ವಿಜಯಪುರ:ನಗರದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವಿಜಯಪುರ ಹಾಗೂ ಅಲ್ ಹಸ್ನಾತ ಪದವಿ ಪೂರ್ವ ಕಾಲೇಜು ವಿಜಯಪುರ ಸಂಯುಕ್ತ ಆಶ್ರಯದಲ್ಲಿ ನಡೆದ ೨೦೨೪-೨೫ ನೇ ಸಾಲಿನ ವಿಜಯಪುರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಪ್ರಾಚಾರ್ಯ ಎಲ್ ಆರ್ ಹಳ್ಳದಮನಿ ಉದ್ಘಾಟಿಸಿ ಮಾತನಾಡಿ, ಕ್ರೀಡೆ ಮಕ್ಕಳ ಮನಸ್ಸಿಗೆ ಮುದ ನೀಡುತ್ತದೆ. ವಿದ್ಯಾರ್ಥಿಗಳನ್ನು ದೈಹಿಕ ಹಾಗೂ ಮಾನಸಿಕವಾಗಿ ವಿಶಾಲಗೊಳಿಸುತ್ತದೆ ಎಂದು ಹೇಳಿದರು.
ಮಕ್ಕಳ ಮನಸ್ಸು ಕಲಿಕೆಯತ್ತ ಸಾಗಿಸಲು ದೈಹಿಕ ಶಿಕ್ಷಣದ ಅವಶ್ಯಕತೆ ಇದೆ. ಮಕ್ಕಳು ದೈನಂದಿನ ಕೆಲಸ ಕಾರ್ಯಗಳ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸಿ ಎಂದು ಅಲ್ ಹಸ್ನಾತ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎ ಎ ಬಿಜಾಪುರ ಹೇಳಿದರು.
ಅಲ್ ಹಸ್ನಾತ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ ಡಿ ರೂಗಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಎ ಎ ಶಟಗಾರ, ಉಪನ್ಯಾಸಕರಾದ ಬಿ ಎಸ್ ಗೌರಿ, ಕ್ರೀಡಾ ಸಂಯೋಜಕ ಎಸ್ ಆರ್ ಮುತ್ತಗಿ, ಗಣೇಶ ಗುನ್ನಾಪೂರ, ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಸ್ ಎಸ್ ಹರಿಯಾಲ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಎಂ ಬಿ ಅವಟಿ, ಕ್ರೀಡಾ ಸಂಘಟನಾ ಕಾರ್ಯದರ್ಶಿ ಆಬೀದ ಬಾಗವಾನ, ದೈಹಿಕ ಶಿಕ್ಷಕ ಡಾ ಮೊಹ್ಮದ ಸಲೀಂ ಮಕಾನದಾರ, ನಿವೃತ್ತ ಮುಖ್ಯ ಶಿಕ್ಷಕ ಎ ಜೆ ಜಮಾದಾರ, ನಿವೃತ್ತ ಶಿಕ್ಷಕ ಎ ಎಚ್ ಬಾಗವಾನ, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಕ್ರೀಡಾಪಟುಗಳು ಉಪಸ್ಥಿತರಿದ್ದರು.
ಡಾ ಎಸ್ ಸಿ ಮುಲ್ಲಾ ನಿರೂಪಿಸಿದರು. ಫೀರದೋಸ ಮಣಿಯಾರ ಸ್ವಾಗತಿಸಿದರು. ರಿಜ್ವಾನಾ ಚೌಧರಿ ವಂದಿಸಿದರು.
ಇದೇ ಸಂದರ್ಭದಲ್ಲಿ ವಿಜಯಪುರ ತಾಲೂಕಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಬಾಲಕರ ವಿಭಾಗದಲ್ಲಿ ಎಸ್ ಎಸ್ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮಸ್ಥಾನ ಹಾಗೂ ಕೋನಿಕಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು.
ಇದೇ ಸಂದರ್ಭದಲ್ಲಿ ವಿಜಯಪುರ ತಾಲೂಕಾ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಬಾಲಕಿಯರ ವಿಭಾಗದಲ್ಲಿ ಎಸ್.ಎಸ್.ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಹಾಗೂ ಲೋಯೋಲಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು. ಇದೇ ಸಂದರ್ಭದಲ್ಲಿ ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮಕ್ಕೂ ಮುನ್ನ ಅಲ್ ಹಸ್ನಾತ ಪದವಿ ಪೂರ್ವ ಕಾಲೇಜನ ವಿದ್ಯಾರ್ಥಿನಿಯರಾದ ಮದಿಯಾ ಅರಬ, ಅನಿಸಾ ಅನಾಸೂರ ಪ್ರಾರ್ಥಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

