ಮುದ್ದೇಬಿಹಾಳ : ತಾಲೂಕಿನ ಮಲಗಲದಿನ್ನಿ ಗ್ರಾಮದ ಹೊಲವೊಂದರಲ್ಲಿ ಅಕ್ರಮವಾಗಿ ಬೆಳೆದ ಗಾಂಜಾ ಬೆಳೆಯ ಮೇಲೆ ಪೊಲೀಸರು ದಾಳಿ ನಡೆಸಿ ಅಕ್ರಮ ಗಾಂಜಾ ಮತ್ತು ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಬಸವರಾಜ ಮಲ್ಲೇಶಪ್ಪ ಬಿರಾದಾರ ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ ನೇತೃತ್ವದ ತಂಡ ದಾಳಿ ನಡೆಸಿ ಗಿಡದ ಸಮೇತ ಒಟ್ಟು ೩೬.೮೨೦ ಕೆಜಿ ಯಷ್ಟು ಅಕ್ರಮ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ದಾಳಿಯಲ್ಲಿ ಪಿಎಸ್ಐ ಆರೀಫ್ ಮುಶಾಪುರಿ ಸಿಬ್ಬಂದಿಗಳಾದ ಗೋವಿಂದ ಗೆಣ್ಣೂರ, ವಿರೇಶ ಹಾಲಗಂಗಾಧರಮಠ, ಮಲ್ಲನಗೌಡ ಬೋಳರೆಡ್ಡಿ, ಚಿದಾನಂದ ಸುರಗಿಹಳ್ಳಿ, ಶ್ರೀಕಾಂತ ಬಿರಾದಾರ, ನರಸಿಂಹ ಚೌದರಿ, ಶಿವರಾಜ ನಾಗರೆಡ್ಡಿ, ಮಾಳಪ್ಪ ನಾಲತವಾಡ, ರವಿ ಲಮಾಣಿ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment