ವಿಜಯಪುರ: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದಾಗಿ ನಮಗೆ ಸ್ವಾತಂತ್ರ್ಯ ಬಂದಿದ್ದು, ಅವರ ತತ್ವಾದರ್ಶಗಳು ನಮಗೆಲ್ಲರಿಗೂ ಪ್ರೇರಣೆಯಾಗಿವೆ ಎಂದು ಕರ್ನಲ್ ಸಂಗಪ್ಪ ಎಚ್. ವಿ. ಹೇಳಿದ್ದಾರೆ.
ಗುರುವಾರ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೋಂಡು ಅವರು ಮಾತನಾಡಿದರು.
ದೇಶಕ್ಕೆ ಸ್ವಾತಂತ್ತ್ರ್ಯ ದೊರಕಲು ನಮ್ಮ ಹಿರಿಯರು ಜೀವದ ಹಂಗು ತೊರೆದು ಹೋರಾಡಿದ್ದಾರೆ. ಅಂದು ಅವರು ನಡೆಸಿದ ಹೋರಾಟದ ಫಲವಾಗಿ ಭಾರತ ಇಂದು ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಸುಮಾರು 500 ವಿದ್ಯಾರ್ಥಿಗಳು ಭಾರತ ನಕ್ಷೆಯ ರೂಪದಲ್ಲಿ ನಿಂತುಕೊಂಡ ದೃಶ್ಯ ರೋಮಾಂಚನ ಗೊಳಿಸಿತು. ಮಕ್ಕಳು ನಡೆಸಿಕೊಟ್ಟ ಸ್ವಾತಂತ್ರ್ಯ ಹೋರಾಟ ಮತ್ತು ದೇಶಭಕ್ತಿ ರೂಪಕಗಳು ಗಮನ ಸೆಳೆದವು. ಬ್ರಿಟೀಷರ ವಿರುದ್ಧ ಹೋರಾಡಿದ ಹಲಗಲಿಯ ಬೇಡರು, ನರಗುಂದ ರೈತರ ಬಂಡಾಯ ಘಟನೆಗಳಾಧಾರಿತ ರೂಪಕಗಳು ಮನಸೂರೆಗೊಂಡವು. ನರ್ಸರಿ ಮತ್ತು ಎಲ್. ಕೆ.ಜಿ, ಯುಕೆಜಿ ಮಕ್ಕಳು ಸ್ವಾತಂತ್ರ ಹೋರಾಟಗಾರರ ವೇಷ ಭೂಷಣ ತೊಟ್ಟು ಗಮನ ಸೆಳೆದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಿನ್ಸಿಪಾಲ ಶೈಜು ನಾಯರ ಸೇರಿದಂತೆ ಶಾಲೆಯ ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಸ್ವಾತಂತ್ರ್ಯ ಹೋರಾಟಗಾರರ ತತ್ವಾದರ್ಶ ನಮಗೆ ಪ್ರೇರಣೆ :ಕರ್ನಲ್ ಸಂಗಪ್ಪ
Related Posts
Add A Comment

