ಕೆಂಭಾವಿ: ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ ಶನಿವಾರ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲು ಆಗಮಿಸಿದ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳು ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು ಶರಣಬಸಪ್ಪಗೌಡ ದರ್ಶನಪುರವರನ್ನು ವಲಯ ಕಸಾಪದ ನೂತನ ಅಧ್ಯಕ್ಷ ಮಡಿವಾಳಪ್ಪಗೌಡ ಪಾಟೀಲ್ ಹೆಗ್ಗನದೊಡ್ಡಿ ಹಾಗೂ ಪದಾಧಿಕಾರಿಗಳು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.
ಇದೇ ವೇಳೆ ಮಾತನಾಡಿದ ಸಚಿವರು ವಲಯ ಸೇರಿದಂತೆ ತಾಲೂಕು, ಜಿಲ್ಲಾ ಮಟ್ಟದ ಸಾಹಿತಿಕ ಚಟುವಟಿಕೆಗಳು ನಿರಂತರವಾಗಿ ಸಾಗಲಿ ಎಂದವರು, ನಾಡು ನುಡಿ ಸಂರಕ್ಷಣೆಗೆ ಸರ್ಕಾರ ಸದಾ ಸಿದ್ಧವಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಖಾಸಗಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಜಾರಿಗೊಳಿಸಲು ಮುಂದಾಗಿದೆ ಎಂದು ತಿಳಿಸಿದರು.
ಪ್ರಮುಖರಾದ ಮಾಜಿ ಜಿಪಂ ಉಪಾಧ್ಯಕ್ಷೆ ಶಂಕ್ರಣ್ಣ ವಣಿಕ್ಯಾಳ, ಸುಮಿತ್ರಪ್ಪ ಅಂಗಡಿ, ಹಿರಿಯ ಪತ್ರಕರ್ತ ಸಂಜೀವರಾವ್ ಕುಲ್ಕರ್ಣಿ, ಶಿವರಾಜ ಬುದೂರು, ಗುಂಡಭಟ್ಟ ಜೋಶಿ, ಪವನ ಕುಲ್ಕರ್ಣಿ, ಡಿ ಸಿ ಪಾಟೀಲ್, ರಂಗಪ್ಪ ವಡ್ಡರ್, ಸೂಗುರಯ್ಯ ಇಂಡಿ, ಬಿ ಗುಡಿ ಕಸಾಪ ಅಧ್ಯಕ್ಷ ಶರಣಬಸವ ಬಿರಾದಾರ, ತಿಪ್ಪಣ್ಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

