ವಿಜಯಪುರ: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ವಿಷಯವಾರು ರಸಪ್ರಶ್ನೆ ಸ್ಪರ್ಧೆ ಸೇರಿದಂತೆ ಪಠ್ಯ ಚಟುವಟಿಕೆಗಳಿಗೆ ಪೂರಕವಾಗುವ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಜ್ಞಾನದ ಮಟ್ಟ ವೃದ್ಧಿಸುತ್ತದೆ ಎಂದು ಬಂಜಾರಾ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಇ ಡಿ ಲಮಾಣಿ ಹೇಳಿದರು.
ಶನಿವಾರದಂದು ಬಂಜಾರಾ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ‘ರಸಪ್ರಶ್ನೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು. ಪ್ರತಿ ಶನಿವಾರಕ್ಕೊಮ್ಮೆ ಇಂಥ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಹೆಚ್ಚಿನ ಫಲಿತಾಂಶವನ್ನು ಇದರಿಂದ ನಿರೀಕ್ಷಿಸಬಹುದು. ಶಿಕ್ಷಕರು ಪ್ರತಿಯೊಂದು ಮಗುವಿನ ವೈಯಕ್ತಿಕವಾಗಿ ಜ್ಞಾನದ ಮಟ್ಟವನ್ನು ಅರಿತು ಬೋಧನಾ ಕ್ರಮದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳು, ವಿಷಯವಾರು ರಸಪ್ರಶ್ನೆ ಕಾರ್ಯಕ್ರಮಗಳು, ಮುಂತಾದ ಪಠ್ಯೇತರ ಚಟುವಟಿಕೆಗಳನ್ನು ಏರ್ಪಡಿಸುವ ಮೂಲಕ ಮಕ್ಕಳು ಭಯ ಭೀತರಾಗದೆ ಸಂತೋಷವಾಗಿ ಪರೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲಾಗುತ್ತಿದೆ ಎಂದರು.
ಎಸ್ ವಿ ದೇಶಪಾಂಡೆ ಮಾತನಾಡಿ, ಶಾಲೆಯ ಒಟ್ಟು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಿಭಾಗಿಸಿ, ಎಲ್ಲಾ ಶಿಕ್ಷಕರಿಗೂ ಇಂತಿಷ್ಟು ವಿದ್ಯಾರ್ಥಿಗಳೆಂದು ದತ್ತು ನೀಡುವ ವ್ಯವಸ್ಥೆ ಜಾರಿಗೊಳಿಸಿ, ಆಯಾ ಶಿಕ್ಷಕರು ಅವರ ಶೈಕ್ಷಣಿಕ ಪ್ರಗತಿ ಬಗ್ಗೆ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದು, ಇದೇ ರೀತಿ ಚೆನ್ನಾಗಿ ಓದುವ ವಿದ್ಯಾರ್ಥಿಗಳ ಜತೆ ಸಾಧಾರಣಾ ಮತ್ತು ಹಿಂದುಳಿದ ವಿದ್ಯಾರ್ಥಿಗಳ ಜತೆ ಓದಲು ಬಿಡಬೇಕು. ಇದರಿಂದಾಗಿ ಸಾಧಾರಣ ವಿದ್ಯಾರ್ಥಿಗಳು ಉತ್ತಮವಾಗಿ, ಹಿಂದುಳಿದ ವಿದ್ಯಾರ್ಥಿಗಳು ಪಾಸಿಂಗ್ ವಿದ್ಯಾರ್ಥಿಯಾಗಲು ಸಹಕಾರಿಯಾಗುತ್ತದೆ. ಇವೆಲ್ಲವೂ ಶಿಕ್ಷಕರ ಮಾರ್ಗದರ್ಶನದಲ್ಲಿಯೇ ನಡೆಯುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಎ ಎಂ ನಾಗೊಂಡ, ಜೆ ಕೆ ರಾಠೋಡ, ಎಸ್ ಡಿ ಚವ್ಹಾಣ್, ಎಸ್ ಬಿ ಒಡೆಯರ, ಆರ್ ಎನ್ ಬಕಾಟೆ, ಆರ್ ವಿ ಭುಜಂಗನವರ, ಎಸ್ ಕೆ ಶಿಂಧೆ, ಬಿ ಎಸ್ ದ್ಯಾಬೇರಿ, ಎಸ್ ಎಂ ಮಾಳಿ, ಆರ್ ಎಸ್ ಹಿರೇಮಠ, ಪಿ ಎಸ್ ಕೌಲಗಿ, ಎಸ್ ಎಲ್ ದೊಡಮನಿ ಸೇರಿದಂತೆ ಶಾಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ವಿದ್ಯಾರ್ಥಿಗಳ ಜ್ಞಾನ ವೃದ್ಧಿಗೆ ರಸಪ್ರಶ್ನೆ ಸಹಕಾರಿ:ಇ ಡಿ ಲಮಾಣಿ
Related Posts
Add A Comment

