Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವನಬಾಗೇವಾಡಿ: ಬೀದಿ ವ್ಯಾಪಾರಸ್ಥರ ಮುಂದುವರಿದ ಧರಣಿ
(ರಾಜ್ಯ ) ಜಿಲ್ಲೆ

ಬಸವನಬಾಗೇವಾಡಿ: ಬೀದಿ ವ್ಯಾಪಾರಸ್ಥರ ಮುಂದುವರಿದ ಧರಣಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣದ ಹೃದಯ ಭಾಗದಲ್ಲಿ ನಿರ್ಮಾಣವಾಗಿರುವ ಮೆಗಾಮಾರುಕಟ್ಟೆಯ ಕೊಲ್ಹಾರ ಮುಖ್ಯ ರಸ್ತೆಯಲ್ಲಿರುವ ಆವರಣ ಗೋಡೆಗೆ ಹೊಂದಿಕೊಂಡಂತೆ ಡಬ್ಬಾ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ವಹಿವಾಟು ಮಾಡುತ್ತಿದ್ದ ವ್ಯಾಪಾರಿಗಳು ನಮಗೆ ಬೇರೆಡೆ ವ್ಯಾಪಾರ ಮಾಡಲು ಅವಕಾಶ ನೀಡುವಂತೆ ಟಿಪ್ಪು ಕ್ರಾಂತಿ ಸೇನೆಯ ನೇತೃತ್ವದಲ್ಲಿ ಆಗ್ರಹಿಸಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಶನಿವಾರವೂ ಮುಂದುವರಿಯಿತು.
ಪಟ್ಟಣದ ಮಾರುತಿ ದೇವಸ್ಥಾನದ ಹತ್ತಿರದಿಂದ ನಾಗೂರ ಕ್ರಾಸ್ವರೆಗೆ ಇದ್ದ ಆವರಣಗೋಡೆಯನ್ನು ಪುರಸಭೆ ಅಧಿಕಾರಿಗಳು ಗುರುವಾರ ತೆರವುಗೊಳಿಸಿದ್ದರಿಂದ ನಾವು ಆವರಣಗೋಡೆ ಹೊಂದಿಕೊಂಡು ಹಲವಾರು ತಿಂಗಳುಗಳಿಂದ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುವ ಮೂಲಕ ನಮ್ಮ ಜೀವನ ನಿರ್ವಹಣೆ ಮಾಡುವ ಮೂಲಕ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದೇವೆ. ಈಗ ದಿಢೀರ್ ಪುರಸಭೆಯ ಅಧಿಕಾರಿಗಳು ಆವರಣಗೋಡೆ ತೆರವು ಗೊಳಿಸಿದ್ದರಿಂದ ನಮ್ಮ ಅಂಗಡಿ-ಮುಂಗಟ್ಟುಗಳನ್ನು ತೆರವುಗೊಳಿಸಲಾಗಿದೆ. ಇದರಿಂದಾಗಿ ನಮ್ಮ ವ್ಯಾಪಾರ ನಿಂತು ಹೋಗಿದೆ. ಅಧಿಕಾರಿಗಳು ಕೂಡಲೇ ನಮಗೆ ವ್ಯಾಪಾರ ಮಾಡಲು ಜನನಿ ಬಿಡ ಪ್ರದೇಶದಲ್ಲಿ ಸ್ಥಳಾವಕಾಶ ಮಾಡಿಕೊಟ್ಟರೆ ನಾವು ಜೀವನ ನಿರ್ವಹಣೆ ಮಾಡಲು ಅನುಕೂಲವಾಗುತ್ತದೆ. ನಮಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ನಿನ್ನೆಯಿಂದ ನಾವು ಅಹೋ ರಾತ್ರಿ ಧರಣಿ ಆರಂಭಿಸಿದ್ದೇವೆ. ತಹಸೀಲ್ದಾರ ಅವರಿಗೆ ಮನವಿ ಮಾಡಿಕೊಂಡಾಗ ಅವರು ಪುರಸಭೆ ಅಧಿಕಾರಿಗಳೊಂದಿಗೆ ಮಾತನಾಡುವ ಭರವಸೆ ನೀಡಿದ್ದಾರೆ. ಇದುವರೆಗೂ ನಮಗೆ ಬೇರೆಡೆ ವ್ಯಾಪಾರ ಮಾಡಲು ಸ್ಥಳ ತೋರಿಸಿಲ್ಲ. ನಮಗೆ ನ್ಯಾಯ ಸಿಗುವವರೆಗೂ ಧರಣಿ ಮುಂದುವರಿಸುತ್ತೇವೆ ಎಂದು ಧರಣಿ ನಿರತರು ಹೇಳಿದರು.
ಧರಣಿ ಸ್ಥಳಕ್ಕೆ ಶನಿವಾರ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ, ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಅವರು ಭೇಟಿ ನೀಡಿ ಧರಣಿ ನಿರತರಿಗೆ ತಾವು ರಸ್ತೆ ಬದಿ ವ್ಯಾಪಾರ ಮಾಡುವದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತದೆ. ಬಸ್ ನಿಲ್ದಾಣದ ಹತ್ತಿರವಿರುವ ಇಂದಿರಾ ಕ್ಯಾಂಟಿನ್ ಹತ್ತಿರ ಜಾಗೆ ಇದೆ. ಅಲ್ಲಿ ತಮ್ಮ ವ್ಯಾಪಾರ ವಹಿವಾಟು ಮಾಡಿಕೊಳ್ಳಲು ಅವಕಾಶ ನೀಡಲಾಗುವದು. ತಮ್ಮ ಧರಣಿಯನ್ನು ಹಿಂಪಡೆಯುವಂತೆ ಹೇಳಿದಾಗ ಧರಣಿ ನಿರತರು ಇಂದಿರಾ ಕ್ಯಾಂಟೀನ್ ಹತ್ತಿರ ಜನರು ಬರುವದಿಲ್ಲ. ನಮಗೆ ವ್ಯಾಪಾರ ಆಗುವುದಿಲ್ಲ. ನಮಗೆ ಮೆಗಾಮಾರುಕಟ್ಟೆ ಸುತ್ತಮುತ್ತ ವ್ಯಾಪಾರ ಮಾಡಿಕೊಳ್ಳಲು ಜಾಗೆ ನೀಡಬೇಕು. ನಮಗೆ ಸೂಕ್ತ ಜಾಗೆ ನೀಡುವವರೆಗೂ ಧರಣಿ ಹಿಂಪಡೆಯುವುದಿಲ್ಲ ಎಂದು ಅಧಿಕಾರಿಗಳಿಗೆ ತಿಳಿಸಿದ ಅವರು ನಮಗೆ ನ್ಯಾಯ ಸಿಗುವವರೆಗೂ ಧರಣಿ ಮುಂದುವರಿಸುವದಾಗಿ ಹೇಳಿದರು.
ಧರಣಿಯಲ್ಲಿ ಟಿಪ್ಪು ಕ್ರಾಂತಿ ಸೇನೆಯ ಖಾಜಂಬರ ನದಾಫ, ಬೀದಿ ಬದಿಯ ವ್ಯಾಪಾರಸ್ಥರಾದ ಮಹಿಬೂಬ ಬಾಗವಾನ, ಶ್ರೀಶೈಲ ಅಂಬಾಗೋಳ, ಆಶೀಫ್ ಸೌದಾಗಾರ, ಶಂಕ್ರಯ್ಯ ಹಿರೇಮಠ, ಭಾರತಿ ಅಂಬಾಗೋಳ, ಶಾಂತಾಬಾಯಿ ಕಾಸರ, ಜಾಕೀರ ನದಾಫ, ಬಾಳು ಕಡಕದಾರ, ಡೋಂಗ್ರಿಸಾಬ ಬಾಗವಾನ, ದೇವಮ್ಮ ಮಾದರ, ಸೈದಾ ಬಾಗವಾನ, ರೇಷ್ಮಾ ಆಲಮೇಲ, ಶಿವಾನಂದ ಅಂಬಾಗೋಳ, ಅನ್ವರ ಬೈರವಾಡಗಿ, ಬಿ.ಡಿ.ಭೂತನಾಳ, ಲಕ್ಷ್ಮೀಬಾಯಿ ಜೋಗೇರ, ಡೋಂಗ್ರಿಮಾ ಬೈರವಾಡಗಿ, ಮಹಿಬೂಬಸಾಬ ಜಿರಗಾಳ, ಶ್ಯಾಮಶ್ಯಾದ ಬಿಜಾಪುರ, ಭಾಷಾ ಕಲಾದಗಿ, ಪ್ರಕಾಶ ಭೂತನಾಳ, ಯಾಸ್ಮೀನ ಗೊಳಸಂಗಿ, ರೇಖಾಬಾಯಿ ಜೋಗೇರ, ನಾಗೇಶ ಜೋಗೇರ, ಯಾಸೀನ ಗೊಳಸಂಗಿ, ಪರಶುರಾಮ ಕಡಕದಾರ, ಸಲೀಮಾ ಬಾಗವಾನ ಇತರರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.