ಸಿಂದಗಿ: ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆ ವಿಜಯಪುರ, ಶ್ರೀ ಪದ್ಮರಾಜ ಮಹಿಳಾ ಸ್ವತಂತ್ರ ಪಪೂ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ೨೦೨೪-೨೫ನೆಯ ಸಾಲಿನ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಅ.೦೬ರಂದು ಬೆಳಿಗ್ಗೆ ೯ಗಂಟೆಗೆ ಆರ್.ಬಿ.ಬೂದಿಹಾಳ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ ಎಂದು ಸಂಯೋಜಕ, ಪ್ರಾಚಾರ್ಯ ಎಮ್,ಎಸ್.ಹೈಯಾಳಕರ ತಿಳಸಿದ್ದಾರೆ.
ಉದ್ಘಾಟನಾ ಸಮಾರಂಭದ ಪಾವನ ಸಾನಿಧ್ಯವನ್ನು ಸಾರಂಗಮಠದ ಡಾ,ಪ್ರಭುಸಾರಂಗದೇವ ಶಿವಾಚಾರ್ಯರು ವಹಿಸಿಕೊಳ್ಳುವರು. ಉದ್ಘಾಟನೆಯನ್ನು ಶಾಸಕ ಅಶೋಕ ಮನಗೂಳಿ ನೇರವೇರಿಸುವರು. ಅತಿಥಿಗಳಾಗಿ ವಿಜಯಪುರ ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆ ಉಪ ನಿರ್ದೇಶಕ ಡಾ.ಸಿ.ಕೆ.ಹೊಸಮನಿ, ಅಧ್ಯಕ್ಷತೆಯನ್ನು ಪ್ರಾಚಾರ್ಯ ಎಮ್,ಎಸ್.ಹೈಯಾಳಕರ ವಹಿಸುವರು. ಸಾಯಂಕಾಲ ೪ಗಂಟೆಗೆ ಪಾರಿತೋಷಕ ವಿತರಣಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಇದರ ಪಾವನ ಸಾನಿಧ್ಯವನ್ನು ಸಾರಂಗಮಠದ ಡಾ,ಪ್ರಭುಸಾರಂಗದೇವ ಶಿವಾಚಾರ್ಯರು ವಹಿಸಿಕೊಳ್ಳುವರು. ಸಿಂದಗಿ ಪಿಎಸ್ಐ ಆರೀಫ್ ಮುಷಾಪುರಿ ಪಾರಿತೋಷಕ ವಿತರಣೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಎಮ್,ಎಸ್.ಹೈಯಾಳಕರ ವಹಿಸುವರು. ಅತಿಥಿಗಳಾಗಿ ಆರ್.ಡಿ.ಪಾಟೀಲ ಕಾಲೇಜನ ನಿವೃತ್ತ ಶಿಕ್ಷಕ ಕೆ.ಹೆಚ್.ಸೋಮಾಪೂರ, ಜಿ.ಪಿ.ಪೋರವಾಲ ಹಾಗೂ ವ್ಹಿ.ವ್ಹಿ.ಸಾಲಿಮಠ ಮಹಾವಿದ್ಯಾಲಯದ ದೈಹಿಕ ನಿರ್ದೇಶಕ ರವಿ ಗೋಲಾ ಇರಲಿದ್ದಾರೆ ಎಂದು ಸಂಘಟನಾ ಕಾರ್ಯದರ್ಶಿ ದೈಹಿಕ ಉಪನ್ಯಾಸಕ ಗವಿಸಿದ್ದಪ್ಪ ಆನೆಗುಂದಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
