ಕೊಲ್ಹಾರ: ಬಸವನ ಬಾಗೇವಾಡಿ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿಯವರು ಏ.20 ಗುರುವಾರದಂದು ಬಸವನಬಾಗೇವಾಡಿ ತಹಶಿಲ್ದಾರ ಕಚೇರಿಯಲ್ಲಿ ಅಪಾರ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಶಂಕರಗೌಡ ಪಾಟೀಲ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಭಾನುವಾರ ಕೊಲ್ಹಾರ ಪಟ್ಟಣದ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಅಂದು ಬೆಳಿಗ್ಗೆ 11 ಕ್ಕೆ ಬಾಗೇವಾಡಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಪಾದಯಾತ್ರೆ ಮೂಲಕ ತಹಶಿಲ್ದಾರ ಕಚೇರಿವರೆಗೂ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಬಸವನ ಬಾಗೇವಾಡಿ, ಕೊಲ್ಹಾರ ಹಾಗೂ ನಿಡಗುಂದಿ ತಾಲ್ಲೂಕುಗಳ ಪಟ್ಟಣ ಹಾಗೂ ಗ್ರಾಮಗಳಿಂದ ಸುಮಾರು 10 ಸಾವಿರಕ್ಕೂ ಅಧಿಕ ಕಾರ್ಯಕರ್ತರು, ಬೆಂಬಲಿಗರು ಮತ್ತು ಅಭಿಮಾನಿಗಳು ಪಾದಯಾತ್ರೆಯಲ್ಲಿ ಭಾಗವಹಿಸಿ ಬೆಳ್ಳುಬ್ಬಿಯವರಿಗೆ ಬಹಿರಂಗ ಶಕ್ತಿ ತುಂಬಲಿದ್ದಾರೆ ಎಂದು ತಿಳಿಸಿದರು.
ಈ ವೇಳೆ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದ ಮಂಡಲ ಸಂಚಾಲಕ ಅರುಣ್ ನಾಯಕ್ ಮಾತನಾಡಿ, ಬೆಳ್ಳುಬ್ಬಿಯವರಿಗೆ ಬಿಜೆಪಿ ಟಿಕೆಟ್ ಘೋಷಿಸಿದ ಬೆನ್ನೆಲೆ ದಿನೇದಿನೇ ಮತಕ್ಷೇತ್ರದ ವಿವಿಧ ಹಳ್ಳಿಗಳಿಂದ ಸಾಗರೋಪಾದಿಯಲ್ಲಿ ಬೆಂಬಲಿಗರು, ಅಭಿಮಾನಿಗಳು ನಿವಾಸಕ್ಕೆ ಆಗಮಿಸಿ ಬೆಂಬಲ ವ್ಯಕ್ತಪಡಿಸುತ್ತಿರುವುದು ನಮ್ಮ ಅಭ್ಯರ್ಥಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಆನೆಬಲ ಬಂದಂತಾಗಿದೆ ಎಂದು ತಿಳಿಸಿದರು. ಈ ವೇಳೆ ಮಂಡಲ ಬಿಜೆಪಿ ರೈತ ಮೋರ್ಚಾ ಪ್ರ.ಕಾರ್ಯದರ್ಶಿ ಆನಂದ ಬಿಸ್ಟಗೊಂಡ ಇದ್ದರು.
Subscribe to Updates
Get the latest creative news from FooBar about art, design and business.
ಏ.20 ಕ್ಕೆ ಬಿಜೆಪಿ ಅಭ್ಯರ್ಥಿ ಬೆಳ್ಳುಬ್ಬಿ ನಾಮಪತ್ರ ಸಲ್ಲಿಕೆ
Related Posts
Add A Comment