ವಿಜಯಪುರ: ಹರ ಘರ ತಿರಂಗಾ ಅಭಿಯಾನದ ಅಂಗವಾಗಿ ನಗರದ ಚಿದರಂಬರ ನಗರದಲ್ಲಿರುವ ಚಿದಂಬರ ಜೋಶಿ ರೊಳ್ಳಿ ಅವರ ಮನೆಯ ಮೇಲೆ ಧ್ವಜ ಹಾರಿಸುವ ಮೂಲಕ ಹರ ಘರ ತಿರಂಗಾ ಅಬಿಯಾನಕ್ಕೆ ಸಂಸದ ರಮೇಶ ಜಿಗಜಿಣಗಿ ಚಾಲನೆ ನೀಡಿ ಮಾತನಾಡಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದು ೭೫ ವರ್ಷ ತುಂಬಿರುವ ಸಂದರ್ಭದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು (ಆಜಾದಿ ಕಾ ಅಮೃತ ಮಹೋತ್ಸವ) ಸಂಭ್ರಮದಿಂದ ದೊಡ್ಡ ಪ್ರಮಾಣದಲ್ಲಿ ಆಚರಿಸಲು ನಮ್ಮ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು ಕರೆ ಕೊಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯದ ಪ್ರತಿ ಮನೆಯ ಮೇಲೂ ತ್ರಿವರ್ಣ ಧ್ವಜ ಹಾರಿಸಬೇಕು. ಮನೆ ಮನೆಯಲ್ಲೂ ತ್ರಿವರ್ಣ ಧ್ವಜದ (ಹರ್ ಘರ ತಿರಂಗ) ಮೂಲಕ ದೇಶಭಕ್ತಿಯ ಜ್ವಾಲೆ ಮೂಡಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿಕೊಂಡರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ವಿಧಾನ ಪರಿಷತ್ ಮಾಜಿ ಶಾಸಕರಾದ ಅರುಣ ಶಹಾಪೂರ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ ಕಾರಜೋಳ, ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ ಮಳುಗೌಡ ಪಾಟೀಲ, ಈರಣ್ಣ ರಾವೂರ, ಮಹಾನಗರಪಾಲಿಕೆ ಸದಸ್ಯರಾದ ಮಲ್ಲಿಕಾರ್ಜುನ ಗಡಗಿ, ನಗರ ಅಧ್ಯಕ್ಷರಾದ ಶಂಕರ ಹೂಗಾರ, ಮುಖಂಡರಾದ ಸುರೇಶ ಬಿರಾದಾರ, ವಿಜಯ ಜೋಶಿ, ರಾಜೇಶ ತೌಸೆ, ಕಾಂತು ಸಿಂಧೆ, ಪಾಪುಸಿಂಗ ರಜಪೂತ, ಪ್ರವೀಣ ಕೂಡಗಿ, ಸಂಪತ ಕೊವಳ್ಳಿ, ಪ್ರವೀಣ ನಾಟೀಕಾರ, ವಿನೋದ ಮಣೂರ, ಸಂತೋಷ ಕಮತರ, ಕೃಷ್ಣಾ ರಾಠೋಡ, ವೆಂಕಟೇಶ ಜೋಶಿ (ನಂದೊಡಗಿ) ವೆಂಕಟೇಶ ಜೋಶಿ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

