ವಿಜಯಪುರ: ಆ.೧೨ರಂದು ಬೆಂಗಳೂರಿನಲ್ಲಿ ನಡೆಯುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನ್ಯಾಯಯುತ ಬೇಡಿಕೆಗಾಗಿ ಹೋರಾಟದಲ್ಲಿ ಪಾಲ್ಗೊಳ್ಳಲು ಜಿಲ್ಲೆಯಿಂದ ಶಿಕ್ಷಕ ಸಮುದಾಯ ತೆರಳಲಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಿಳಿಸಿದೆ.
ಹಲವಾರು ವರ್ಷಗಳಿಂದ ಪದವಿ ಮುಗಿಸಿದ ಸೇವಾನಿರತ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಅನ್ಯಾಯವಾಗುತ್ತಿದ್ದರೂ ಸರಕಾರ ಕಿಂಚತ್ತು ಯೋಚಿಸುತ್ತಿಲ್ಲ. ಸೇವಾಜೇಷ್ಠತೆ, ಬಡ್ತಿ, ಇಲ್ಲದೆ ಕೊರಗುವಂತಾಗಿದೆ. ಪದವಿ ಮುಗಿಸಿ ೨೦-೨೫ ವರ್ಷಗಳಾದೂ ಒಂದು ಬಡ್ತಿ ಇಲ್ಲದೆ ಪರದಾಡುವಂತಾಗಿದೆ. ಹಲವಾರು ಬಾರಿ ಹೋರಾಟ, ಪ್ರತಿಭಟನೆ, ಧರಣಿ ನಡೆಸಿದರೂ ಪ್ರಯೋಜನವಾಗಿಲ್ಲ ಅದಕ್ಕಾಗಿ ಈ ಸಲ ಮಾಡು ಇಲ್ಲವೇ ಮಡಿ ಎಂಬ ತತ್ವದ ಮೂಲಕ ಧರಣಿ ನಡೆಸಲು ಬೆಂಗಳೂರಿಗೆ ತೆರಳಲಾಗುತ್ತಿದೆ. ಜಿಲ್ಲೆಯ ೧೨ ತಾಲೂಕುಗಳಿಂದ ಸಾವಿರಾರು ಸಂಖ್ಯೆಯಲ್ಲಿ ಶಿಕ್ಷಕರು ಭಾಗವಹಿಸುತ್ತಿದ್ದು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯ ಅಧ್ಯಕ್ಷ ನಾಗೇಶ ಹಾಗೂ ಪ್ರಧಾನಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶಿಕ್ಷಕರ ಸಂಘದ ಪದಾಧಿಕಾರಿಗಳು, ಜಿಲ್ಲೆಯ ಸೇವಾನಿರತ ಪದವಿಧರ ಪ್ರಾಥಮಿಕ ಶಾಲಾ ಶಿಕ್ಷಕರು, ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟಕ್ಕೆ ಆಗಮಿಸಬೇಕೆಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ ಎಸ್ ಬೇನೂರ ಹಾಗೂ ಪ್ರಧಾನಕಾರ್ಯದರ್ಶಿ ಅರ್ಜುನ ಲಮಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

