Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲೌಕಿಕ-ಅಲೌಕಿಕ ಎರಡೂ ವಿದ್ಯೆಗಳಿಗೂ ಸರಸ್ವತಿ ಒಡತಿ :ಲಮಾಣಿ
(ರಾಜ್ಯ ) ಜಿಲ್ಲೆ

ಲೌಕಿಕ-ಅಲೌಕಿಕ ಎರಡೂ ವಿದ್ಯೆಗಳಿಗೂ ಸರಸ್ವತಿ ಒಡತಿ :ಲಮಾಣಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಸರಸ್ವತಿ ವಿದ್ಯಾಧಿದೇವತೆ; ನಮಗೆ ಬೇಕಾದ ಎಲ್ಲ ವಿಧದ ವಿದ್ಯೆಗಳನ್ನೂ ದಯಪಾಲಿಸುವವಳು. ವಿದ್ಯೆ ನಮಗೆ ಯಾವ ರೂಪದಲ್ಲಿಯೂ ಒದಗಬಹುದು. ಬರಿ ವಿದ್ಯೆಯನ್ನಷ್ಟೆ ಗಳಿಸಿದರೆ ಪ್ರಯೋಜನವಿಲ್ಲ; ಅದನ್ನು ಸರಿಯಾಗಿ ಬಳಸಲು ಬುದ್ಧಿಯೂ ಬೇಕು. ಇಂಥ ಬುದ್ಧಿಯನ್ನು ಕೊಡುವವಳೂ ಸರಸ್ವತಿಯೇ, ಸರಸ್ವತಿಯು ಲೌಕಿಕ-ಅಲೌಕಿಕ ಎರಡೂ ವಿದ್ಯೆಗಳಿಗೂ ಒಡತಿ ಎಂದು ಬಂಜಾರಾ ಪ್ರೌಢ ಶಾಲೆಯ ಮುಖ್ಯ ಗುರು ಇ.ಡಿ.ಲಮಾಣಿ ಹೇಳಿದರು.
ಗುರುವಾರದಂದು ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಸರಸ್ವತಿ ಪೂಜಾ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ನಾವಿಂದು ಲೌಕಿಕದಲ್ಲಿಯೇ ಮುಳುಗಿ, ನಮ್ಮ ಅಲೌಕಿಕ ಸ್ವರೂಪವನ್ನು ಮರೆಯುತ್ತಿದ್ದೇವೆ. ಹೀಗಾಗಿಯೇ ಪರಸ್ಪರ ಭೇಧ, ವೈರ, ಕ್ರೌರ್ಯ. ಸರಸ್ವತಿಯ ಆರಾಧನೆ ಎಂದರೆ ಅಂತರಂಗ-ಬಹಿರಂಗದ ಸಾಮರಸ್ಯ. ಈ ಸಾಮರಸ್ಯದಿಂದಲೇ ಒಳಗೂ ಹೊರಗೂ ಸೌಹಾರ್ದವನ್ನು ಸಾಧಿಸಲಾದೀತು ಎಂದು ಹೇಳಿದರು.
ಸರಸ್ವತಿ ಮಾತೆ ಪೂಜೆ ನೆರವೇರಿಸಿ ಮಾತನಾಡಿದ ಬೋರಾವತ್ತರವರು. ಇಂದು ನಾವು ಹಲವು ವಿದ್ಯೆಗಳನ್ನು ಸಂಪಾದಿಸುತ್ತಿದ್ದೇವೆ. ಆದರೆ ನೆಮ್ಮದಿಯನ್ನು ಮಾತ್ರ ಕಾಣುತ್ತಿಲ್ಲ. ಇಡೀ ಜಗತ್ತು ರಾಗ-ದ್ವೇಷಗಳಲ್ಲಿ ಮುಳುಗಿದೆ; ಎಲ್ಲೆಲ್ಲೂ ಅಶಾಂತಿ. ಇದಕ್ಕೆ ಕಾರಣವೇ ಅವಿದ್ಯೆ. ನಾವು ವಿದ್ಯೆಯ ದಿಟವಾದ ಅರ್ಥದಿಂದ ದೂರ ಸರಿದಿದ್ದೇವೆ. ಹೀಗಾಗಿ ನಾವು ಸಂಪಾದಿಸುತ್ತಿರುವ ವಿದ್ಯೆಯು ಸತ್ವಗುಣಪ್ರಧಾನವಾಗಿಲ್ಲ ಎಂದು ಹೇಳಿದರು.
ಸರಸ್ವತಿ ಪೂಜೆ ಸಮಾರಂಭವು ವೇದ ಸ್ತೋತ್ರಗಳು ಮತ್ತು ಮಂತ್ರಗಳ ಪಠಣದೊಂದಿಗೆ ಪ್ರಾರಂಭವಾಯಿತು. ಸರಸ್ವತಿ ದೇವಿಯ ಆಶೀರ್ವಾದವನ್ನು ಆಹ್ವಾನಿಸಲಾಯಿತು. ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ತಮ್ಮ ಪ್ರಾರ್ಥನೆಗಳನ್ನು ಸಲ್ಲಿಸಲು ಮತ್ತು ಶೈಕ್ಷಣಿಕ ಉತ್ಕೃಷ್ಟತೆ ಹಾಗೂ ಬೌದ್ಧಿಕ ಬೆಳವಣಿಗೆಗೆ ದೈವಿಕ ಮಾರ್ಗದರ್ಶನವನ್ನು ಪಡೆಯಲು ಒಟ್ಟುಗೂಡಿದರು. ಒಬ್ಬರ ಜೀವನದಲ್ಲಿ ಜ್ಞಾನ ಮತ್ತು ಬಕಲಿಕೆಯ ಮಹತ್ವವನ್ನು ಸೂಚಿಸುವ ಪೂಜಾ ವಿಧಿಗಳನ್ನು ಅತ್ಯಂತ ಗೌರವ ಮತ್ತು ಭಕ್ತಿಯಿಂದ ನಡೆಸಲಾಯಿತು.
ಈ ವೇಳೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಎಲ್ಲ ಭೋಧಕ ಮತ್ತು ಭೋಧಕೇತರ ಸಿಬ್ಬಂದಿ, ಬಿಎಡ್ ಪ್ರಶಿಕ್ಷಣಾರ್ಥಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.