Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಶಾ ಕಾರ್ಯಕರ್ತೆಯರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲಿ :ಡಾ.ಮಾಗಿ
(ರಾಜ್ಯ ) ಜಿಲ್ಲೆ

ಆಶಾ ಕಾರ್ಯಕರ್ತೆಯರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲಿ :ಡಾ.ಮಾಗಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿಯಲ್ಲಿ ಆಶಾ ಕಾರ್ಯಕರ್ತೆಯರ ತಾಲೂಕು ಸಮ್ಮೇಳನ ಉದ್ಘಾಟನೆ

ಸಿಂದಗಿ: ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಜನರಿಗೆ ತಲುಪಿಸಬೇಕಿದೆ, ಹೀಗಾಗಿ ನಮ್ಮ ಆಶಾ ಕಾರ್ಯಕರ್ತೆಯರು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ನಿಮ್ಮ ಬೇಡಿಕೆಗಳು ಬೇಗ ಈಡೇರಲಿ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಎ.ಎ.ಮಾಗಿ ಹೇಳಿದರು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಸೋಮವಾರ ನಡೆದ ಆಶಾ ಕಾರ್ಯಕರ್ತೆಯರ ತಾಲೂಕು ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರ ಸೇವೆ ಇನ್ನಷ್ಟು ಉತ್ತಮವಾಗಿ ಜನರಿಗೆ ತಲುಪಲು ಸಹಕಾರಿಯಾಗಲಿ ಎಂದರು.
ಈ ವೇಳೆ ಎಐಯುಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ಟಿ.ಮಲ್ಲಿಕಾರ್ಜುನ ಮಾತನಾಡಿ, ಆಶಾ ಕಾರ್ಯಕರ್ತೆಯರು ಯಾವುದೋ ಪಿಎಚ್‌ಸಿಯ ಆಧಾರ ಸ್ಥಂಭವಾಗದೇ ಅವರು ಇಡೀ ರಾಜ್ಯದ ಆರೋಗ್ಯ ಇಲಾಖೆಯ ಆಧಾರ ಸ್ತಂಭವಾಗಿದ್ದಾರೆ. ಕರೋನಾ ಸಂದರ್ಭದಲ್ಲಿ ತಮ್ಮ ಪ್ರಾಣವನೊತ್ತೆಯಿಟ್ಟು ಸೇವೆ ಸಲ್ಲಿಸಿದ್ದಾರೆ, ಅಲ್ಲದೇ ಆಶಾ ಕಾರ್ಯಕರ್ತೆಯರು ಬಂದ ಮೇಲೆ ಸಮಾಜದಲ್ಲಿ ನವಜಾತ ಶಿಶುಗಳ ಮತ್ತು ತಾಯಂದಿರ ಸಾವು ಗಣನೀಯ ಇಳಿಕೆ ಕಂಡು ಬಂದಿದೆ ಎಂದು ವಿಶ್ವ ಸಂಸ್ಥೆಯೇ ಹೇಳಿದೆ. ಆದರೆ ಆಶಾ ಕಾರ್ಯಕರ್ತೆಯರಿಗೆ ನಮ್ಮ ಸರಕಾರಗಳು ಸೂಕ್ತ ಸಂಬಳ ನೀಡುತ್ತಿಲ್ಲ. ಇದುವರೆಗೆ ಅಧಿಕಾರಕ್ಕೆ ಬಂದಿದ್ದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಕಾರ್ಮಿಕರಿಗೆ ದ್ರೋಹ ಬಗೆಯುತ್ತಲೇ ಬಂದಿವೆ. ಯಾವ ಸರಕಾರಗಳು ಸಹ ಇಂದು ಕಾರ್ಮಿಕರ ಹಿತಾಸಕ್ತಿ ಕಾಪಾಡುತ್ತಿಲ್ಲ. ಹಾಗಾಗಿ ನಮಗೆಲ್ಲಾ ಉಳಿದಿರುವುದು ಹೋರಾಟದ ದಾರಿ ಒಂದೇ ಎಂದರು.
ಇದೇ ಸಂದರ್ಭದಲ್ಲಿ ಸಮ್ಮೇಳನದ ಅಧ್ಯಕ್ಷತೆಯನ್ನು ತಾಲೂಕಾಧ್ಯಕ್ಷೆ ರೇಣುಕಾ ಕಲಕುಟಗೇರ ವಹಿಸಿದ್ದರು. ಸಮ್ಮೇಳನದ ಆರಂಭದಲ್ಲಿ ಎ.ಐ.ಯು.ಟಿ.ಯು.ಸಿ.ಯ ಸಂಸ್ಥಾಪನಾಧ್ಯಕ್ಷ ಕಾಮ್ರೇಡ್ ಶಿವದಾಸ್ ಘೋಷ್‌ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು. ಮತ್ತು ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಸಮ್ಮೇಳನದ ಕೊನೆಯಲ್ಲಿ ನೂತನ ತಾಲೂಕು ಸಮಿತಿ ರಚನೆಯಾಯಿತು. ಅಧ್ಯಕ್ಷರನ್ನಾಗಿ ಜ್ಯೋತಿ ಶಾಬಾದಿ, ಉಪಾದ್ಯಕ್ಷರನ್ನಾಗಿ ಮಹಾನಂದ, ನಾಗಮ್ಮ, ಜಗದೇವಿ, ರೇಣುಕಾ ಹೊಸಮನಿ, ಯಮನವ್ವ. ಕಾರ್ಯದರ್ಶಿಯಾಗಿ ಮೈರುನ್ನಿಸಾ ಜಂಟಿ ಕಾರ್ಯದರ್ಶಿ ರೂಪಾ ಅಲಮೇಲ, ಅಂಬುಬಾಯಿ, ಅನಸುಬಾಯಿ ರೇಣುಕಾ ಕನ್ನೋಳ್ಳಿ ಹಾಗು ಸಮಿತಿಯ ಸದಸ್ಯರುಗಳಾಗಿ ತುಳಸಿ, ಕವಿತಾ, ಲಕ್ಮೀ, ವಿಜಯಲಕ್ಷ್ಮೀ, ಮಹಾದೇವಿ, ಸರಸ್ವತಿ, ಕನ್ಯಾಕುಮಾರಿ ಫಾತಿಮಾ ಶೆಖ್ , ಶೋಭಾ,ಬಸಮ್ಮ, ಸುನಂದ, ಬೋರಮ್ಮ, ರೇಣುಕಾ, ಭಾರತಿ, ನಾಗರತ್ನ, ಮಲ್ಲಮ್ಮ, ಶಂಕ್ರಮ್ಮ ಆಯ್ಕೆಯಾದರು.
ಕಾರ್ಯಕ್ರಮದಲ್ಲಿ ಆಶಾ ಸಂಘಟನೆಯ ಜಿಲ್ಲಾ ಮುಖಂಡ ಹೆಚ್.ಟಿ.ಭರತಕುಮಾರ ಸೇರಿದಂತೆ ಅನೇಕರಿದ್ದರು.

” ಶ್ರೀಮಂತರು ಶ್ರೀಮಂತರಾಗುವ ಮತ್ತು ಬಡವರು ಬಡವರಾಗುವ ಈ ವ್ಯವಸ್ಥೆ ಬದಲಾಗಬೇಕು. ಬಂಡವಾಳಶಾಹಿಗಳ ಅಟ್ಟಹಾಸ ನಿಲ್ಲಿಸಬೇಕು. ನಮ್ಮ ಹೋರಾಟಗಳು ಸಾಮಾಜದಲ್ಲಿನ ಮೂಲಭೂತ ಬದಲಾವಣೆಗೆ ಪೂರಕವಾಗಲಿ, ಕಾರ್ಮಿಕರ ಹಿತ ಕಾಪಾಡುವ ರಾಜ್ಯ ಸ್ಥಾಪನೆಯಾಗಲಿ, ಕೇವಲ ಪ್ರಶಂಸೆಗೆ ಮರುಳಾಗದೇ ಒಂದಾಗಿ ಹೋರಾಡಿ ಬೇಡಿಕೆ ಈಡೇರಿಸಿಕೊಳ್ಳಬೇಕಿದೆ.”

– ಎಚ್.ಜಿ.ಮಲ್ಲಿಕಾರ್ಜುನ, ಜಿಲ್ಲಾಧ್ಯಕ್ಷರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.