ವಿಜಯಪುರ: ಗ್ರಾಮೀಣ ತಾಲೂಕಿನ ಕಗ್ಗೋಡ ಗ್ರಾಮದ ಆದರ್ಶ ವಿದ್ಯಾಲಯಲ್ಲಿ 2024-25 ನೇ ಸಾಲಿಗೆ 6ನೇ ತರಗತಿ ದಾಖಲಾತಿಗಾಗಿ ಮೀಸಲಾತಿವಾರು ಖಾಲಿ ಇರುವ ಸ್ಥಾನಗಳಿಗೆ 1:20 ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣ ವಲಯ ಹಾಗೂ ಸರಕಾರಿ ಆದರ್ಶ ವಿದ್ಯಾಲಯ ಕಗ್ಗೋಡ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ರಾಜ್ಯ ಕಚೇರಿಯಿಂದ ಈಗಾಗಲೇ ಅರ್ಹ ವಿದ್ಯಾರ್ಥಿಗಳಿಗೆ ಸಂದೇಶ ರವಾನಿಸಲಾಗಿದ್ದು ಸದರಿ ಪಟ್ಟಿ ಆದರಿಸಿ ಆಗಷ್ಟ 13 ರಂದು ಬೆಳಿಗ್ಗೆ 10 ಗಂಟೆಗೆ ಸಾಮಾನ್ಯ ವರ್ಗದ (ಸಾಮಾನ್ಯ) ವಿದ್ಯಾರ್ಥಿಗಳಿಗೆ ಹಾಗೂ ಆಗಷ್ಟ 14 ರಂದು ಬೆಳಿಗ್ಗೆ 10 ಗಂಟೆಗೆ ಇತರೆ ಪ್ರವರ್ಗಗಳಿಗೆ (ಓಬಿಸಿ) ಕೌನ್ಸಿಲಿಂಗ್ ಅನ್ನು ವಿಜಯಪುರ ಗ್ರಾಮೀಣ ತಾಲೂಕಿನ ಕಗ್ಗೋಡ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಶಾಲೆಯ ಮುಖ್ಯೋಪಾಧ್ಯಾಯ ಶ್ರೀಮತಿ ಎಫ್. ಎಸ್. ಹತ್ತರಕಿಹಾಳ 7795490736 ಪರೀಕ್ಷೆ ನೋಡಲ್ ಪ್ರಭು ಬಿರಾದಾರ 9880832448 ಹಾಗೂ ಪ್ರದಸ ಶಿರಹಟ್ಟಿ 8971163743 ಇವರನ್ನು ಸಂಪರ್ಕಿಸಲು ತಿಳಿಸಲಾಗಿದೆ.
ಕಡ್ಡಾಯವಾಗಿ ಎಸ್ಸಿ ಎಸ್ಟಿ ಒಬಿಸಿ ವಿದ್ಯಾರ್ಥಿಗಳು ಕೌನ್ಸಲಿಂಗ ದಿನದಂದು ತಮ್ಮ ಜಾತಿ ಆದಾಯ ಪ್ರಮಾಣ ಪತ್ರವನ್ನು ತರುವುದು ಕಡ್ಡಾಯವಾಗಿದೆ. ಸಂಬಂಧಿಸಿದ ವಿದ್ಯಾರ್ಥಿಗಳು ಹಾಗೂ ಪಾಲಕರು ಸೂಕ್ತ ಸಮಯದಲ್ಲಿ ಹಾಜರಿರಲು ತಾಲ್ಲೂಕ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಪ್ರಮೋದಿನಿ ಬಳೊಲಮಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
