ವಿಜಯಪುರ: ಶಿಕ್ಷಣ ಕ್ಷೇತ್ರದಲ್ಲಿ ಕಲಿಯುವ ವಿದ್ಯಾರ್ಥಿಗಳು, ಶಿಕ್ಷಕರು, ನೀತಿ ನಿರೂಪಕರು ಮತ್ತು ಪಾಲುದಾರರ ನಡುವೆ ಸಂಯೋಗ ಮತ್ತು ನಾವಿನ್ಯತೆಯ ಮನೋಭಾವವನ್ನು ಬೆಳೆಸುವ ಗುರಿಯನ್ನು ಸಪ್ತಾಹ ಹೊಂದಿದೆ ಎಂದು ಬಂಜಾರಾ ಪ್ರೌಢ ಶಾಲೆಯ ಮುಖ್ಯ ಗುರು ಇ.ಡಿ.ಲಮಾಣಿ ಹೇಳಿದರು.
ಸೋಮವಾರದಂದು ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಪ್ರೌಢ ಶಾಲೆಯಲ್ಲಿ ಇಕೋಕ್ಲಬ್ ವತಿಯಿಂದ “ಶಿಕ್ಷಾ ಸಪ್ತಾಹ” ಕಾರ್ಯಕ್ರಮದಡಿಯಲ್ಲಿ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಮಾತನಾಡಿದ ಅವರು. ಇದು ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು, ಸವಾಲುಗಳನ್ನು ಚರ್ಚಿಸಲು ಮತ್ತು ಗುಣಮಟ್ಟದ ದೃಷ್ಟಿಕೋನವನ್ನು ತಳಮಟ್ಟದಲ್ಲಿ ಸಾಕಾರಾಗೊಳಿಸುವ ನಿಟ್ಟಿನಲ್ಲಿ ಮುಂದಿನ ಹಾದಿಯನ್ನು ರೂಪಿಸಲು ಒಂದು ವೇದಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿಜ್ಞಾನ ಶಿಕ್ಷಕ ಆರ್.ಎನ್.ಬಕಾಟೆ ಮಾತನಾಡುತ್ತ. ಈ ಸಪ್ತಾಹದ ಅಂಗವಾಗಿ ಶಾಲೆಗಳಲ್ಲಿ ಮಕ್ಕಳ ಭವಿಷ್ಯವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ. ಗುರಿಯು ಪ್ರತಿ ದಿನವೂ ಒಂದು ನಿರ್ದಿಷ್ಟ ವಿಷಯದ ಮೇಲೆ ಕೇಂದ್ರೀಕರಿಸಿದ ಚಟುವಟಿಕೆಗಳನ್ನು ಸೇರಿಸುವ ಮೂಲಕ ಮಕ್ಕಳ ತಾರ್ಕಿಕ ಸಾಮರ್ಥ್ಯಗಳನ್ನು ಅಭಿವೃದ್ಧಿ ಪಡಿಸುವುದು. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಕಾರ್ಯಕ್ರಮವನ್ನು ಶ್ರದ್ಧೆಯಿಂದ ಕಾರ್ಯಗತಗೊಳಿಸಲು ಇಲಾಖಾ ಅಧಿಕಾರಿಗಳಿಗೆ ನಿರ್ದಿಷ್ಟ ಸೂಚನೆಗಳನ್ನು ನೀಡುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಇಲಾಖೆಯು ಎಲ್ಲಾ ಪ್ರಯತ್ನ ಮಾಡಿದೆ ಎಂದು ಹೇಳಿದರು.
ಈ ವೇಳೆಯಲ್ಲಿ ಎ.ಎಂ.ನಾಗೊಂಡ, ಜೆ.ಕೆ.ರಾಠೋಡ, ಎಸ್.ಡಿ.ಚವ್ಹಾಣ್, ಎಸ್.ಪಿ.ಧಡೇಕರ, ಎಸ್.ಬಿ.ಒಡೆಯರ, ಬಿ.ಎಸ್.ದ್ಯಾಬೇರಿ, ಎಸ್.ಎಂ.ಮಾಳಿ, ಆರ್.ಎಸ್.ಹಿರೇಮಠ, ಎಸ್.ಎಲ್.ದೊಡಮನಿಯವರು ಸೇರಿದಂತೆ ಶಾಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

