರ್ಯಕ್ರಮದ ಸಾನಿಧ್ಯವನ್ನು ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ವಹಿಸುವರು. ಕರ್ನಾಟಕ ರಾಜ್ಯ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಾಸಕ ಅಶೋಕ ಮನಗೂಳಿ ಸಮಾರಂಭವನ್ನು ಉದ್ಘಾಟಿಸುವರು. ನಿವೃತ್ತ ಪ್ರಾಧ್ಯಾಪಕ ಶಾಂತೂ ಹಿರೇಮಠ ಅಧ್ಯಕ್ಷತೆ ವಹಿಸುವರು. ಇದೇ ಸಂದರ್ಭದಲ್ಲಿ ಬಾಲ ವಿಕಾಸ ಅಕಾಡೆಮಿ ನೂತನ ಅಧ್ಯಕ್ಷರಿಗೆ ಸನ್ಮಾನಿಸಲಾಗುವುದು ಎಂದು ಮಕ್ಕಳ ಸಾಹಿತಿ, ವಿದ್ಯಾಚೇತನ ಪ್ರಕಾಶಕ ಹ.ಮ.ಪೂಜಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

