ಬಸವನಬಾಗೇವಾಡಿ: ವಿದ್ಯಾರ್ಥಿಗಳಲ್ಲಿ ಕ್ರೀಡಾಮನೋಭಾವ ಬೆಳೆಸುವಲ್ಲಿ ದೈಹಿಕ ಶಿಕ್ಷಕರ ಪಾತ್ರ ಬಹಳಷ್ಟು ಮಹತ್ವವಿದೆ. ವಿದ್ಯಾರ್ಥಿಗಳು ಸೋಲು-ಗೆಲುವು ಸಮಾನವಾಗಿ ಸ್ವೀಕರಿಸುವ ಮೂಲಕ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕೆಂದು ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.
ತಾಲೂಕಿನ ಇವಣಗಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರಸಮನ್ವಾಧಿಕಾರಿಗಳ ಕಾರ್ಯಾಲಯ, ನರಲಸಗಿ ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನರಸಲಗಿ ಗ್ರಾಮ ಪಂಚಾಯಿತಿ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಣದಷ್ಟೇ ಕ್ರೀಡೆಗೂ ಮಹತ್ವ ನೀಡಬೇಕು. ಎಲ್ಲ ಮಕ್ಕಳು ತಮ್ಮ ಪಠ್ಯ ಚಟುವಟಿಕೆಗಳೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಭಾಗವಹಿಸುವ ಮೂಲಕ ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಬೇಕೆಂದರು.
ಧ್ವಜಾರೋಹಣ ನೆರವೇರಿಸಿದ ಕ್ಷೇತ್ರಶಿಕ್ಷಣಾಧಿಕಾರಿ ವಸಂತ ರಾಠೋಡ ಮಾತನಾಡಿ, ಕ್ರೀಡೆಗಳು ಮಕ್ಕಳಲ್ಲಿ ಕಲಿಯುವ ಚೈತನ್ಯ ಮೂಡಿಸುತ್ತವೆ. ಮಕ್ಕಳು ಕ್ರೀಯಾಶೀಲತೆಯಿಂದ ಆಟೋಟಗಳಲ್ಲಿ ಭಾಗವಹಿಸುವಂತಾಗಬೇಕು. ನಿರ್ಣಾಯಕರು ನಿರ್ಣಯವನ್ನು ಪ್ರಾಮಾಣಿಕವಾಗಿ ನೀಡುವ ಮೂಲಕ ಉತ್ತಮ ಕ್ರೀಡಾಪಟುವನ್ನು ಆಯ್ಕೆ ಮಾಡಬೇಕೆಂದರು.
ನರಸಲಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಗನಗೌಡ ಬಿರಾದಾರ ಕ್ರೀಡಾಜ್ಯೋತಿ ಸ್ವೀಕರಿಸಿದರು. ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ಅವರು ಬಲೂನು ಹಾರಿಸುವ ಮೂಲಕ ಕ್ರೀಡಾಕೂಟಕ್ಕೆ ಶುಭಕೋರಿ ಮಾತನಾಡಿದರು.
ಸಾನಿಧ್ಯವನ್ನು ಲಾಯಪ್ಪ ಪೂಜಾರಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಬಿ.ಪಿ.ನಾಗಾವಿ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎಸ್.ಎಸ್.ಅವಟಿ, ಎಸ್ಡಿಎಂಸಿ ಅಧ್ಯಕ್ಷ ಮಂಜು ಇಟಗಿ, ಸಿಆರ್ಪಿ ಎಸ್.ಬಿ.ದಳವಾಯಿ, ಎಸ್.ಬಿ.ಬಾಗೇವಾಡಿ, ಕಲ್ಲು ಸೊನ್ನದ, ಬಿ.ವ್ಹಿ.ಚಕ್ರಮನಿ, ಎಸ್.ಎನ್.ಮಿಣಜಗಿ, ಪಿ.ಎ.ಇನಾಮದಾರ, ಎಸ್.ಸಿ.ಹಳ್ಳಿ, ನಿಂಗಪ್ಪ ಬಾಗೇವಾಡಿ, ಯಲಗೂರಪ್ಪ ಸುಭಾನಪ್ಪರ, ಸಿದ್ದಪ್ಪ ಅವಜಿ ಇತರರು ಇದ್ದರು. ಬಿ.ಬಿ.ಚಿಂಚೋಳಿ ಪ್ರತಿಜ್ಞಾ ವಿಧಿ ಬೋಧಿಸಿದರು. ಎಸ್.ಬಿ.ಪಾಗದ ಸ್ವಾಗತಿಸಿದರು. ಎಸ್.ಎಸ್.ಇಂಗಳೇಶ್ವರ ನಿರೂಪಿಸಿದರು. ಸಿದ್ದು ಬಾಗೇವಾಡಿ ವಂದಿಸಿದರು.
Subscribe to Updates
Get the latest creative news from FooBar about art, design and business.
ಕ್ರೀಡಾಸಕ್ತಿ ಬೆಳೆಸುವಲ್ಲಿ ದೈಹಿಕ ಶಿಕ್ಷಕರ ಪಾತ್ರ ದೊಡ್ಡದು :ಪಟ್ಟಣಶೆಟ್ಟಿ
Related Posts
Add A Comment

