Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡ ಸಾಹಿತ್ಯ ಉಳಿಸುವಲ್ಲಿ ಪರಿಷತ್ತಿನ ಪಾತ್ರ ಅನನ್ಯ :ಮಸಬಿನಾಳ ಶ್ರೀ
(ರಾಜ್ಯ ) ಜಿಲ್ಲೆ

ಕನ್ನಡ ಸಾಹಿತ್ಯ ಉಳಿಸುವಲ್ಲಿ ಪರಿಷತ್ತಿನ ಪಾತ್ರ ಅನನ್ಯ :ಮಸಬಿನಾಳ ಶ್ರೀ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಸಾವಿರಾರು ವರ್ಷಗಳ ಇತಿಹಾಸ ಇರುವ ಕನ್ನಡ ಸಾಹಿತ್ಯ ಪ್ರತಿ ಮನೆ ಮನಗಳಿಗೆ ಮುಟ್ಟಿಸುವ ಕೆಲಸ ಶ್ರೀ ಸಾಮಾನ್ಯರದು. ಕಬ್ಬಿಣದ ಕಡಲೆಯಂತಿರುವ ಕನ್ನಡ ಸಾಹಿತ್ಯವನ್ನು ಸರಳಿಕರಣಗೊಳಿಸಿ ಸಾಮನ್ಯರು ಅಪ್ಪಿಕೊಳ್ಳುವಂತ ಸಾಹಿತ್ಯವನ್ನು ರಚಿಸಿದವರು ವಚನಕಾರರು. ಇಂತಹ ವಚನಗಳನ್ನು ಉಳಿಸುವ ಕೆಲಸ ಶತಮಾನಗಳಿಂದಲೂ ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತ ಬಂದಿದೆ. ಎಂದು ಮಸಬಿನಾಳ ದಾಸೋಹ ವಿರಕ್ತಮಠದ ಸಿದ್ಧರಾಮ ಸ್ವಾಮೀಜಿ ಅಭಿಪ್ರಾಯ ಪಟ್ಟರು.
ರವಿವಾರ ಕನ್ನಡ ಸಾಹಿತ್ಯ ಪರಿಷತ್ತು ಸಭಾಬವನದಲ್ಲಿ ಜಿಲ್ಲಾ ನಗರ ತಾಲೂಕ ಘಟಕಗಳ ಆಶ್ರಯದಲ್ಲಿ ದಿ ಎಸ್ ಜಿ ಬಗಲಿ, ಲಿಂ ಮುದಕಯ್ಯ ಮತ್ತು ಶಂಕರೆಮ್ಮೆ ಇವರ ಸ್ಮರಣಾರ್ಥ ಹಮ್ಮಿಕೊಂಡ ಎರಡು ದತ್ತಿ ನಿಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ ನಾಡುನುಡು ನೆಲ ಜಲ ಭಾಷೆ ಸಂಸ್ಕೃತಿ ಉಳಿಸಿ ಬೆಳಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಪರಿಷತ್ತಿನ ಕಾರ್ಯ ಅನನ್ಯ ಎಂದರು.
ಅಧ್ಯಕ್ಷತೆ ವಹಿಸಿದ ಚನ್ನಬಸವ ಸಾಹಿತ್ಯ ವೇದಿಕೆ ಅಧ್ಯಕ್ಷ ವಿವೇಕಾನಂದ ಕಲ್ಯಾಣಶೆಟ್ಟಿ ಮಾತನಾಡಿ ಕನ್ನಡ ಕಟ್ಟುವ ಕೆಲಸವನ್ನು ಎಲ್ಲರೂ ಮಾಡಬೇಕಿದೆ ಪ್ರಕಟವಾಗದ ಅನೇಕ ಸಾಹಿಗಳ ಸಾಹಿತ್ಯ ಪ್ರಕಟಿಸುವ ಕಾರ್ಯ ಆಗಬೇಕಿದೆ. ವಿಶ್ವ ಬಂಧುತ್ವ ಸಾರುವ ಸಂದೇಶ ವಚನಗಳಲ್ಲಿ ಅಡಗಿದೆ ಎಂದರು.
ಕನ್ನಡ ಸಾಹಿತ್ಯ ಕುರಿತು ಉಪನ್ಯಾಸ ನೀಡಿದ ಸಾಹಿತಿ ಅನ್ನಪೂರ್ಣ ಚೋಳಖೆ ಕನ್ನಡ ಸಾಹಿತ್ಯಕ್ಕೆ ಸುದೀರ್ಘ ಇತಿಹಾಸವಿದೆ ಪಂಪನಿಂದ ಸಿಂಪಿ ಲಿಂಗಣ್ಣ ವರೆಗೆ ಬೆಳದು ಬಂದಿದೆ. ನಮ್ಮ ಭಾಗದ ಸಿಂಪಿ ಲಿಂಗಣ್ಣ, ಜಯದೇವಿ ತಾಯಿ ಲಿಗಾಡೆ, ಫ ಗು ಹಳಕಟ್ಟಿ ಅವರು ಆಖಿಲ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಶ್ರೇಯಸ್ಸು ನಮ್ಮ ಜಿಲ್ಲೆಗೆ ಸಲ್ಲುತ್ತದೆ ಎಂದರು.
ವಚನ ಸಾಹಿತ್ಯ ಕುರಿತು ಉಪನ್ಯಾಸ ನೀಡಿದ ಚಡಚಣ ತಾಲೂಕ ವಿದ್ಯಾ ಕಲ್ಯಾಣಶೆಟ್ಟಿ ವಚನ ಸಾಹಿತ್ಯ ಸಮುದ್ರದಂತೆ, ಮೊದಲಬಾರಿಗೆ ಸಮಾಜದಲ್ಲಿರುವ ಮೂಢನಂಬಿಕೆ, ಕಂದಾಚಾರ, ಜಾತಿ ವ್ಯವಸ್ಥೆ ಮತ್ತು ಮಹಿಳಾ ಸಮಾನತೆ ಕುರಿತು ಮಾತನಾಡಿದ್ದೇ ಶರಣ ಸಾಹಿತ್ಯ. ರಾಯಮ್ಮ , ಗೊಗ್ಗವ್ವೆ, ನಿಂಗಮ್ಮ, ಕಲ್ಯಾಣ್ಣಮ್ಮ, ಬೊಂತಾದೇವಿ, ಕೇಚಲದೇವಿ ರಂತ ವಚನ ರಚಿಸುವದರ ಮೂಲಕ ಸ್ತ್ರೀ ಕುಲಕ್ಕೆ ದಾರಿದೀಪವಾದರು ಎಂದರು. ಅತಿಥಿಗಳಾದ ಸಮಾಜ ಚಿಂತಕ ಮುನ್ನಾ ಭಕ್ಷಿ ಹಾಗೂ ಹಿರಿಯ ಪತ್ರಕರ್ತ ಅಲ್ಲಮಪ್ರಭು ಮಲ್ಲಿಕಾರ್ಜುನಮಠ ಮಾತನಾಡಿದರು.
ವೇದಿಕೆ ಮೇಲೆ ಉದ್ದ್ಯಮಿ ಪ್ರಕಾಶ ಚಿಕ್ಕಲಕಿ, ಧಾರ್ಮಿಕ ಚಿಂತಕ ಮಲ್ಲಿಕಾರ್ಜುನ ಕುಂಬಾರ,
ಚೈತನ್ಯ ಮುದ್ದೇಬಿಹಾಳ ಪ್ರಾರ್ಥಿಸಿದರು, ಸುಭಾಷ್ ಕನ್ನೂರ ಸ್ವಾಗತಿಸಿದರು, ಡಾ ಸಂಗಮೇಶ ಮೇತ್ರಿ ಪ್ರಾಸ್ತಾವಿಕ ಮಾತನಾಡಿದರು. ಡಾ ಮಾಧವ ಗುಡಿ ನಿರೂಪಿಸಿದರು, ಶೋಭಾ ಬಡಿಗೇರ ವಂದಿಸಿದರು.
ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾ ಅಧ್ಯಕ್ಷ ಹಾಸಿಂಪೀರ ವಾಲೀಕಾರ, ಪದಾಧಿಕಾರಿಗಳಾದ ರಾಜಾಸಾಬ ಶಿವನಗುತ್ತಿ, ಕಮಲಾ ಮುರಾಳ , ವಿದ್ಯಾವತಿ ಅಂಕಲಗಿ, ವಿಜಯಲಕ್ಷ್ಮಿ ಹಳಕಟ್ಟಿ, ಜಿ ಎಸ್ ಬಳ್ಳೂರ, ಬಸವರಾಜ ಆಜೂರ, ಅಬ್ದುಲ್ ರಜಾಕ ಮುಲ್ಲಾ, ಕೆ ಎಸ್ ಹಣಮಾಣಿ, ಕೆ ಎಫ್ ಅಂಕಲಗಿ, ಪ್ರದೀಪ ಕುಲಕರ್ಣಿ, ಎಸ್ ಆಯ್ ಹೊನವಾಡ, ಆಶಾ ಬಿರಾದಾರ, ಅರ್ಜುನ ಶಿರೂರ, ಲತಾ ಗುಂಡಿ, ಗಂಗಮ್ಮ ರಡ್ಡಿ, ಡಾ ಡಿ ಆರ್ ಪಾಟೀಲ, ಅಮೋಘಸಿದ್ಧ ಪೂಜಾರಿ, ಶ್ರೀಕಾಂತ ನಾಡಗೌಡ, ಮಹಾದೇವ ಸ್ವಾಮಿ ಆರ್, ರಿಯಾನ ಮಾಲಿಕ್ ಹಳ್ಳೂರ, ಭಾಗೀರಥಿ ಶಿಂದೆ ಮುಂತಾದವರು ಉಪಸ್ಥಿತಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.