ಬಸವನಬಾಗೇವಾಡಿ: ವಿದ್ಯಾರ್ಥಿಗಳು ಕ್ರಿಯಾಶೀಲರಾದರೆ ಮಾತ್ರ ಸ್ಪರ್ಧಾ ಜಗತ್ತನ್ನು ಧೈರ್ಯವಾಗಿ ಎದುರಿಸಬಹುದು ಎಂದು ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಕುಲ ಸಚಿವ ಶಂಕರಗೌಡ ಸೋಮನಾಳ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಾಂಸ್ಕ್ರತಿಕ, ಕ್ರೀಡೆ, ಎನ್ಎಸ್ಎಸ್ ಹಾಗೂ ವಿವಿಧ ಘಟಕಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಪದವಿ ಹಂತದಲ್ಲಿಯೇ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿತುಕೊಂಡು ಅಗತ್ಯ ಸಿದ್ಧತೆ ಮಾಡಿಕೊಂಡರೆ ಖಂಡಿತ ಅವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಪಡೆದುಕೊಳ್ಳಬಹುದು. ಭಾರತೀಯ ಆಡಳಿತ ಸೇವೆಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ಹೇಗೆ ಎದುರಿಸಬಹದು. ಅದರ ಸಿದ್ಧತೆ ಹೇಗೆ ಮಾಡಿಕೊಳ್ಳಬಹುದು ಎಂಬುವದರ ಮಾಹಿತಿ ನೀಡಿದರು.
ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪದವಿ ಶಿಕ್ಷಣಕ್ಕೆ ಸಿಮೀತಗೊಳಿಸದೇ ಉನ್ನತ ಶಿಕ್ಷಣವನ್ನು ಪಡೆಯಲು ಮುಂದಾಗಬೇಕು. ಉನ್ನತ ಶಿಕ್ಷಣವನ್ನು ಪಡೆದುಕೊಂಡು ಉನ್ನತ ಸ್ಥಾನಮಾನ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.
ಸಾಹಿತಿ ಶಂಕರ ಬೈಚಬಾಳ ಮಾತನಾಡಿ, ವಿಜಯಪುರ ಜಿಲ್ಲೆಯ ಇತಿಹಾಸ ಸ್ವತಂತ್ರ ಹೋರಾಟಗಾರರ ಕುರಿತು ಮಾಹಿತಿ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ನೀಲಪ್ಪ ಹೊಸಮನಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಾಂಸ್ಕ್ರತಿಕ ಸಮಿತಿಯ ಸಂಚಾಲಕ ಲೀಲಾವತಿ, ರೇಣುಕಾ ಅಂಬಲಿ, ಡಾ.ಅನಂತಪದ್ಮನಾಭ, ಡಾ.ಬಾನು ನಿಡಗುಂದಿ, ಡಾ.ಪ್ರಶಾಂತ ನಾಯಕ ಟಿ.ಆರ್., ವಿಜಯಲಕ್ಷ್ಮೀ ಮಮತಾ ಎನ್. ಇತರರು ಇದ್ದರು. ಮಹಾದೇವಪ್ಪ ವಡ್ಡೋಡಗಿ ಸ್ವಾಗತಿಸಿದರು. ಲಕ್ಷ್ಮಣ ವಾಲೀಕಾರ ನಿರೂಪಿಸಿ, ವಂದಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಸಾಂಸ್ಕ್ರತಿಕ, ಕ್ರೀಡೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ, ೨೦೨೩-೨೪ ನೇ ಸಾಲಿನಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ವಿತರಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳು ಜರುಗಿದವು.
Subscribe to Updates
Get the latest creative news from FooBar about art, design and business.
Related Posts
Add A Comment

