ಕೆಂಭಾವಿ: ಯಾದಗಿರಿ ನಗರ ಠಾಣಾ ಪಿಎಸ್ಐ ಪರಶುರಾಮ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಬೇಕು, ಮೃತ ಪರಶುರಾಮ ಪತ್ನಿಗೆ ಸರ್ಕಾರಿ ನೌಕರಿ ನೀಡುವುದು, ಅವರ ಕುಟುಂಬಕ್ಕೆ ಐದು ಕೋಟಿ ರೂಪಾಯಿ ಪರಿಹಾರ ನೀಡಬೇಕು, ಮುಂದೆ ಹುಟ್ಟುವ ಮಗುವಿನ ವಿದ್ಯಾಭ್ಯಾಸದ ಖರ್ಚನ್ನು ಸರ್ಕಾರ ಬರಿಸಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹೋಬಳಿ ಘಟಕ ಒತ್ತಾಯಿಸಿದೆ.
ಪಿಎಸ್ಐ ಪರಶುರಾಮ ಅವರ ನಿಗೂಢ ಸಾವಿಗೆ ಸ್ಥಳೀಯ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರು ಹಾಗೂ ಅವರ ಮಗ ಸನ್ನಿಗೌಡ ಪಾಟೀಲ ಮೇಲೆ ಎಫ್ಐಆರ್ ದಾಖಲಾಗಿದ್ದರು ಅವರನ್ನು ಬಂಧಿಸಿದೆ ಸರ್ಕಾರ ರಕ್ಷಣೆ ಮಾಡುತ್ತಿದೆ ಎಂಬ ಅನುಮಾನಗಳು ಕಾಡುತ್ತಿವೆ. ಶೀಘ್ರವೇ ಆರೋಪಿಗಳನ್ನು ಬಂಧಿಸಿಬೇಕು ಮತ್ತು ಮೃತ ಪಿಎಸ್ಐ ಪರಶುರಾಮ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಗೃಹ ಸಚಿವ ಡಾ ಜಿ ಪರಮೇಶ್ವರ ಇವರಿಗೆ ಬರೆದು ಮನವಿ ಪತ್ರವನ್ನು ಉಪತಹಸೀಲ್ದಾರ್ ಮೂಲಕ ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಿದರು.
ಇದೇ ವೇಳೆ ಶಿವಶರಣಪ್ಪ ವಾಡಿ, ಶರಣಬಸಪ್ಪ ಹೂವಿನಳ್ಳಿ, ಸಿದ್ದಣ್ಣ ಕರಡಕಲ್, ಶರಣಪ್ಪ ಗಾಯಕವಾಡ, ಬಸವಣ್ಣೆಪ್ಪ ಮಾಳಳ್ಳಿಕರ್, ರಾಯಪ್ಪ ಕರಡಕಲ್, ಲಕ್ಷ್ಮಣ ಬಸರಿಗಿಡ, ಸದಾನಂದ ಕರಡಕಲ್, ರವಿ ಯಮನೂರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment
