ವಿಜಯಪುರ: ಅನರ್ಹ ಕುಟುಂಬಗಳು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಸರ್ಕಾರದ ಮಾನದಂಡಗಳ ಪ್ರಕಾರ ಅರ್ನಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಆ.೩೧ರೊಳಗೆ ಸ್ವಯಂ ಪ್ರೇರಣೆಯಿಂದ ಆಯಾ ತಹಶೀಲ್ದಾರ ಕಚೇರಿಗೆ ಒಪ್ಪಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ ಅವರು ತಿಳಿಸಿದ್ದಾರೆ.
ಸರ್ಕಾರದ ಆದೇಶದಂತೆ ಜಿಲ್ಲೆಯ ಅನರ್ಹ ಪಡಿತರ ಚೀಟಿ ಪತ್ತೆ ಹಚ್ಚುವ ಅಭಿಯಾನ ಆರಂಭಿಸಲಾಗಿದ್ದು, ಈಗಾಗಲೇ ಆದಾಯ ತೆರಿಗೆ ಪಾವತಿ ಮಾಡುತ್ತಿರುವ ೨೦೮೬ ಕುಟುಂಬಗಳು, ಸರ್ಕಾರಿ ನೌಕರರು ಹೊಂದಿರುವ ೩೯೧, ಹಾಗೂ ೧.೨೦ಲಕ್ಷಕ್ಕಿಂತ ಹೆಚ್ಚಿನ ಕುಟುಂಬ ಆದಾಯ ಹೊಂದಿರುವ ೨೯೬೧೫ ಸೇರಿದಂತೆ ೩೨೦೯೨ ಬಿಪಿಎಲ್ ಪಡಿತರ ಚೀಟಿಗಳನ್ನು ತಂತ್ರಾಂಶದ ಮೂಲಕ ಪತ್ತೆ ಹಚ್ಚಿ ಪರಿಶೀಲನೆ ನಡೆಸಲಾಗುತ್ತಿದೆ.
ಜಿಲ್ಲೆಯಲ್ಲಿ ಏಕವ್ಯಕ್ತಿ ಕುಟುಂಬದ ೪೦೯೭೫ ಹಾಗೂ ದ್ವಿವ್ಯಕ್ತಿ ೧೦೫೧೨೫ ಪಡಿತರ ಚೀಟಿಗಳಿದ್ದು, ಇದರಲ್ಲಿನ ಹೆಚ್ಚಿನ ಕುಟುಂಬಗಳು ಒಂದೇ ಮನೆಯಲ್ಲಿ ಕೂಡಿ ವಾಸವಿದ್ದು, ಕೃತಕವಾಗಿ ಪ್ರತ್ಯೇಕವಾಗಿರುವುದಾಗಿ ಪಡಿತರ ಚೀಟಿ ಪಡೆದಿರುವುದು ಕಂಡು ಬಂದಿದ್ದು, ಕೃತಕ ಪ್ರತ್ಯೇಕವಾಗಿರುವ ಏಕವ್ಯಕ್ತಿ ಹಾಗೂ ದ್ವಿವ್ಯಕ್ತಿ ಸದಸ್ಯ ಪಡಿತರ ಚೀಟಿದಾರರೂ ಸಹ ಅವರ ಪಡಿತರ ಚೀಟಿಯನ್ನು ರದ್ದುಪಡಿಸಿಕೊಂಡು ಅವರ ಕುಟುಂಬದ ಮೂಲ ಪಡಿತರ ಚೀಟಿಯಲ್ಲಿ ಹೆಸರುಗಳನ್ನು ಸೇರ್ಪಡೆಗೊಳಿಸಿಕೊಳ್ಳಲು ದಿನಾಂಕ: ೩೧-೮-೨೦೨೪ರವರೆಗೆ ಗಡುವು ನೀಡಲಾಗಿದ್ದು, ಅನರ್ಹ ಪಡಿತರದಾರರು ಆ.೩೧ರೊಳಗೆ ಅಧ್ಯಪರ್ಣ ಮಾಡಿದಲ್ಲಿ ಯಾವುದೇ ದಂಡ ವಿಧಿಸದೇ ಎಪಿಎಲ್ ಪಡಿತರ ಚೀಟಿಯನ್ನಾಗಿ ಪರಿವರ್ತಿಸಿಕೊಡಲಾಗುವುದು. ಒಂದು ವೇಳೆ ನಿಗದಿತ ಅವಧಿಯಲ್ಲಿ ಸಲ್ಲಿಸದೇ ಇದ್ದಲ್ಲಿ ದಂಡವನ್ನು ವಿಧಿಸಲಾಗುವುದು ಎಂದು ಅವರು ಪ್ರಕಟಣೆಯ ಮೂಲಕ ಎಚ್ಚರಿಕೆ ನೀಡಿದ್ದಾರೆ.
Subscribe to Updates
Get the latest creative news from FooBar about art, design and business.
ಅನರ್ಹ ಬಿಪಿಎಲ್ ಪಡಿತರ ಚೀಟಿ ಆ.೩೧ರೊಳಗೆ ಹಿಂದಿರುಗಿಸಲು ಸೂಚನೆ
Related Posts
Add A Comment
