ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಷಡ್ಯಂತ್ರಕ್ಕೆ ನಾವು ಮಣಿಯುವುದಿಲ್ಲ. ಜನರ ಬಳಿಗೆ ಹೋಗಿ ವಾಸ್ತವವನ್ನು ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಬಿಜೆಪಿಯು ಸರ್ಕಾರಗಳನ್ನು ಉರುಳಿಸುವ ಇತಿಹಾಸವನ್ನು ಹೊಂದಿದೆ. ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರದ ಬೆಂಬಲಕ್ಕೆ ಬರುತ್ತಿಲ್ಲ. ಬಜೆಟ್ನಲ್ಲಿ ರಾಜ್ಯದ ವಿರುದ್ಧ ತಾರತಮ್ಯ ಮಾಡಿದೆ, ಮತ್ತೊಂದೆಡೆ, ಹಿಂದಿನಂತೆ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನ ನಡೆಸುತ್ತಿದ್ದಾರೆ, ಆದರೆ, ಈಗ ಸಮಯ ಬದಲಾಗಿದೆ. ಕೇಂದ್ರ ಸರ್ಕಾರ ಮೊದಲಿನಷ್ಟು ಬಲಿಷ್ಠವಾಗಿಲ್ಲ ಎಂಬುದು ಅವರಿಗೆ ಗೊತ್ತಿಲ್ಲ. ನಮಗೆ ವಿಶ್ವಾಸವಿದೆ, ಪಕ್ಷದಲ್ಲಿ ವಿಶ್ವಾಸವಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ. ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನಗಳನ್ನು ರಾಜ್ಯದ ಜನತೆಗೆ ವಿವರಿಸಲಾಗುವುದು ಎಂದು ಹೇಳಿದರು.
Subscribe to Updates
Get the latest creative news from FooBar about art, design and business.
Related Posts
Add A Comment

