ಬಸವನಬಾಗೇವಾಡಿ: ಪಟ್ಟಣದ ಗಂಗಾಧರ ಲೇಔಟ್ನಲ್ಲಿರುವ ಡಿ.ದೇವರಾಜ ಅರಸು ಭವನದಲ್ಲಿ ತಾಲೂಕಾಡಳಿತ, ತಾಲೂಕು ಪಂಚಾಯತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಆ.೨೦ ರಂದು ಬೆಳಗ್ಗೆ ೧೧ ಗಂಟೆಗೆ ಹಿಂದುಳಿದ ವರ್ಗಗಳ ಭಾಗ್ಯ ಜ್ಯೋತಿ, ರಾಜ್ಯ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸುರವ ೧೦೯ ನೇ ಜನ್ಮದಿನಾಚರಣೆಯ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಸಚಿವ ಶಿವಾನಂದ ಪಾಟೀಲ ವಹಿಸುವರು. ಮುಖ್ಯಅತಿಥಿಗಳಾಗಿ ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತ ಅಧ್ಯಕ್ಷ, ಶಾಸಕ ಅಪ್ಪಾಜಿ ನಾಡಗೌಡ, ಸಂಸದ ರಮೇಶ ಜಿಗಜಿಣಗಿ, ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ಶಾಸಕ ಭೀಮನಗೌಡ (ರಾಜುಗೌಡ) ಪಾಟೀಲ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಆಗಮಿಸುವರು. ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಉಪನ್ಯಾಸಕಿ ವಿಜಯಲಕ್ಷ್ಮೀ ಉಪನ್ಯಾಸ ನೀಡುವರು ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ವ್ಹಿ.ನಿಂಬಾಳ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
