ಬಸವನಬಾಗೇವಾಡಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕವು ೨೦೨೪ ನೇ ಸಾಲಿನಲ್ಲಿ ಕೊಡಮಾಡುವ ಜಿಲ್ಲಾ ವಾರ್ಷಿಕ ಪ್ರಶಸ್ತಿಗೆ ಬಸವನಬಾಗೇವಾಡಿ ತಾಲೂಕಿನ ಕನ್ನಡಪ್ರಭ ವರದಿಗಾರ, ಹಿರಿಯ ಪತ್ರಕರ್ತ ಬಸವರಾಜ ನಂದಿಹಾಳ, ವಿಜಯವಾಣಿ, ಉದಯವಾಣಿ ತಾಲೂಕು ವರದಿಗಾರ, ಹಿರಿಯ ಪತ್ರಕರ್ತ ಪ್ರಕಾಶ ಬೆಣ್ಣೂರ ಹಾಗೂ ಮನಗೂಳಿ ತಾಲೂಕಿನ ಪತ್ರಿಕಾ ವಿತರಕ ಶಿವಾಜಿ ಮೋರೆ ಅವರು ಆಯ್ಕೆಯಾಗಿದ್ದಾರೆ.
ಜು.೨೮ ರಂದು ವಿಜಯಪುರದ ಸೋಲಾಪುರ ರಸ್ತೆಯಲ್ಲಿರುವ ಪೊಲೀಸ್ ಪರೇಡ್ ಮೈದಾನದ ಎದುರು ಇರುವ ಪೊಲೀಸ್ ಸಮುದಾಯ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕವು ಮಧ್ಯಾನ್ಹ 3 ಗಂಟೆಗೆ ಹಮ್ಮಿಕೊಂಡಿರುವ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಜೀಜ ಬಳಬಟ್ಟಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಇಂದು ಬಸವರಾಜ ನಂದಿಹಾಳ, ಪ್ರಕಾಶ ಬೆಣ್ಣೂರ ಗೆ ಕಾನಿಪ ಪ್ರಶಸ್ತಿ ಪ್ರದಾನ
Related Posts
Add A Comment

