ಚಿಮ್ಮಡ: ಸರಕಾರಿ ಶಾಲೆಗಳ ಅಭೀವೃದ್ದಿಗೆ ಸಾರ್ವಜನಿಕರ ಸಹಕಾರ ಅವಶ್ಯವಾಗಿದ್ದು ಗ್ರಾಮೀಣ ಭಾಗಗಳಲ್ಲಿ ಸ್ಪಂದನೆ ದೊರೆಯುತ್ತಿರುವುದು ಸಂತಸದ ಸಂಗತಿ ಎಂದು ಶಿಕ್ಷಣ ಸಂಯೋಜಕ ಬಿ.ಎಂ ಹಳಮನಿ ಹೇಳಿದರು.
ಗ್ರಾಮದ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಮಾದರಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಎಸ್ಡಿಎಂಸಿ ಸದಸ್ಯರಿಂದ ನೀಡಲಾದ ವಿಶೇಷ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಆಗಮಿಸಿ ಮಾತನಾಡಿದ ಅವರು ಸರಕಾರ ಹಲವಾರು ಸೌಲಭ್ಯಗಳನ್ನು ನೀಡುತಿದ್ದರೂ ವಿಶೇಷ ಸೌಲಭ್ಯಗಳನ್ನು ಸರಕಾರಿ ಶಾಲೆಗಳಿಗೆ ನೀಡುವ ಮೂಲಕ ಖಾಸಗೀ ಶಾಲೆಗಳೊಂದಿಗೆ ಪೈಪೋಟಿ ನೀಡುತ್ತಿವೆ, ಇದಕ್ಕೆ ಸಹಾಯ ಸಹಕಾರ ನೀಡುತ್ತಿರುವ ಶಾಲಾ ಸುಧಾರಣಾ ಸಮೀತಿ ಹಾಗೂ ಗ್ರಾಮದ ಶಿಕ್ಷಣ ಪ್ರೇಮಿಗಳಕಾರ್ಯ ಶ್ಲಾಘನೀಯವೆಂದರು.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಿಸುವ ಮೂಲಕ ಉದ್ಘಾಟಿಸಲಾಯಿತು.
ಸಿಆರ್ಪಿ ಶ್ರೀಮತಿ ದ್ರಾಕ್ಷಾಯಿಣಿ ಮಂಡಿ, ಗ್ರಾ.ಪಂ. ಸದಸ್ಯ ಮಹಾಲಿಂಗ ಮಾಯಣ್ಣವರ, ಶಿವಾನಂದ ಬೆಳಗಲಿ, ಪ್ರಭಾರಿ ಮುಖ್ಯಗುರು ಎಸ್.ಎ. ಬಿರಾದರ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷ ಮೋನೇಶ ಬಡಿಗೇರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷೆ ಶ್ರೀಮತಿ ಅಣ್ಣಪೂರ್ಣ ಅಥಣಿ, ಇಮಾಮ ಯಾದವಾಡ, ಪರಪ್ಪಾ ದೇವಗೋಳ ಸೆರಿದಂತೆ ಹಲವರು ಉಪಸ್ಥಿತರಿದ್ದರು.
ಶಿಕ್ಷಕ ಬಿ.ಡಿ. ನೇಮಗೌಡ ಸ್ವಾಗತಿಸಿ ನಿರೂಪಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

