Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಗರ ಪಂಚಮಿಯ ಕಥೆ
(ರಾಜ್ಯ ) ಜಿಲ್ಲೆ

ನಾಗರ ಪಂಚಮಿಯ ಕಥೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

“ವೀಣಾಂತರಂಗ”- ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ – ಗದಗ

ಪಾಂಡವರಲ್ಲಿ ಒಬ್ಬರಾದ ಅರ್ಜುನನ ಮಗ ಅಭಿಮನ್ಯು ವಿನ ಪುತ್ರ ಪರೀಕ್ಷಿತ ಮಹಾರಾಜ. ಈ ಪರೀಕ್ಷಿತ ಮಹಾರಾಜನಿಗೆ ಜ್ಯೋತಿಷಿಗಳು ತಿಳಿಸಿದಂತೆ ರಕ್ಷಕ ಎಂಬ ಸರ್ಪವು ಕಚ್ಚಿ ಆತನ ಸಾವಾಯಿತು. ಇದರಿಂದ ದುಃಖಕ್ಕೀ ಡಾದ ಪರೀಕ್ಷಿತ ಮಹಾರಾಜನ ಪುತ್ರ
ಜನಮೇಜಯ ಮಹಾರಾಜನು ಹಾವುಗಳನ್ನೇ ಸರ್ವ ನಾಶ ಮಾಡುವೆನೆಂದು ಪಣತೊಟ್ಟನು.
ಹಾವುಗಳನ್ನು ಸಂಪೂರ್ಣವಾಗಿ ನಾಶ ಮಾಡಲು ಆತನು ಸರ್ಪ ಯಜ್ಞ ಆರಂಭಿಸಿದನು. ಯಜ್ಞವನ್ನು ನೆರವೇರಿಸುತ್ತಿದ್ದ ಮುನಿಗಳು ನಾಗಗಳ ಹೆಸರನ್ನು ತೆಗೆದುಕೊಳ್ಳುತ್ತಿದ್ದಂತೆಯೇ ಎಲ್ಲಾ ಕಡೆಯಿಂದಲೂ ಸರ್ಪಗಳು ತಾನೇ ತಾನಾಗಿ ಆತನ ಯಜ್ಞ ಕುಂಡಕ್ಕೆ ಬಂದು ಆಹುತಿಯಾಗತೊಡಗಿದವು..
ತಪೋನಿರತನಾಗಿದ್ದ ಆಸ್ತಿಕ ಎಂಬ ಮುನಿವರನಿಗೆ ಆತನ ಶಿಷ್ಯರು ಈ ವಿಷಯವನ್ನು ಅರುಹಿದರು. ಹಾವುಗಳು ಮನುಷ್ಯನಿಗೆ ಶತ್ರುಗಳಲ್ಲ ನಿರುಪದ್ರವ ಜೀವಿಗಳು.. ಅವುಗಳ ಕುಲ ವಿನಾಶ ಮಾಡುವುದರಿಂದ ಸಾಕಷ್ಟು ಅನಾಹುತಗಳಾಗುತ್ತವೆ ಎಂಬುದನ್ನು ಮನಗಂಡ ಆಸ್ತಿಕ ಮುನಿಯ ಯಜ್ಞ ನಡೆಯುತ್ತಿರುವ ಸ್ಥಳಕ್ಕೆ ಧಾವಿಸಿ ಬಂದನು. ಮುನಿಗಳ ಮೇಲೆ ಅಪಾರ ಭಯ ಭಕ್ತಿಯನ್ನು ಹೊಂದಿದ್ದ ಜನಮೇಜಯ ಮಹಾರಾಜನು ಮುನಿಗಳಿಗೆ ನಮಸ್ಕರಿಸಿ ಸೂಕ್ತ ಉಪಚಾರ ನೆರವೇರಿಸಿದನು. ನಂತರ ಮುನಿಗಳ ಆಗಮನದ ಕಾರಣವನ್ನು ಕೇಳಲು ಆಸ್ತಿಕ ಮುನಿಯ ಆತನಿಗೆ ಸರ್ಪ ಯಜ್ಞ ಮಾಡುವುದರಿಂದ ಉಂಟಾಗುವ ಅನಾಹುತಗಳನ್ನು ತಿಳಿ ಹೇಳಿ ಯಜ್ಞವನ್ನು ನಿಲ್ಲಿಸಲು ಕೇಳಿಕೊಂಡನು ಋಷಿ ಮುನಿಗಳ ಮೇಲೆ ಅಪಾರ ಗೌರವವನ್ನು ಹೊಂದಿದ್ದ ಜನಮೇಜಯರಾಜನು ಋಷಿಗಳ ಮಾತಿನಂತೆ ತನ್ನ ಯಜ್ಞವನ್ನು ನಿಲ್ಲಿಸಿದನು.
ಇನ್ನೂ ಹಲವಾರು ಸರ್ಪಗಳು ಯಜ್ಞದ ಉರಿಯಲ್ಲಿ ಬೆಂದು ಹೋಗುತ್ತಿದ್ದವು. ಆಗ ಆಸ್ತಿಕನು ಹಾವುಗಳನ್ನು ಯಜ್ಞ ಕುಂಡದಿಂದ ಹೊರತೆಗೆದು ಅವುಗಳ ಮೇಲೆ ಪನ್ನೀರಿನ ಮತ್ತು ಹಾಲಿನ ಸಿಂಚನ ಮಾಡಿದನು. ಗುರುವನ್ನು ಅನುಕರಿಸಿದ ಆತನ ಸಹಚರರು ಉಳಿದೆಲ್ಲ ಹಾವುಗಳ ತಾಪ ಶಮನ ಮಾಡಲು ಅವುಗಳ ಮೇಲೆ ತಮ್ಮ ಗುರುಗಳನ್ನು ಅನುಸರಿಸಿ ತೆಂಗಿನ ತಿಳಿನೀರು ಮತ್ತು ಹಾಲಿನ ಅಭಿಷೇಕ ಮಾಡಿದರು. ಆ ದಿನ ಶ್ರಾವಣ ಮಾಸದ ಪಂಚಮಿಯ ದಿನವಾಗಿತ್ತು. ಅಂದಿನಿಂದ ಪ್ರತಿ ವರ್ಷವೂ ನಾಗಗಳನ್ನು ರಕ್ಷಿಸುವ ಸಲುವಾಗಿ, ನಾಗ ಸಂತತಿಯು ಮನುಷ್ಯ ಕುಲಕ್ಕೆ ಮಾಡುವ ಉಪಕಾರ ಸ್ಮರಣೆಯ ದಿನವಾಗಿ ನಾಗರ ಪಂಚಮಿಯ ಹಬ್ಬವನ್ನು ಆಚರಿಸಲಾಗುತ್ತದೆ.

– ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ – ಗದಗ್

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.