ಆಲಮೇಲ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲ ಜೀವನ ಮಷೀನ್ ( ಜೆ,ಜೆ,ಎಮ್) ಯೋಜನೆಯ ಅಡಿಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ಮತ್ತು ಆಲಮೇಲ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜಲ ಜೀವನ ಮಷೀನ್ ಕಾಮಗಾರಿಗಳು ನಡೆಯುತ್ತಿದ್ದು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಈ ಯೋಜನೆಗೆ ಸಂಬಂಧಿಸಿದ ಎಲ್ಲಾ ಮಾರ್ಗ ಸೂಚಿಗಳನ್ನು ಗಾಳಿಗೆ ತೂರಿ ಗುತ್ತಿಗೆದಾರರಿಗೆ ಅನಕೂಲು ಮಾಡಿ ಕೊಡುವ ನಿಟ್ಟಿನಲ್ಲಿ ಸಹಕಾರ ನೀಡಿದ್ದಾರೆ ಎಂದು ಸಮಾಜ ಸೇವಕ ಚಿದಾನಂದ ದೇಸಾಯಿ ಆರೋಪಿಸಿದ್ದಾರೆ.
ಈ ಕುರಿತು ದಿನಾಂಕ ೦೧-೦೩-೨೦೨೪ ರಂದು ಜಿಲ್ಲೆಯ ಉನ್ನತ ಅಧಿಕಾರಿಗಳಿಗೆ ದಾಖಲೆ ಸಮೇತ ಮತ್ತು ಬರವಣಿಗೆಯ ಮೂಲಕ ಮನವಿ ಕೊಟ್ಟಿದ್ದೇನೆ ಮನವಿ ಕೊಟ್ಟು ಆರು ತಿಂಗಳ ಗತಿಸಿವೆ ಇಲ್ಲಿಯ ವರೆಗೆ ಭ್ರಷ್ಟ ಅಧಿಕಾರಿಗಳ ಹಾಗೂ ಗುತ್ತಿಗೆದಾರರಿಗೆ ಯಾವುದೇ ಕ್ರಮ ಕೈಗೊಂಡಿಲ್ಲ ಮತ್ತು ತಂಡ ರಚನೆ ಮಾಡಿ ಸ್ಥಾನಿಕ ಚೌಕಸ್ಸಿ ಕೂಡಾ ಮಾಡಿಲ್ಲ ಹೀಗಾಗಿ ಸರಕಾರದ ದುಡ್ಡು ಪೋಲಾಗಿ ಕಾಮಗಾರಿಗಳು ಹಳ್ಳ ಹಿಡಿದಿವೆ ಇದಕ್ಕೆ ಸಂಬದ ಪಟ್ಟ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಹಾಗೂ ಕರ್ತವ್ಯ ದುರುಪಯೋಗ ಹಣದ ದುರಾಸೆಯಿಂದ ಗುತ್ತಿಗೆದಾರರೊಂದಿಗೆ ಶಾಮೀಲಾಗಿ ಕಳಪೆ ಮಟ್ಟದ ಕಾಮಗಾರಿಗಳು ಮಾಡುತ್ತಿರುವುದು ಕಂಡು ಬರುತ್ತಿದೆ ಕಾರಣ ಜಿಲ್ಲಾ ದಂಡಾಧಿಕಾರಿಗಳು ಮತ್ತು ಜಿಲ್ಲಾ ಕಾರ್ಯ ನಿರ್ವಾಹಕ ಅಧಿಕಾರಿಗಳು ದೂರಿನನ್ವಯ ಕಾಮಗಾರಿಗಳು ಕುಲಂಕುಷವಾಗಿ ಪರಿಶೀಲಿಸಿ ಎಲ್ಲಾ ಕಾಮಗಾರಿಗಳ ಬಿಲ್ಲನ್ನು ತಡೆ ಹಿಡಿದು ಕಾಮಗಾರಿಯನ್ನು ಭೌತಿಕವಾಗಿ ಪರಿಶೀಲನೆ ಮಾಡಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾ ದಂಡಾಧಿಕಾರಿಗಳಲ್ಲಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಅಗ್ರಹ ಮಾಡಿದ್ದಾರೆ.
ಇದೇ ರೀತಿ ವಿಳಂಬ ನೀತಿ ಅನುಸರಿಸಿದರೆ ಜನಪರ ಸಂಘಟನೆ ಒಳಗೊಂಡು ಪ್ರತಿಭಟನೆ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

