ತಿಕೋಟಾ: ತಾಲೂಕಿನ ಹೊನವಾಡ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಅಮೃತ ಸರೋವರದಲ್ಲಿ ಹಮ್ಮಿಕೊಂಡ ಸ್ವಾತಂತ್ರ್ಯ ದಿನಾಚರಣೆಯಲ್ಲಿ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ ಅವರು ಮಾತನಾಡುತ್ತಾ, ನಮ್ಮ ದೇಶ ಸ್ವಾತಂತ್ರ್ಯ ಹೊಂದಲು ಹಲವಾರು ಮಹನೀಯರು ತಮ್ಮ ಜೀವನವನ್ನು ಬಲಿದಾನ ಮಾಡಿದ್ದಾರೆ.ಕೆಲವರು ತಮ್ಮ ಅಮೂಲ್ಯವಾದ ದಿನಗಳನ್ನು ದೇಶಕ್ಕಾಗಿ ಸೆರೆಮನೆಯಲ್ಲಿ ಕಳೆದಿದ್ದಾರೆ. ಅಂತಹ ಮಹಾನ ನಾಯಕರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಇಂದಿನ ಸಂಪತ್ತನ್ನು ಸಂರಕ್ಷಣೆ ಮಾಡಿ ಮುಂದಿನ ಪೀಳಿಗೆಗೆ ನೀಡುವುದು ಸಹ ನಮ್ಮ ಆದ್ಯ ಕರ್ತವ್ಯವಾಗಬೇಕು. ನಮ್ಮ ದೇಶದ ಜೊತೆಗೆ ಅನೇಕ ದೇಶಗಳು ಸ್ವಾತಂತ್ರ್ಯ ಪಡೆದುಕೊಂಡರೂ ಸಹಿತ ಬೇರೆ ಯಾವ ದೇಶವು ಭಾರತದಷ್ಟು ಅಭಿವೃದ್ಧಿ ಹೊಂದಿರುವುದಿಲ್ಲ. ವಿಶ್ವದ ಅತ್ಯಂತ ಬಲಿಷ್ಠ ಸಂವಿಧಾನ ಹೊಂದಿದ ನಮ್ಮ ಭಾರತ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೂಡಾ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟಿದೆ. ಅವುಗಳನ್ನು ಸದುಪಯೋಗ ಪಡಿಸಿಕೊಂಡು ನಾವೆಲ್ಲರೂ ಸಂವಿಧಾನದ ಆಶಯದಂತೆ ಬದುಕಬೇಕು. ಬಲಿದಾನಗೈದ ಮಹಾನ ನಾಯಕರು ಹಾಕಿ ಕೊಟ್ಟ ಆದರ್ಶ ಮಾರ್ಗದಲ್ಲಿ ನಡೆಯುವ ಮೂಲಕ ಭವ್ಯ ಭಾರತವನ್ನು ಇನ್ನಷ್ಟು ಉತ್ತುಂಗಕ್ಕೆ ತೆಗೆದುಕೊಂಡು ಹೋಗೋಣ ಎಂದು ಹೇಳಿದರು.
ಗ್ರಾಮ ಪಂಚಾಯತಿ ಅಧ್ಯಕ್ಷ ತುಕಾರಾಮದಡಕೆ ರಾಷ್ಟ್ರ ಧ್ವಜಾರೋಹಣ ನೇರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ಅಶ್ವಿನಿ ಗುಗ್ಗರಿ, ತಾಲೂಕು ಪಂಚಾಯತಿ ನರೇಗಾ ಸಹಾಯಕ ನಿರ್ದೇಶಕರು ಹಾಗೂ ಪಿಡಿಓ ಶೋಭಾ ಶಿಳೀನ, ತಾಂತ್ರಿಕ ಸಂಯೋಜಕರಾದ ನಾಗರಾಜ ಕಲಕೇರಿ, ಚಡಚಣ ತಾಲೂಕು ಐಇಸಿ ಸಂಯೋಜಕ ವಿನೋದ ಸಜ್ಜನ, ತಿಕೋಟಾ ತಾಲೂಕು ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ, ಕಾರ್ಯದರ್ಶಿ ಅಣ್ಣಪ್ಪ ಬಿದರಿ, ತಾಲೂಕು ಪಂಚಾಯತಿಯ ಸುನೀಲ ಬನಸೋಡೆ, ಶ್ರೀಧರ ಸಾವಳಗಿ, ಸಿದರಾಯ ದಾಶ್ಯಾಳ, ಗ್ರಾಮ ಪಂಚಾಯತಿಯ ಹೂವಣ್ಣ ಪೂಜೇರಿ, ಕವಿತಾ ಕೊಳೇಕರ, ಶಿವು ಪತ್ತಾರ ಸೇರಿದಂತೆ ತಾಲೂಕು ಪಂಚಾಯತಿಯ ಅಧಿಕಾರಿಗಳು, ಸಿಬ್ಬಂದಿಗಳು, ಗ್ರಾಮ ಪಂಚಾಯತಿ ಚುನಾಯಿತ ಸದಸ್ಯರು, ಶಾಲಾ ಶಿಕ್ಷಕರು,ಮಕ್ಕಳು, ಗ್ರಾಮಸ್ಥರು ಹಾಜರಿದ್ದರು.
Subscribe to Updates
Get the latest creative news from FooBar about art, design and business.
ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದವರನ್ನು ಸ್ಮರಿಸಿ: ಬಸವರಾಜ ಐನಾಪುರ
Related Posts
Add A Comment

