ವಿಜಯಪುರ: ವಿಜಯಪುರ ನಗರದ ಮನಗೂಳಿ ಅಗಸಿ ಬಡಾವಣೆಯ ಡಾ. ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಜಾಗಕ್ಕೆ ಸಂಬಂಧಿಸಿದ ಸಮಸ್ಯೆಯ ಕುರಿತು ಸುದೀರ್ಘವಾದ ಹೋರಾಟ ಕೈಗೊಂಡರು ಕೂಡ ಜಾಗದ ಸಮಸ್ಯೆಯನ್ನು ಬಗೆ ಹರಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ದಲಿತ ಮುಖಂಡ ಪ್ರತಾಪ ಚಿಕ್ಕಲಕಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ವಿಜಯಪುರ ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಮನಗೂಳಿ ಅಗಸಿ ಬಡಾವಣೆಯ ಅಂಬೇಡ್ಕರ್ ಭವನದ ಜಾಗಕ್ಕೆ ಖಾಸಗಿ ವ್ಯಕ್ತಿಗಳು ತಕರಾರು ತಗೆಯುತ್ತಿರುವ ಬಗ್ಗೆ ತಿಂಗಳಗಳ ಹಿಂದೆಯೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿಗಳು ಗಮನಕ್ಕೆ ತಂದರೆ ಯಾವುದೇ ಪ್ರಯೊಜನೆಯಾಗಿರುವುದಿಲ್ಲ. ಇದರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂಬ ಅನುಮಾನ ಕಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು ಕೂಡಲೇ ಅಂಬೇಡ್ಕರ್ ಭವನದ ಜಾಗಕ್ಕೆ ಹೋಗಲು ಖಾಸಗಿ ವ್ಯಕ್ತಿಗಳು ನಿರ್ಮಿಸಿದ ತಡೆಗೊಡೆಯನ್ನು ತೆರವುಗೊಳಿಸಿ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬಸವಕುಮಾರ ಕಾಂಬಳೆ, ಬಸವರಾಜ ಕುಬಕಡ್ಡಿ, ಪ್ರದೀಪ ಚಲವಾದಿ ಮುಂತಾದವರು ಇದ್ದರು.
Subscribe to Updates
Get the latest creative news from FooBar about art, design and business.
ಅಂಬೇಡ್ಕರ್ ಭವನ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತ ವಿಫಲ :ಚಿಕ್ಕಲಕಿ
Related Posts
Add A Comment

