Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲು ರೈತರ ಮನವಿ
(ರಾಜ್ಯ ) ಜಿಲ್ಲೆ

ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲು ರೈತರ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಪಟ್ಟಣದ ಎರೆಜಮೀನುಗಳಿಗೆ ಹಾಗೂ ಕನ್ನೋಳ್ಳಿ, ಯರನಾಳ, ಇಂಗಳಗಿ, ಹರನಾಳ ಬಮ್ಮನಳ್ಳಿ, ಮುಳಸಾವಳಗಿ, ಮಾರ್ಕಬ್ಬಿನಹಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಎತ್ತಿನಗಾಡಿ(ಚಕ್ಕಡಿ) ರಸ್ತೆಗಳನ್ನು ಜಾಲಿಗಿಡಗಂಟಿಗಳಿಂದ ಮುಕ್ತಗೊಳಿಸುವುದು ಹಾಗೂ ಮಳೆಯಿಂದ ಬಿದ್ದ ಕೊರೆಗಳನ್ನು ಸರಿಪಡಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ರೈತರು ಆಗ್ರಹಿಸಿ ಗ್ರೇಡ್-2 ತಹಶೀಲ್ದಾರ ಎಸ್.ಎಚ್. ರಾಠೋಡ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ತಹಶೀಲ್ದಾರ ಕಚೇರಿಗೆ ಸೋಮವಾರ ಆಗಮಿಸಿದ ರೈತರು ರಸ್ತೆಯಲ್ಲಿನ ಕೊರೆಗಳು ಹಾಗೂ ಮುಳ್ಳಿನ ಗಿಡಗಂಟಿಗಳ ತೆರವುಗೊಳಿಸಲು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರೈತಪ್ರತಿನಿಧಿ ಅಜೀಜ್ ಯಲಗಾರ ಮಾತನಾಡಿ, ಎರೆ ಜಮೀನುಗಳು ಹಾಗೂ ವಿವಿಧ ಗ್ರಾಮಗಳಿಗೆ ತೆರಳುವ ಎತ್ತಿನಗಾಡಿ (ಚಕ್ಕಡಿ)ರಸ್ತೆ ಉತ್ತಮವಾಗಿದ್ದು, ಆದರೆ ರಸ್ತೆಯ ಎಡ ಬಲಗಳಲ್ಲಿ ಜಾಲಿಗಿಡಗಳು ಬೃಹದಾಕಾರವಾಗಿ ಬೆಳೆದ ರಸ್ತೆಯನ್ನು ಕಿರಿದಾಗಿಸಿವೆ.
ರಸ್ತೆಯ ಮೂಲಕ ಚಕ್ಕಡಿ ಹಾಗೂ ಬೈಕ್ಗಳಲ್ಲಿ ತೆರಳಬೇಕೆಂದರು ಪ್ರಯಾಣದಲ್ಲಿ ಮುಳ್ಳು ಚುಚ್ಚಿ ಗಾಯಗಳಾಗುತ್ತಿವೆ. ಇನ್ನೂ ಜಾಲಿಗಿಡಗಳ ಟೊಂಗೆಗಳು ಉದ್ದಾಗಿ ಬೆಳೆದು ರಸ್ತೆಯನ್ನು ಅತೀಕ್ರಮಿಸಿ ಅಪಘಾತಗಳಿಗೆ ಕಾರಣವಾಗುತ್ತಿವೆ. ಜೊತೆಗೆ ಮಳೆಯಿಂದ ರಸ್ತೆಗಳಲ್ಲಿ ಕೊರೆಗಳು ಬಿದ್ದಿದ್ದು ಎತ್ತಿನಗಾಡಿ ಬೀಳುವ ಸಂಭವ ಇರುತ್ತದೆ. ಈ ನಿಟ್ಟಿನಲ್ಲಿ ತಹಶೀಲ್ದಾರ, ಪಟ್ಟಣ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕೂಡಲೇ ಕ್ರಮ ಕೈಗೊಂಡು ರೈತರಿಗೆ ಸ್ಪಂದಿಸುವಂತೆ ಆಗ್ರಹಿಸಿದರು.
ಯುವರೈತ ವಿರೇಶ ಕುದರಿ ಹಾಗೂ ರೈತಸಂಘದ ಮಹಿಳಾ ಪ್ರತಿನಿಧಿ ಸುನಂದಾ ಸೊನ್ನಹಳ್ಳಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ತಹಶೀಲ್ದಾರ ಪರವಾಗಿ ಶಿರಸ್ತೇದಾರ ಡಿ.ಎಸ್.ಭೋವಿ ಮಾತನಾಡಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ರೈತಸಂಘ ಹಾಗೂ ಹಸಿರುಸೇನೆಯ ಜಿಲ್ಲಾ ಉಪಾಧ್ಯಕ್ಷ ಸಂಪತ್ ಜಮಾದಾರ, ತಾಲ್ಲೂಕು ಅಧ್ಯಕ್ಷ ರಾಮು ದೇಸಾಯಿ, ಮಡಿವಾಳಪ್ಪ ಮಣೂರ, ಶಾಂತಗೌಡ ಬಿರಾದಾರ, ನಿಂಗಪ್ಪ ಕೋಟಿನ್, ಮಲ್ಲು ವಿಜಾಪೂರ, ವೀರೇಶ ಮಿಂಚನಾಳ, ಚಂದ್ರಕಾಂತ ಭಾಸುತ್ಕರ್, ಬಸಲಿಂಗಪ್ಪ ಮಸಬಿನಾಳ, ರಾವುತಪ್ಪ ವಗ್ಗರ, ಸುರೇಶ ಅಸ್ಕಿ, ಅಶೋಕ ವಾಲೀಕಾರ, ನಿಂಗು ದಾನಗೊಂಡ, ಸುನೀಲ ದೇಸಾಯಿ, ಕಾಸು ಮಡಗೊಂಡ, ಬಸವರಾಜ ಇಂಡಿ, ಗೌಡು ದಾನಗೊಂಡ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.