ವಿಜಯಪುರ: ಆಗಸ್ಟ್ 15, 1947, ಅದೆಷ್ಟೋ ಕೆಚ್ಚೆದೆಯ ವೀರರು, ರಾಷ್ಟ್ರ ಪ್ರೇಮಿಗಳು, ಹೋರಾಟಗಾರರು ಕಂಡ ಕನಸು ನನಸಾದ ದಿನ. ಈ ದಿನಕ್ಕಾಗಿ ಅದೆಷ್ಟೋ ಮಂದಿ ಜೀವ ಕಳೆದುಕೊಂಡಿದ್ದಾರೆ. ಇವರೆಲ್ಲಾ ತಮ್ಮ ಬದುಕನ್ನೇ ತೇಯ್ದು ಸ್ವಾತಂತ್ರ್ಯದ ಕನಸನ್ನು ಕಂಡಿದ್ದರು. ಈ ಕನಸು ನನಸಾದ ಕ್ಷಣಕ್ಕೆ ಈಗ 78ನೇ ವರ್ಷ. ಇದು ಸ್ವಾತಂತ್ರ್ಯ ವೀರರನ್ನು ಗೌರವಿಸುವ, ಹೋರಾಟಗಾರರ ತ್ಯಾಗವನ್ನು ಸ್ಮರಿಸುವ, ದೇಶ ರಕ್ಷಣೆಗೆ ಕಟಿಬದ್ಧರಾಗಿರುವ ಪ್ರತಿಜ್ಞೆ ತೊಡುವ ಕ್ಷಣ. ಈ 78 ನೇ ಸ್ವಾತಂತ್ರೋತ್ಸವ ದಿನದ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುಕೆಜಿ ವಿದ್ಯಾರ್ಥಿನಿ ಶ್ರೀನಿಧಿ ಬಂಡೆ ಭಾಷಣ ಮಾಡುತ್ತಿರುವದು. ವೇದಿಕೆಯಲ್ಲಿ ಅನೇಕ ಅತಿಥಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

