ಬಸವನಬಾಗೇವಾಡಿ: ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಿ ಉತ್ತಮ ಜ್ಞಾನ ಪಡೆದುಕೊಂಡು ಸಮಾಜದ ಪ್ರಬುದ್ಧ ನಾಗರಿಕರಾಗಿ ಹೊರಹೊಮ್ಮುವಂತಾಗಬೇಕೆಂದು ಸ್ಥಳೀಯ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.
ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ೨೦೨೩-೨೪ ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಒಕ್ಕೂಟ, ಎನ್ಎನ್ಎಸ್, ಸ್ಕೌಟ್ಸ್-ಗೈಡ್ಸ್, ರೆಡ್ಕ್ರಾಸ್ ಹಾಗೂ ಕ್ರೀಡಾ ಚಟುವಟಿಕೆಗಳ ಮುಕ್ತಾಯ ಸಮಾರಂಭ ಹಾಗೂ ಬಿಎ.ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಮೊಬೈಲ್ ಹೆಚ್ಚು ಬಳಕೆ ಮಾಡುವವರನ್ನು ಸೋಮಾರಿಯನ್ನಾಗಿಸುತ್ತದೆ. ಮೊಬೈಲ್ ಬಳಕೆಯಿಂದ ನರದೌರ್ಬಲ್ಯವು ಉಂಟಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ಆದಷ್ಟು ದೂರವಿದ್ದು ಪಠ್ಯ-ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಉತ್ತಮ ವ್ಯಕ್ತಿತ್ವ ತಮ್ಮದಾಗಿಸಿಕೊಳ್ಳಬಹುದು. ಬಸವ ನೆಲದಲ್ಲಿರುವ ಈ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಶರಣರ ಸನ್ಮಾರ್ಗದಲ್ಲಿ ನಡೆಯುವಂತಾಗಬೇಕೆಂದರು.
ಬಿಎಲ್ಡಿಇ ಸಂಸ್ಥೆಯ ಜಮಖಂಡಿಯ ಆಡಳಿತಾಧಿಕಾರಿ ಪ್ರೊ.ಎಸ್.ಎಚ್.ಲಗಳಿ ಮಾತನಾಡಿ, ಬಹುತೇತ ಪ್ರತಿಭಾನ್ವಿತರು ಗ್ರಾಮೀಣ ಪ್ರದೇಶದಿಂದ ಬಂದವರೇ ಆಗಿರುವುದನ್ನು ಕಾಣುತ್ತೇವೆ. ಸ್ಪರ್ಧಾತ್ಮಕ ಜ್ಞಾನ, ಸಂವಹನ ಕೌಶಲ್ಯ, ನಿರಂತರ ಅಧ್ಯಯನದಲ್ಲಿ ವಿದ್ಯಾರ್ಥಿಗಳು ತೊಡಗಿಕೊಂಡರೆ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.
ಅಧ್ಯಕ್ಷತೆ ವಹಿಸಿದ್ದ ಪದವಿ ವಿಭಾಗದ ಆಡಳಿತಾಧಿಕಾರಿ ಪ್ರೊ.ವಿಲಾಸ ಬಗಲಿ ಮಾತನಾಡಿ, ವಿದ್ಯಾರ್ಥಿಗಳು ವೇಳಾಪಟ್ಟಿ ಹಾಕಿಕೊಂಡು ಅಧ್ಯಯನ ಮಾಡಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯನ್ನು ಪದವಿ ಹಂತದಲ್ಲಿಯೇ ಮಾಡಬೇಕೆಂದರು.
ಕಾರ್ಯಕ್ರಮದ ವೇದಿಕೆಯಲ್ಲಿ ದೈಹಿಕ ನಿರ್ದೇಶಕ ಪ್ರೊ.ಎಸ್.ಎಸ್.ಕೋರಿ, ಪ್ರಾಚಾರ್ಯ ಡಾ.ಎ.ವಿ.ಸೂರ್ಯವಂಶಿ, ನಿವೃತ್ತ ಪ್ರಾಧ್ಯಾಪಕ ಪ್ರೊ.ಪಿ.ಎಲ್.ಹಿರೇಮಠ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಸವರಾಜ ನಾಯ್ಕೋಡಿ, ವಿದ್ಯಾರ್ಥಿ ಒಕ್ಕೂಟದ ಕಾರ್ಯಾಧ್ಯಕ್ಷ ಪ್ರೊ.ದೀಪಾ ಲಗಳಿ, ಐಕ್ಯೂಎಸಿ ಸಂಯೋಜಕ ಪ್ರೊ.ದಿಲೀಪಕುಮಾರ, ವಿದ್ಯಾರ್ಥಿ ಪ್ರಧಾನ ಕಾರ್ಯದರ್ಶಿ ಸುನಂದಾ ಕೊಳಮೇಲಿ, ವಿದ್ಯಾರ್ಥಿ ಉಪಪ್ರಧಾನ ಕಾರ್ಯದರ್ಶಿ ಪ್ರಮಿಳಾ ಪವಾರ ಇತರರು ಇದ್ದರು.
ಇದೇ ಸಂದರ್ಭದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ದತ್ತಿನಿಧಿ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.
ಶೃತಿ ಗಾಯಕವಾಡ ಪ್ರಾರ್ಥಿಸಿದರು. ಪ್ರೊ.ದಿಲೀಪಕುಮಾರ ಸ್ವಾಗತಿಸಿದರು. ಎಂ.ಕೆ.ಯಾಧವ ನಿರೂಪಿಸಿದರು. ಪ್ರೊ.ಸಿ.ಪಿ.ಧಡೇಕರ ವಂದಿಸಿದರು.
Subscribe to Updates
Get the latest creative news from FooBar about art, design and business.
ವಿದ್ಯಾರ್ಥಿಗಳು ಪ್ರಬುದ್ಧ ನಾಗರಿಕರಾಗಬೇಕು :ಸಿದ್ದಲಿಂಗ ಶ್ರೀ
Related Posts
Add A Comment

