ವಿಜಯಪುರ: ಬೃಹತ್ ಮತ್ತು ಮದ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ. ಬಿ. ಪಾಟೀಲ ಅವರು ಆಗಷ್ಟ11 ರಿಂದ ಆಗಷ್ಟ 15ರ ವರೆಗೆ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ನಾನಾ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಆಗಷ್ಟ 11 ರವಿವಾರ ಮತ್ತು ಆಗಷ್ಟ 12 ಸೋಮವಾರದಂದು ವಿಜಯಪುರ ಗೃಹ ಕಚೇರಿಯಲ್ಲಿ ಬೆಳಿಗ್ಗೆ 9 ರಿಂದ ಬೆಳಿಗ್ಗೆ 11 ಗಂಟೆ ವರೆಗೆ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಕುಂದುಕೊರತೆ ಆಲಿಸಲಿದ್ದಾರೆ.
ಆಗಷ್ಟ 13 ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಬಬಲೇಶ್ವರ ಹೆಸ್ಕಾಂ ಪರೀಕ್ಷಾ ಕೇಂದ್ರದ ಆವರಣದಲ್ಲಿ ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ವಿದ್ಯುತ್ ಪರಿವರ್ತಕಗಳ ದುರಸ್ಥಿ ಹಾಗೂ ಪರೀಕ್ಷಣಾ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಮದ್ಯಾಹ್ನ 12 ಗಂಟೆಗೆ ವಿಜಯಪುರ ನಗರದ ಹೆಸ್ಕಾಂ ಉಪವಿಭಾಗ-01ರ ಕಚೇರಿ ಆವರಣದಲ್ಲಿ ರೂ. 234 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಟ್ಟಡ, ರೂ.124 ವೆಚ್ಚದಲ್ಲಿ ನಿರ್ಮಿಸಲಾಗಿರುವ ಶಿವಗಿರಿ ಶಾಖಾಧಿಕಾರಿಗಳ ಕಚೇರಿ ಕಟ್ಟಡ ಹಾಗೂ ಭೂತನಾಳ ಶಾಖಾಧಿಕಾರಿಗಳ ಕಛೇರಿ ಕಟ್ಟಡ ಉದ್ಘಾಟಿಸಲಿದ್ದಾರೆ.
ಆಗಷ್ಟ14 ರಂದು ಬುಧವಾರ ಬೆಳಿಗ್ಗೆ 9 ಗಂಟೆಗೆ ತಿಕೋಟಾ ಆಡಳಿತ ಸೌಧದಲ್ಲಿ ನೂತನ ಉಪನೊಂದಣಾಧಿಕಾರಿಗಳ ಕಾರ್ಯಾಲಯದ ಕಾರ್ಯಾರಂಭಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಬೆಳಿಗ್ಗೆ 10 ಗಂಟೆಗೆ ತಿಕೋಟಾ ಹೆಸ್ಕಾಂ ಆವರಣದಲ್ಲಿ ತಿಕೋಟಾ ನೂತನ ವಿದ್ಯುತ್ ಪರಿವರ್ತಕಗಳ ದುರಸ್ಥಿ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಅಲ್ಲದೇ, ಮದ್ಯಾಹ್ನ 12 ಗಂಟೆಗೆ ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದಲ್ಲಿರುವ ಕೆ.ಎಚ್.ಪಾಟೀಲ ಸಭಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಿರಬೂರ ಮತ್ತು ಚಿಕ್ಕಗಲಗಲಿ ಪುನರ್ ವಸತಿ ಕೇಂದ್ರಗಳ ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಲಿದ್ದಾರೆ.
ಆಗಷ್ಟ 15 ರಂದು ವಿಜಯಪುರ ನಗರದಲ್ಲಿರುವ ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣದಲ್ಲಿ ವಿಜಯಪುರ ಜಿಲ್ಲಾಡಳಿತದಿಂದ ಆಯೋಜಿಸಲಾಗಿರುವ ಸ್ವಾತಂತ್ರ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಧ್ವಜಾರೋಹಣ ನಡೆಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಬಬಲೇಶ್ವರ ತಾಲೂಕಿನ ದದಾಮಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಅನಾವರಣ ಮಾಡಲಿದ್ದಾರೆ ಎಂದು ಸಚಿವರ ಕಚೇರಿಯ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
