Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುವಜನತೆ ಮತ ಮೌಲ್ಯ ಅರಿಯಲಿ :ಜಾಲೋಜಿ
(ರಾಜ್ಯ ) ಜಿಲ್ಲೆ

ಯುವಜನತೆ ಮತ ಮೌಲ್ಯ ಅರಿಯಲಿ :ಜಾಲೋಜಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶಾಲಾ ಸಂಸತ್ತು | ನೂತನ ಮಂತ್ರಿ ಮಂಡಲ ರಚನೆ | ಖಾತೆ ಪ್ರಮಾಣ ಪತ್ರ ವಿತರಣೆ

ಚಿಕ್ಕಪಡಸಲಗಿ: ಇಂದಿನ ಯುವಜನತೆ ವಿದ್ಯಾರ್ಥಿಗಳಲ್ಲಿ ಮತದಾನದ ಮಹತ್ವ ಹಾಗೂ ಮತಹಕ್ಕು ಚಲಾಯಿಸುವ ಪಾವಿತ್ರ್ಯತೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ಶಾಲಾ ಸಂಸತ್ತು ಚುನಾವಣೆ ಸಹಕಾರಿಯಾಗಿದೆ ಆ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಅಣಕು ಸಂಸತ್ ರಚನೆ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಪ್ರಭಾರ ಮುಖ್ಯೋಪಾಧ್ಯಾಯ ಬಸವರಾಜ ಜಾಲೋಜಿ ಹೇಳಿದರು.
ಸ್ಥಳೀಯ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಜರುಗಿದ ಪ್ರಸಕ್ತ ಸಾಲಿನ ಶಾಲಾ ಸಂಸತ್ತು ಚುನಾವಣೆಯಲ್ಲಿ ಆಯ್ಕೆಯಾದ ಸಂಸತ್ತಿನ ನೂತನ ಮಂತ್ರಿ ಮಂಡಲದ ಸದಸ್ಯರಿಗೆ ಖಾತೆಗಳ ಹಂಚಿಕೆ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.
ಪ್ರೌಢಶಾಲಾ ಹಂತದಲ್ಲೇ ಮಕ್ಕಳಿಗೆ ಗಟ್ಟಿ ಪ್ರಜಾಪ್ರಭುತ್ವದ ತಿರುಳು ತಿಳಿ ಹೇಳಬೇಕಾಗಿದೆ. ಮತದಾನದ ಮೌಲ್ಯವನ್ನು ಅವರಿಗೆ ಮನವರಿಕೆ ಮಾಡಿಕೊಡಬೇಕಾಗಿದೆ.ಒಂದೊಂದು ಮತವು ನಿಣಾ೯ಯಕ ಪಾತ್ರ ವಹಿಸುತ್ತದೆ ಎಂಬ ಪರಿಕಲ್ಪನೆ ಮೂಡಿಸಿ ಜನಪ್ರತಿನಿಧಿಗಳು ಹೇಗೆ ಆಯ್ಕೆಗೊಳ್ಳತ್ತಾರೆ,ಸರಕಾರ ಹೇಗೆ ರಚನೆಯಾಗುತ್ತದೆ ಎಂಬಿತ್ಯಾದಿ ಅಂಶಗಳನ್ನು ತಿಳಿಸಿ ಸಾರ್ವತ್ರಿಕ ಚುನಾವಣೆ ನಿಯಮಾವಳಿಗಳ ಮಾದರಿಯಲ್ಲಿ ಪಾರದರ್ಶಕತೆಯಿಂದ ಶಾಲೆಯಲ್ಲಿ ಚುನಾವಣೆ ನಡೆಸಲಾಗಿದೆ ಎಂದರು.
ಮಕ್ಕಳಲ್ಲಿ ನಾಯಕತ್ವದ ನೈತಿಕ ಗುಣ ಹಾಗೂ ಪ್ರಾಮಾಣಿಕತೆವುಳ್ಳ ಮೌಲ್ಯಾಧಾರಿತ ವ್ಯಕ್ತಿತ್ವದ ಚಹರೆ ರೂಪಿಸುವುದು ಇಂದಿನ ಅಗತ್ಯ. ಆ ದಿಸೆಯಲ್ಲಿ ಕಾಯಕ ಬದ್ದತೆಯ ಪದ್ದತಿಗೆ ಪ್ರಾಮುಖ್ಯತೆ ನೀಡಿ ಯುವಜನತೆಯಲ್ಲಿ ಸ್ಪಷ್ಟತೆಯ ಜಾಗೃತಿ ಮೂಡಿಸುವುದರೊಂದಿಗೆ ಮಾನವೀಯತೆಯ ಮೌಲ್ಯಗಳನ್ನು ಬೆಳೆಸಬೇಕಾಗಿದೆ ಎಂದವರು ಅಭಿಪ್ರಾಯಿಸಿದರು.
ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲ ಓದು,ಬರಹ, ಸಮಾಜಮುಖಿ ಕೆಲಸ,ಕಾರ್ಯಗಳನ್ನು ಗೈಯುವ ಅಭಿರುಚಿ, ನೈತಿಕ ಹೊಣೆಗಾರಿಕೆ ನಿಭಾಯಿಸುವ ಮನೋಭಾವ ಜೊತೆಗೆ ಸಂವಿಧಾನದ ಹೂರಣ ಅರಿಯಲು ಶಾಲಾ ಹಂತದಲ್ಲಿ ನಡೆಸುವ ಸಂಸತ್ ಚಟುವಟಿಕೆಗಳು ಪೂರಕವಾಗಿದೆ ಎಂದರು.
ಹಿರಿಯ ಮಾರ್ಗದಶಿ೯, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಬಸವರಾಜ ಅನಂತಪುರ ಮಾತನಾಡಿ, ಶಾಲಾ ಹಂತದಲ್ಲಿನ ಸಂಸತ್ ಚುನಾವಣೆ ಮಕ್ಕಳಿಗೆ ಹೊಸತನದ ಅನುಭವ ನೀಡುತ್ತದೆ. ನಿಜ ಮತದಾನದ ವಯಸ್ಸಿನ ಮುನ್ನವೇ ಮೊದಲಬಾರಿಗೆ ಮತಹಕ್ಕು ಚಲಾಯಿಸುವ ಸಂಸಸ,ಸಂಭ್ರಮದ ನವೋಲ್ಲಾಸ, ಮನೋಲ್ಲಾಸ ಅಣಕು ಮತದಾನದ ಶಾಲಾ ಸಂಸತ್ ಚುನಾವಣೆ ಒದಗಿಸುತ್ತದೆ.ಜೊತೆಗೆ ಸರಕಾರ ರಚನೆಯ ಅರಿವು, ಸಂಸತ್ತಿನ ಪಾತ್ರ ಏನೆಂಬುದನ್ನು ತಿಳಿಯಲು ಅವಕಾಶ ಕಲ್ಪಿಸುತ್ತದೆ. ಭವಿಷ್ಯತ್ತಿನ ಯುವ ಮತದಾರ ಪ್ರಭುಗಳನ್ನು ಉತ್ತೇಜಿಸುವ ವಿಶೇಷ ತಿಳುವಳಿಕೆ ನೀಡುತ್ತದೆ ಎಂದರು.
2024-25 ನೇ ಸಾಲಿನ ಶಾಲಾ ಸಂಸತ್ ಚುನಾವಣೆಯಲ್ಲಿ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ಆಕಾಶ ಬಡಿಗೇರ, ವಿದ್ಯಾರ್ಥಿನಿ ಪ್ರತಿನಿಧಿ ಭಾಗಶ್ರೀ ಪಾಟೀಲ, ಕ್ರೀಡಾ ಹಾಗೂ ಆರೋಗ್ಯ ಮಂತ್ರಿ ಪ್ರಜ್ಲಲ್ ಕೋಳಿ, ಸಾಂಸ್ಕೃತಿಕ ಮಂತ್ರಿ ಗಿರೀಶ ಗುರವ, ಪರೀಕ್ಷಾ ಮಂತ್ರಿ ಸಂಗಮೇಶ ಹಿಪ್ಪರಗಿ, ಪರಿಸರ ಮಂತ್ರಿ ಬಸವರಾಜ ಢವಳೇಶ್ವರ, ಪ್ರವಾಸ ಮಂತ್ರಿ ರಾಹುಲ್ ರಾಯಪ್ಪಗೋಳ, ಮೂಲಭೂತ ಸೌಕರ್ಯ ಮಂತ್ರಿ ಸಂದೀಪ ಪೂಜಾರಿ,ವಿಜ್ಞಾನ ಮಂತ್ರಿ ಸಂತೋಷ ಪಾಟೀಲ, ಪ್ರಾರ್ಥನಾ ಮಂತ್ರಿ ಕೀರ್ತಿ ಕಲ್ಯಾಣಿ ಪ್ರತಿನಿಧಿಗಳಿಗೆ ಖಾತೆಗಳ ಹಂಚಿಕೆ ಪ್ರಮಾಣ ಪತ್ರಗಳನ್ನು ವಿತರಿಸಿ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಡೆಸಿಕೊಂಡು ಹೋಗುವಂತೆ ಶುಭ ಕೋರಲಾಯಿತು.
ಅನೀಲ ನಾಯ್ಕ ಅತಿಥಿಗಳಾಗಿ ಭಾಗವಹಿಸಿದ್ದರು. ಶಿಕ್ಷಕರಾದ ಸದಾಶಿವ ಸಿದ್ದಾಪುರ, ಲೋಹಿತ ಮಿಜಿ೯, ಈರಣ್ಣ ದೇಸಾಯಿ, ಜಿ.ಆರ್.ಜಾಧವ, ಗುರುಮಾತೆಯರಾದ ಕವಿತಾ ಅಂಬಿ, ಸಹನಾ ಹತ್ತಳ್ಳಿ, ಪ್ರಮೀಳಾ ತೇಲಸಂಗ, ಪ್ರಶಿಕ್ಷಣಾಥಿ೯ ಅಕ್ಷತಾ ಮೂತ್ತೂರ ಇತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.