ಆಲಮೇಲ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮುಡಾ
ಹಗರಣದ ವಿಷಯದಲ್ಲಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಕುತಂತ್ರ ಹಾಗೂ ಸುಳ್ಳು ಆರೋಪ ಮಾಡುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನಡೆಯನ್ನು ಪಟ್ಟಣದ ಕಾಂಗ್ರೆಸ್ ಮುಖಂಡ ನಬಿ ಆರ್ ಜಮಾದಾರ ಖಂಡಿಸಿದ್ದಾರೆ.
ಶುಕ್ರವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಿಎಂ ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತಂದು ಸಿಎಂ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನದಲ್ಲಿದ್ದಾರೆ. ಆದರೆ ಅದು ಫಲಿಸುವುದಿಲ್ಲ. ಏಕೆಂದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ಉತ್ತಮ ಆಡಳಿತವನ್ನು ನೀಡುವ ಮೂಲಕ ಬಡವ, ದೀನದಲಿತರ, ಹಿಂದುಳಿದ ವರ್ಗದವರ ಅಭಿವೃದ್ಧಿಗೆ ಅನೇಕ ಭಾಗ್ಯಗಳನ್ನು ಕೊಟ್ಟಂತಹ ಭಾಗ್ಯಗಳ ಸರದಾರ ಎನಿಸಿಕೊಂಡಿದ್ದಾರೆ. ನಾಡಿನ ಎಲ್ಲ ಸಮುದಾಯದಗಳ ಜನಮನ ಗೆದ್ದಿದ್ದಾರೆ. 2013 ರಿಂದ 2018 ರವರೆಗೆ ಯಾವುದೇ ಒಂದು ಕಪ್ಪು ಚುಕ್ಕೆ ಇಲ್ಲದೆ ಆಡಳಿತ ಮಾಡಿದ್ದಾರೆ ಎಂದು ಹೊಟ್ಟೆಕಿಚ್ಚಿನಿಂದ ಸಿದ್ದರಾಮಯ್ಯನವರನ್ನು ಇನ್ನು ಮುಂದೆ 5 ವರ್ಷ ಪೂರೈಸಬಾರದು, ಮತ್ತೆ ಈ ಅವಧಿಯಲ್ಲಿ ವರ್ಷ ಪೂರೈಸಿದರೆ ರಾಜ್ಯದಲ್ಲಿ ನಮಗೆ ಉಳಿಗಾಲವಿಲ್ಲವೆಂದು ಸುಳ್ಳು ಆರೋಪ ಮಾಡುತ್ತಿದ್ದಾರೆ. ಇದು ಹೀಗೆಯೇ ಮುಂದುವರಿದಲ್ಲಿ ಮುಸ್ಲಿಮ್ ಸಮುದಾಯ ಮತ್ತು ಹಾಲುಮತ ಸಮಾಜದ ಪ್ರಗತಿಪರ ಸಂಘಟನೆಗಳು ಕೂಡಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ನಬಿ ಜಮಾದಾರ ಎಚ್ಚರಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

