ವಿಜಯಪುರ: ವಿದ್ಯಾರ್ಥಿಗಳು ತಮ್ಮ ಆಸಕ್ತಿ ಯಾವುದರಲ್ಲಿ ಇದೆ ಎಂಬುದನ್ನು ಅರಿತು ತಮ್ಮ ಗುರಿ ಮುಟ್ಟಲು ಸತತ ಪ್ರಯತ್ನ ಮಾಡಿದಾಗ ಮಾತ್ರ ಯಶಸ್ಸು ದೊರುಕುವುದು ಎಂದು ಸಮಾಜ ಸೇವೆಕ ಫಯಾಜ ಕಲಾದಗಿ ಹೇಳಿದರು.
ಅವರು ನಗರದ ನ್ಯೂ ಬ್ರಿಲಿಯಂಟ್ ಶಾಲೆಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ಶ್ರೀ ಸಾಯಿ ಶಿಕ್ಷಣ ಸಂಸ್ಥೆ ವಿಜಯಪುರ, ಶ್ರೀ ಸ್ವಾಮಿ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾ ವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಎನ್.ಎಸ್.ಎಸ್ ನಿಂದ ಕಲಿತಕೊಂಡಿದ್ದು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಎನ್ಎಸ್ಎಸ್ ದಿಂದ ಪ್ರತಿಯೊಬ್ಬರಲ್ಲಿ ಶಿಸ್ತು ಸಂಯಮ ಬೆಳೆಯುವುದು. ದೇಶ ರಾಷ್ಟ್ರ ಅಭಿವೃದ್ಧಿ ಹೊಂದಬೇಕಾದರೆ ಯುವಕರ ಪಾತ್ರ ಮಹತ್ವದ್ದಾಗಿದೆ ಎಂದರು.
ಈ ಸಂದರ್ಭದಲ್ಲಿ ಸಾಯಿ ಶಿಕ್ಷಣ ಸಂಸ್ಥೆಯತ ಅಧ್ಯಕ್ಷರಾದ ಡಾ. ಬಿ.ಎಂ. ಬಿರಾದಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಎನ್.ಎಸ್.ಎಸ್ ಇದು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವುದರ ಜೊತೆಗೆ ಬದುಕು ಯಾವ ರೀತಿ ಇರಬೇಕೆಂದು ತಿಳಿಸಿಕೊಡುತ್ತದೆ ಎಂದರು.
ನಮ್ಮ ಸಂಸ್ಥೆಯಲ್ಲಿ ಸತತವಾಗಿ 7 ದಿನಗಳಕಾಲ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಶಿಬಿರ ಅಚ್ಚುಕಟ್ಟಾಗಿ ನೆರವೇರಿದೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವೆ ಎಂದರು.
ಈ ಸಂದರ್ಭದಲ್ಲಿ ಎನ್.ಎಸ್.ಎಸ್. ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಪ್ರಕಾಶ ರಾಠೊಡ ಎನ್.ಎಸ್. ಎಸ್ ಕುರಿತು ಸವಿವರವಾಗಿ ವಿವರಿಸಿದರು.
ವೇದಿಕೆ ಮೇಲೆ ವಾಸ್ವಿ ಸೌಹಾರ್ದ ಸಂಘದ ಅಧ್ಯಕ್ಷ ಜಿ.ಎಂ.ಮಾದನಶೆಟ್ಟಿ, ಉಪ ಪ್ರಾಚಾರ್ಯ ಸಂತೋಷ ಹಳ್ಳಿ, ಶಾಲೆಯ ಆಡಳಿತಾಧಿಕಾರಿ ಪುನೀತಗೌಡ ಬಿರಾದಾರ ಇದ್ದರು.
ಈ ಸಂದರ್ಭದಲ್ಲಿ ಶಾಲೆಯ ಗುರುಮಾತೆಯರು, ಗುರುಗಳು, ಶಿಬಿರಾರ್ಥಿಗಳು ನೂರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

